Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಹೊಸ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ, ವಿಶ್ವಹಿಂದೂ ಪರಿಷತ್ ಆಕ್ರೋಶ

ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ ನೀಡುವ ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ವಿಶ್ವಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.

ಮಂಗಳೂರಿನ ಹೊಸ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ, ವಿಶ್ವಹಿಂದೂ ಪರಿಷತ್ ಆಕ್ರೋಶ
ನಿರ್ಮಾಣ ಹಂತದಲ್ಲಿರುವ ಹೊಸ ಸೆಂಟ್ರಲ್ ಮಾರುಕಟ್ಟೆ
Follow us
TV9 Web
| Updated By: ಆಯೇಷಾ ಬಾನು

Updated on:Nov 06, 2022 | 10:04 AM

ಮಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಆದ್ರೆ ಈಗ ಅದೇ ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಫ್ ಸ್ಟಾಲ್(Beef Stall) ತೆರೆಯುವ ಯೋಜನೆ ಕೈಗೊಳ್ಳಲಾಗಿದೆ. ಸ್ಮಾರ್ಟ್​ ಸಿಟಿ ವತಿಯಿಂದ(Smart City Project) ಸುಸಜ್ಜಿತವಾಗಿ ನಿರ್ಮಾಣಗೊಳ್ಳಲಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ ನೀಡುವ ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ವಿಶ್ವಹಿಂದೂ ಪರಿಷತ್(Vishwa Hindu Parishad) ಆಕ್ರೋಶ ಹೊರ ಹಾಕಿದೆ.

114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರೀಡಿ ನಕಾಶೆಯಲ್ಲಿ 9 ಬೀಫ್ ಸ್ಟಾಲ್ ಗಳ ಬಗ್ಗೆ ಉಲ್ಲೇಖಿಸಿ ಮ್ಯಾಪ್ ರೆಡಿ ಮಾಡಲಾಗಿದೆ. ನೂತನ ಸೆಂಟ್ರಲ್ ‌ಮಾರ್ಕೆಟ್ ಕಟ್ಟಡ 18 ತಿಂಗಳಲ್ಲಿ ‌ನಿರ್ಮಾಣಗೊಳ್ಳಲಿದೆ. ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಇದನ್ನು ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡ ನಿರ್ಮಾಣಗೊಂಡ ನಂತರ ಮಂಗಳೂರು ಪಾಲಿಕೆಯಿಂದಲೇ ಸ್ಟಾಲ್ ಗಳ ಏಲಂ. ಪ್ರಸ್ತಾವಿತ ಯೋಜನೆಯಲ್ಲಿ ಬೀಫ್ ಸ್ಟಾಲ್ ಗೆ ಅವಕಾಶ ಕೊಟ್ಟಿದ್ದಕ್ಕೆ ವಿಶ್ವಹಿಂದೂ ಪರಿಷತ್ ಕಿಡಿಕಾರಿದೆ.

ಇದನ್ನೂ ಓದಿ: ಪ್ರೀತಿ ನಿರಾಕರಿಸಿದಕ್ಕೆ ಹೆಗ್ಗನಹಳ್ಳಿಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ನಾಗನಿಗೆ ವಿಧಿ ಶಿಕ್ಷೆ: ಕಾಲಲ್ಲಿ ಗ್ಯಾಂಗ್ರೀನ್​ ಲಕ್ಷಣ

ತರಕಾರಿ, ಕೋಳಿ ಅಂಗಡಿಗಳ ಜೊತೆಗೆ ಬೀಫ್ ಸ್ಟಾಲ್ ಗೆ ಅವಕಾಶ ಅಂತ ಆಕ್ರೋಶ ಹೊರ ಹಾಕಿದೆ. ಗೋ ಹತ್ಯೆ ನಿಷೇಧ ಕಾಯ್ದೆ ಬಳಿಕವೂ ಬಿಜೆಪಿಯಿಂದ ಬೀಫ್ ಸ್ಟಾಲ್ ಗೆ ಅವಕಾಶಕ್ಕೆ ಕೆಂಡಾಮಂಡಲವಾಗಿದೆ. ದ‌.ಕ ಜಿಲ್ಲೆಯಲ್ಲಿ 9 ಬೀಫ್ ಸ್ಟಾಲ್ ಗೆ ಅವಕಾಶ ಸರಿಯಲ್ಲ. ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಮಂಡಳಿ ತಕ್ಷಣ ಈ ಯೋಜನೆ ಕೈ ಬಿಡಬೇಕು. ಕೈ ಬಿಡದೇ ಇದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿಎಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಎಚ್ಚರಿಕೆ ನೀಡಿದ್ದಾರೆ.

Published On - 10:02 am, Sun, 6 November 22

ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ