AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ಗೆ ನಮ್ಮ ಬೆಂಬಲವಿಲ್ಲ ಎಂದ ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲೀಕರ ಸಂಘ

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಸಂಘದಿಂದ ಬಂದ್​ಗೆ ಬೆಂಬಲವಿಲ್ಲ. ನಾಳೆ ಎಂದಿನಂತೆ ಖಾಸಗಿ ಸಿಟಿ ಬಸ್, ಸರ್ವೀಸ್ ಬಸ್ ಸಂಚಾರ ಮಾಡಲಿದೆ ಎಂದು ಟಿವಿ 9 ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಹೇಳಿದ್ದಾರೆ.

ಕರ್ನಾಟಕ ಬಂದ್​ಗೆ ನಮ್ಮ ಬೆಂಬಲವಿಲ್ಲ ಎಂದ ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲೀಕರ ಸಂಘ
ಖಾಸಗಿ ಬಸ್​
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Sep 28, 2023 | 1:02 PM

Share

ದಕ್ಷಿಣ ಕನ್ನಡ, ಸೆ.28: ತಮಿಳುನಾಡಿಗೆ ಕಾವೇರಿ ನೀರು(Cauvery Water) ಬಿಡುವಂತೆ ಸುಪ್ರೀಂ ಕೋರ್ಟ್​ ಆದೇಶ ನೀಡಿತ್ತು. ಈ ಹಿನ್ನಲೆ ರಾಜ್ಯಾದ್ಯಂತ ರೈತಪರ ಸಂಘಟನೆಗಳು ಭುಗಿಲೆದಿದ್ದು, ಅದರಂತೆ ಮಂಗಳವಾರ(ಸೆ.26) ವಿವಿಧ ಸಂಘಟನೆಗಳು ಬೆಂಗಳೂರು ಬಂದ್​ಗೆ  ಕರೆ ನೀಡಿತ್ತು. ಇದೀಗ ಮತ್ತೆ ಸರ್ಕಾರದ ವಿರುದ್ಧ ನಾಳೆ(ಸೆ.29) ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಅದರಂತೆ ಬಸ್​, ಕ್ಯಾಬ್​, ಹೊಟೇಲ್​ ಸೇರಿದಂತೆ ಅನೇಕ ಸಂಘಗಳು ರಾಜ್ಯಾದ್ಯಂತ ಬೆಂಬಲ ಸೂಚಿಸಿವೆ. ಈ ಮಧ್ಯೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಸಂಘದಿಂದ ಬಂದ್​ಗೆ ಬೆಂಬಲವಿಲ್ಲ. ನಾಳೆ ಎಂದಿನಂತೆ ಖಾಸಗಿ ಸಿಟಿ ಬಸ್, ಸರ್ವೀಸ್ ಬಸ್ ಸಂಚಾರ ಮಾಡಲಿದೆ ಎಂದು ಟಿವಿ 9 ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಹೇಳಿದ್ದಾರೆ.

ಕರ್ನಾಟಕ ಬಂದ್​ಗೆ ನಮ್ಮ ಬೆಂಬಲವಿಲ್ಲ

ಹೌದು, ಸಾರಿಗೆ ವ್ಯವಸ್ಥೆಯಲ್ಲಿ ಈಗಿರುವ ಯಥಾಸ್ಥಿತಿಯೆ ನಾಳೆ ಮುಂದುವರಿಯುತ್ತೆ. ನೈತಿಕವಾಗಿ ಬೆಂಬಲ ಕೊಡುತ್ತೇವೆ. ಆದ್ರೆ,  ಪ್ರತಿಭಟನೆ ಮಾಡಲ್ಲ. ಈ ಹಿಂದೆ ಪರಿಸರಕ್ಕೆ ಮಾರಕವಾದ ಎತ್ತಿನಹೊಳೆ ಯೋಜನೆ ಬೇಡ ಅಂದಿದ್ದೆವು. ಆದ್ರೆ, ಆ ಭಾಗದ ಶಾಸಕರು, ಕನ್ನಡಪರ ಹೋರಾಟಗಾರರು ಯಾರು ಬೆಂಬಲಿಸಿರಲಿಲ್ಲ. ನಾವು ಬಂದ್​ಗೆ ಕರೆ ಕೊಟ್ಟರೂ, ಕರ್ನಾಟಕ ಬಂದ್ ಆಗಿರಲಿಲ್ಲ. ನೀರು ಎಲ್ಲರ ಹಕ್ಕು ಎಂಬ ವಾದವನ್ನು ಅವರು ಮಂಡಿಸುತ್ತಿದ್ದರು. ರಾಜ್ಯದಲ್ಲಿ ತುಳು ಎರಡನೇ ರಾಜ್ಯಭಾಷೆಯಾಗಬೇಕೆಂದು ಒತ್ತಾಯಿಸಿದ್ದೆವು. ಆದರೆ ಸದನದಲ್ಲಿ ಈ ಭಾಗದ ಶಾಸಕರು ಧ್ವನಿಯೆತ್ತಿದಾಗ, ಆ ಭಾಗದ ಶಾಸಕರು ದೈವ ದೇವರ ಹೆಸರಲ್ಲಿ ತಮಾಷೆಯ ದೃಷ್ಟಿಯಲ್ಲಿ ನೋಡಿದರು ಎಂದರು.

ಇದನ್ನೂ ಓದಿ:ಕಾವೇರಿ‌ ಹೋರಾಟಕ್ಕಿಳಿದ ಪ್ರತಿಭಟನಾಕಾರರಿಗೆ ಶಾಕ್: ಕಕಜವೇ ರಾಜ್ಯಾಧ್ಯಕ್ಷ ರಮೇಶ್ ಗೌಡ ವಿರುದ್ಧ ಎಫ್​ಐಆರ್

ಹೀಗಾಗಿ ನಾವು ನೈತಿಕವಾಗಿ ಅವರ ಜೊತೆ ಇರುತ್ತೇವೆ. ‘ನಾವು ಪ್ರತ್ಯೇಕ ಆಗಬೇಕು ಎಂಬ ಯಾವುದೇ ಇಚ್ಛೆ ನಮಗಿಲ್ಲ. ತುಳುನಾಡು ಕನ್ನಡಕ್ಕೆ ಯಾವತ್ತು ವಿರೋಧವೆಂದು ಅಲ್ಲ. ಮಂಗಳೂರಿನ ಜನ ಬೆಂಗಳೂರು, ಮದ್ರಾಸ್, ಚೆನೈನಲ್ಲಿರಬಹುದು. ಆದ್ರೆ, ಈ ವಾದ ನಮ್ಮದಲ್ಲ. ನಮಗೆ ಸಮಸ್ಯೆ ಎದುರಾದಾಗ ಯಾಕೆ ನಮ್ಮ ಜೊತೆ ನಿಂತಿಲ್ಲ ಎಂಬುದು ನಮ್ಮ ವಾದ. ಇಡೀ ದೇಶವೇ ನಮ್ಮದು ಎಲ್ಲಿ ಹೋಗಿಯಾದರು ವ್ಯಾಪಾರ ವಹಿವಾಟು ಮಾಡಬಹುದು ಎಂದು ಮಂಗಳೂರಿನಲ್ಲಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದಿಂದ ಕಾವೇರಿ‌ ನೀರಿಗಾಗಿ ಹೋರಾಟಕ್ಕೆ ಕರೆ

ಮಂಗಳೂರು: ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಸೆ.30 ರಂದು ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದಿಂದ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂದು ವಿದ್ಯಾರ್ಥಿ ಸಂಘ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ‘ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಜನತೆ ಪ್ರತಿಭಟಿಸುವುದಿಲ್ಲ ಎಂಬ ಅಪವಾದವಿದೆ. ಆದರೆ, ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಜಲ, ನೆಲ, ಭಾಷೆ ವಿಚಾರದಲ್ಲಿ ಹೋರಾಟವಾದಾಗ ಭಾಗವಹಿಸಿದೆ. ನೇತ್ರಾವತಿ ಉಳಿವಿಗಾಗಿಯೂ ಹೋರಾಟ ನಡೆಸಿದ್ದೇವೆ. ಇದೀಗ ಕಾವೇರಿ ವಿಚಾರದಲ್ಲಿಯೂ ಬೆಂಬಲ ನೀಡುವುದು ನಮ್ಮ ಆದ್ಯ ಕರ್ತವ್ಯ. ಹೀಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಸಂಪೂರ್ಣ ಬೆಂಬಲ ನೀಡುತ್ತೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಸಾಮಾಜಿಕ ಕಳಕಳಿಯ ಸಂಘಟನೆಗಳು ಭಾಗವಹಿಸುವಂತೆ ವಿದ್ಯಾರ್ಥಿ ಸಂಘ ವಿನಂತಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Thu, 28 September 23

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ