AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ! ಎಂಥಾ ಐಡಿಯಾ: ಕಡಿಮೆ ಅಂಕ ನೀಡಿದರು ಅಂತಾ ಶಿಕ್ಷಕಿಯ ವಾಟರ್ ಬಾಟಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಮುಂದೇನಾಯ್ತು?

ಆದರೆ ಇದು ಯಾವುದೂ ಗಮನಕ್ಕೆ ಬಾರದೆ ಗಣಿತ ಶಿಕ್ಷಕಿ ಮತ್ತು ಒಬ್ಬ ಸಹ ಶಿಕ್ಷಕಿ ಮಾತ್ರೆ ಹಾಕಿದ್ದ ಬಾಟಲಿಯಿಂದ ನೀರು ಕುಡಿದಿದ್ದಾರೆ. ಅಷ್ಟೇ! ಓರ್ವ ಶಿಕ್ಷಕಿಗೆ ಮುಖದಲ್ಲಿ ಊತ -ಮತ್ತೋರ್ವ ಶಿಕ್ಷಕಿ ಮತ್ತೊಂದು ರೀತಿ ಅಸ್ವಸ್ಥ ಆಗಿದ್ದಾರೆ. ಅಂದಹಾಗೆ 6ನೇ ತರಗತಿಯ ಆ ಇಬ್ಬರು ವಿದ್ಯಾರ್ಥಿನಿಯರ ಈ ಅಟಾಟೋಪವೆಲ್ಲಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಬ್ಬಾ! ಎಂಥಾ ಐಡಿಯಾ: ಕಡಿಮೆ ಅಂಕ ನೀಡಿದರು ಅಂತಾ ಶಿಕ್ಷಕಿಯ ವಾಟರ್ ಬಾಟಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಮುಂದೇನಾಯ್ತು?
ಗಣಿತದ ಲೆಕ್ಕಾಚಾರದಲ್ಲಿ ಪೊರಪಾಟು ಬಿದ್ದ ಶಿಕ್ಷಕಿಗೆ ಇದೆಂಥಾ ಶಿಕ್ಷೆ!?
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 06, 2023 | 8:07 PM

Share

ಮಂಗಳೂರು, ಅಕ್ಟೋಬರ್​ 6: ಅಬ್ಬಬ್ಬಾ! ಇಂಥಾ ಐಡಿಯಾ ಯಾರಿಗೂ ಬಾರದಿರಲಿ. ಅಷ್ಟಕ್ಕೂ ಇಂತಾ ಅಬೋಧ ಮಕ್ಕಳಿಗೆ ಇದನ್ನು ಯಾರು ಬೋಧಿಸಿದರೋ!? ಅಲ್ಲ ಕಡಿಮೆ ಅಂಕ ನೀಡಿದರೂ ಅಂತಾ ಶಿಕ್ಷಕಿಯೊಬ್ಬರ ನೀರಿನ ಬಾಟಲಿಗೆ (ಕಡಿಮೆ ಅಂಕ ಪಡೆದ) ವಿದ್ಯಾರ್ಥಿನಿಯರು ಮಾತ್ರೆ ಹಾಕಿದ್ದಾರೆ. ಮಂಗಳೂರಿನ ಉಳ್ಳಾಲದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಮುಂದೇನಾಯ್ತು ಅನ್ನೋದೇ ಇಂಟರೆಸ್ಟಿಂಗ್, ಒಂದಷ್ಟು ಆತಂಕಕಾರಿಯೂ ಹೌದು. ಇದಕ್ಕೆ ಅಳಬೇಕೋ/ ನಗಬೇಕೋ ಎಂಬುದೂ ಗೊತ್ತಾಗೋಲ್ಲ.

ಗಣಿತದ ಲೆಕ್ಕಾಚಾರದಲ್ಲಿ ಪೊರಪಾಟು ಬಿದ್ದ ಶಿಕ್ಷಕಿಗೆ ಇದೆಂಥಾ ಶಿಕ್ಷೆ!?

ಗಣಿತ ವಿಷಯದಲ್ಲಿ ಒಂದೇ ಒಂದು ಅಂಕ ಕಡಿಮೆ ಕೊಟ್ಟಿದ್ದರು ಆ ಶಿಕ್ಷಕಿ. ಅದಕ್ಕೆ ಆ ಇಬ್ಬರು ವಿದ್ಯಾರ್ಥಿನಿಯರು ಇಂಥಾ ಶಿಕ್ಷೆ ಕೊಟ್ಟಿದ್ದಾರೆ ನೋಡಿ. ಇಲ್ಲಿ ಶಿಕ್ಷಕಿಯೇ ಪೊರಪಾಟು ಬಿದ್ದು, ಆ ಇಬ್ಬರು ವಿದ್ಯಾರ್ಥಿನಿಯರೂ ಉತ್ತರ ಸರಿಯಾಗಿಯೇ ಬರೆದಿದ್ದರೂ ಮಾರ್ಕ್ಸ್ ನೀಡಿಲ್ಲ. ಇದು ಆ ಇಬ್ಬರ ಕೋಪಕ್ಕೆ ಕಾರಣವಾಗಿಬಿಟ್ಟಿದೆ. ಹಾಗಾಗಿ ಅವಧಿ ಮೀರಿದ ಎಕ್ಸ್​​ಪೈರ್​​ ಆಗಿರುವ ಯಾವುದೋ ಮಾತ್ರೆಗಳನ್ನು ತಂದು ಆ ಶಿಕ್ಷಕಿಯ ವಾಟರ್​ ಬಾಟಲಿಗೆ ಹಾಕಿದ್ದಾರೆ ಆ ಇಬ್ಬರು ವಿದ್ಯಾರ್ಥಿನಿಯರು!

ಇದನ್ನೂ ಓದಿ: ಆ ಶಾಲೆಯ ವಿದ್ಯಾರ್ಥಿನಿಯರಿಗೆ ವಿಚಿತ್ರ ಕಾಯಿಲೆ.. ನೂರಾರು ಹೆಣ್ಣುಮಕ್ಕಳಿಗೆ ನಡೆಯಲು ಸಾಧ್ಯವಾಗುತ್ತಿಲ್ಲ, ವೈರಲ್​ ಆಗುತ್ತಿದೆ ಆ ವಿಡಿಯೋ

ಆದರೆ ಇದು ಯಾವುದೂ ಗಮನಕ್ಕೆ ಬಾರದೆ ಗಣಿತ ಶಿಕ್ಷಕಿ ಮತ್ತು ಒಬ್ಬ ಸಹ ಶಿಕ್ಷಕಿ ಮಾತ್ರೆ ಹಾಕಿದ್ದ ಬಾಟಲಿಯಿಂದ ನೀರು ಕುಡಿದಿದ್ದಾರೆ. ಅಷ್ಟೇ! ಓರ್ವ ಶಿಕ್ಷಕಿಗೆ ಮುಖದಲ್ಲಿ ಊತ -ಮತ್ತೋರ್ವ ಶಿಕ್ಷಕಿ ಮತ್ತೊಂದು ರೀತಿ ಅಸ್ವಸ್ಥ ಆಗಿದ್ದಾರೆ. ಅಂದಹಾಗೆ 6ನೇ ತರಗತಿಯ ಆ ಇಬ್ಬರು ವಿದ್ಯಾರ್ಥಿನಿಯರ ಈ ಅಟಾಟೋಪವೆಲ್ಲಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Fri, 6 October 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ