AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಹೊಸ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ, ವಿಶ್ವಹಿಂದೂ ಪರಿಷತ್ ಆಕ್ರೋಶ

ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ ನೀಡುವ ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ವಿಶ್ವಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.

ಮಂಗಳೂರಿನ ಹೊಸ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ, ವಿಶ್ವಹಿಂದೂ ಪರಿಷತ್ ಆಕ್ರೋಶ
ನಿರ್ಮಾಣ ಹಂತದಲ್ಲಿರುವ ಹೊಸ ಸೆಂಟ್ರಲ್ ಮಾರುಕಟ್ಟೆ
Follow us
TV9 Web
| Updated By: ಆಯೇಷಾ ಬಾನು

Updated on:Nov 06, 2022 | 10:04 AM

ಮಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಆದ್ರೆ ಈಗ ಅದೇ ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಫ್ ಸ್ಟಾಲ್(Beef Stall) ತೆರೆಯುವ ಯೋಜನೆ ಕೈಗೊಳ್ಳಲಾಗಿದೆ. ಸ್ಮಾರ್ಟ್​ ಸಿಟಿ ವತಿಯಿಂದ(Smart City Project) ಸುಸಜ್ಜಿತವಾಗಿ ನಿರ್ಮಾಣಗೊಳ್ಳಲಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ ನೀಡುವ ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ವಿಶ್ವಹಿಂದೂ ಪರಿಷತ್(Vishwa Hindu Parishad) ಆಕ್ರೋಶ ಹೊರ ಹಾಕಿದೆ.

114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರೀಡಿ ನಕಾಶೆಯಲ್ಲಿ 9 ಬೀಫ್ ಸ್ಟಾಲ್ ಗಳ ಬಗ್ಗೆ ಉಲ್ಲೇಖಿಸಿ ಮ್ಯಾಪ್ ರೆಡಿ ಮಾಡಲಾಗಿದೆ. ನೂತನ ಸೆಂಟ್ರಲ್ ‌ಮಾರ್ಕೆಟ್ ಕಟ್ಟಡ 18 ತಿಂಗಳಲ್ಲಿ ‌ನಿರ್ಮಾಣಗೊಳ್ಳಲಿದೆ. ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಇದನ್ನು ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡ ನಿರ್ಮಾಣಗೊಂಡ ನಂತರ ಮಂಗಳೂರು ಪಾಲಿಕೆಯಿಂದಲೇ ಸ್ಟಾಲ್ ಗಳ ಏಲಂ. ಪ್ರಸ್ತಾವಿತ ಯೋಜನೆಯಲ್ಲಿ ಬೀಫ್ ಸ್ಟಾಲ್ ಗೆ ಅವಕಾಶ ಕೊಟ್ಟಿದ್ದಕ್ಕೆ ವಿಶ್ವಹಿಂದೂ ಪರಿಷತ್ ಕಿಡಿಕಾರಿದೆ.

ಇದನ್ನೂ ಓದಿ: ಪ್ರೀತಿ ನಿರಾಕರಿಸಿದಕ್ಕೆ ಹೆಗ್ಗನಹಳ್ಳಿಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ನಾಗನಿಗೆ ವಿಧಿ ಶಿಕ್ಷೆ: ಕಾಲಲ್ಲಿ ಗ್ಯಾಂಗ್ರೀನ್​ ಲಕ್ಷಣ

ತರಕಾರಿ, ಕೋಳಿ ಅಂಗಡಿಗಳ ಜೊತೆಗೆ ಬೀಫ್ ಸ್ಟಾಲ್ ಗೆ ಅವಕಾಶ ಅಂತ ಆಕ್ರೋಶ ಹೊರ ಹಾಕಿದೆ. ಗೋ ಹತ್ಯೆ ನಿಷೇಧ ಕಾಯ್ದೆ ಬಳಿಕವೂ ಬಿಜೆಪಿಯಿಂದ ಬೀಫ್ ಸ್ಟಾಲ್ ಗೆ ಅವಕಾಶಕ್ಕೆ ಕೆಂಡಾಮಂಡಲವಾಗಿದೆ. ದ‌.ಕ ಜಿಲ್ಲೆಯಲ್ಲಿ 9 ಬೀಫ್ ಸ್ಟಾಲ್ ಗೆ ಅವಕಾಶ ಸರಿಯಲ್ಲ. ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಮಂಡಳಿ ತಕ್ಷಣ ಈ ಯೋಜನೆ ಕೈ ಬಿಡಬೇಕು. ಕೈ ಬಿಡದೇ ಇದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿಎಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಎಚ್ಚರಿಕೆ ನೀಡಿದ್ದಾರೆ.

Published On - 10:02 am, Sun, 6 November 22

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ