AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ

ರಾಜ್ಯಾದ್ಯಂತ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಇದೀಗ ಕಡಲನಗರಿ ಮಂಗಳೂರಿಗೂ ಜಲಕ್ಷಾಮದ ಬಿಸಿ ತಟ್ಟಿದೆ. ನಗರದ ಜೀವನಾಡಿಯಾಗಿರುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಮೇ 1ರಿಂದ ನಗರಕ್ಕೆ ಎರಡು ದಿನಕ್ಕೊಮ್ಮೆ ಮಾತ್ರ ನೀರು ಪೂರೈಸಲು ನಿರ್ಧರಿಸಿದೆ.

ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ
ಮಂಗಳೂರು, ತುಂಬೆ ವೆಂಟೆಡ್ ಡ್ಯಾಂImage Credit source: tv9 kannada
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Apr 25, 2026 | 7:10 PM

Share

ಮಂಗಳೂರು, ಏಪ್ರಿಲ್​ 25: ರಾಜ್ಯದಲ್ಲಿ ಕುಡಿಯುವ ನೀರಿಗೆ (drinking water) ಬರ ಎದುರಾಗಿದೆ. ಕಡಲನಗರಿ ಮಂಗಳೂರಿನಲ್ಲೂ (mangaluru) ನೀರಿನ ಕೊರತೆ ಕಂಡುಬಂದಿದೆ. ನಗರಕ್ಕೆ ನೀರು ಪೊರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿತವಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಎರಡು ದಿನಕ್ಕೊಮ್ಮೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿರ್ಧಾರ ಮಾಡಿದೆ.

ಕರಾವಳಿಯಲ್ಲಿ ಸದ್ಯ ಬಿಸಿಲ ಝಳ ಹೆಚ್ಚುತ್ತಿದೆ. ಬೇಸಿಗೆಯ ಬೇಗೆಯಿಂದ ಜನ ಮನೆಯಿಂದ ಹೊರ ಬರುವುದಕ್ಕೂ ಹೆದರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ತಾಪಮಾನ ಏರಿಕೆಯಿಂದಾಗಿ ಬಾವಿ, ನದಿಗಳಲ್ಲೂ ನೀರು ಬತ್ತಿ ಹೋಗಿದೆ. ಅದರಲ್ಲೂ ಕರಾವಳಿಯ ಜೀವನದಿ ನೇತ್ರಾವತಿಯ ಒಡಲಲ್ಲಿ ನೀರಿನ ಮಟ್ಟ ಸಾಕಷ್ಟು ಕುಸಿದಿದೆ. ಹೀಗಾಗಿ ಮಂಗಳೂರು ನಗರಕ್ಕೆ ನೀರು ಪೂರೈಸುತ್ತಿರುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲೂ ನೀರಿಗೆ ಬರಬಂದಿದೆ.

ಮೇ 1ರಿಂದ ಎರಡು ದಿನಕ್ಕೊಮ್ಮೆ ನೀರು

ಡ್ಯಾಮ್‌‌‌ನಲ್ಲಿ ನೀರಿನ ಮಟ್ಟ 4.53 ಮೀಟರ್‌ಗೆ ಇಳಿಕೆಯಾಗಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ನಗರಕ್ಕೆ ಮೇ 1ರಿಂದ ಎರಡು ದಿನಕ್ಕೊಮ್ಮೆ ನೀರಿನ ಸರಬರಾಜು ಮಾಡುವ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಮೀನುಗಾರಿಕೆಗೆ ತಟ್ಟಿದ ತಾಪಮಾನ ಬಿಸಿ: ಮತ್ಸ್ಯಕ್ಷಾಮ, ಮೀನುಗಾರಿಕೆ ಸ್ಥಗಿತಗೊಳಿಸಿ ದಡ ಸೇರಿದ ಸಾವಿರಾರು ಬೋಟ್‌ಗಳು!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು ಐದೂವರೆ ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ತುಂಬೆ ಡ್ಯಾಂ‌ನಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಂಗಳೂರು ನಗರಕ್ಕೆ ಪ್ರತಿ ದಿನ ಸುಮಾರು 160 ಎಂಎಲ್​​ಡಿ ನೀರನ್ನು ಪಂಪಿಂಗ್ ಮಾಡಲಾಗುತ್ತೆ. ಸದ್ಯ ಎರಡು ದಿನಕ್ಕೊಮ್ಮೆ ನೀರಿನ ರೇಷನಿಂಗ್ ಮಾಡುವುದರಿಂದ ನಿತ್ಯ ಸುಮಾರು 40ರಿಂದ 50 ಎಂಎಲ್​ಡಿ ನೀರು ಉಳಿಕೆಯಾಗಲಿದೆ.

ಗಾರ್ಡನಿಂಗ್‌, ವಾಹನ ತೊಳೆಯುವುದಕ್ಕೆ ನೀರು ಬಳಸುವಂತ್ತಿಲ್ಲ  

ಸದ್ಯ ಎಎಂಆರ್​ ಮತ್ತು ಬಿಳಿಯೂರು ಡ್ಯಾಂನಲ್ಲಿರುವ ನೀರಿನ ಸಂಗ್ರಹದ ಲೆಕ್ಕಚಾರದಂತೆ ಜೂನ್ ಮೊದಲ ವಾರದವರೆಗೆ ಕುಡಿಯುವ ನೀರಿನ ಪೂರೈಕೆಯನ್ನು ಮ್ಯಾನೇಜ್ ಮಾಡಬಹುದಾಗಿದೆ. ಇದರ ಜೊತೆ ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದಲ್ಲಿರುವ ನೀರನ್ನು ಸಹ ಡ್ಯಾಂಗೆ ಮತ್ತೆ ಪಂಪಿಂಗ್ ಮಾಡಬಹುದಾಗಿದೆ. ಹೀಗಾಗಿ ನೀರನ್ನು ಗಾರ್ಡನಿಂಗ್‌ಗೆ, ವಾಹನ ತೊಳೆಯುವುದಕ್ಕೆ ಬಳಸದಂತೆ ಪಾಲಿಕೆ ಸೂಚನೆ ನೀಡಿದೆ.

ಇದನ್ನೂ ಓದಿ: ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ, ವಿಡಿಯೋ ವೈರಲ್

ಜೂನ್ ಮೊದಲ ವಾರದೊಳಗೆ ಮುಂಗಾರು ಬಂದರೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಹೀಗಾಗಿ ಶೀಘ್ರ ವರುಣ ದೇವ ಕೃಪೆ ತೋರಲಿ ಎಂಬ ಪ್ರಾರ್ಥನೆ ಎಲ್ಲರದ್ದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ, ಮಂಗಳೂರು
ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!