AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kudremukh: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಬೆಳ್ತಂಗಡಿ ವನ್ಯಜೀವಿ ವಲಯದಲ್ಲಿ ಭಾರೀ ಕಾಡ್ಗಿಚ್ಚು; ಬೆಂಕಿ ನಂದಿಸಲು ಸಾಹಸ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದ ಸುಮಾರು 10 ಎಕರೆ ಪ್ರದೇಶದಲ್ಲಿ ಬುಧವಾರ ಭಾರೀ ಕಾಡ್ಗಿಚ್ಚು ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಧಿಕಾರಿಗಳು ಹರಸಾಹಸಪಟ್ಟಿದ್ದಾರೆ.

Kudremukh: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಬೆಳ್ತಂಗಡಿ ವನ್ಯಜೀವಿ ವಲಯದಲ್ಲಿ ಭಾರೀ ಕಾಡ್ಗಿಚ್ಚು; ಬೆಂಕಿ ನಂದಿಸಲು ಸಾಹಸ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 23, 2023 | 6:58 AM

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ (Kudremukh National Park) ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದ ಸುಮಾರು 10 ಎಕರೆ ಪ್ರದೇಶದಲ್ಲಿ ಬುಧವಾರ ಭಾರೀ ಕಾಡ್ಗಿಚ್ಚು (Forest Fire) ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಧಿಕಾರಿಗಳು ಹರಸಾಹಸಪಟ್ಟಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದ್ದು, ಶೇ 80ಕ್ಕೂ ಹೆಚ್ಚಿನ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಕಾಡ್ಗಿಚ್ಚಿಗೆ (Wildfire) ಕಾರಣವೇನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಅಳದಂಗಡಿ ವಲಯದ ಹೂವಿನಕೊಪ್ಪಲು ಹಾಗೂ ಊರ್ಜಾಲುಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿತ್ತು ಎಂದು ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದ ಅರಣ್ಯಾಧಿಕಾರಿ ಸ್ವಾತಿ ಎಲ್​ ತಿಳಿಸಿದ್ದಾರೆ.

ಊರ್ಜಾಲುಬೆಟ್ಟದಲ್ಲಿ ಬೆಟ್ಟದ ತಳಭಾಗದಲ್ಲಿ ಬೆಂಕಿಯನ್ನು ಬಹುತೇಕ ನಂದಿಸಲಾಗಿದೆ. ಬೆಟ್ಟದ ತುದಿ ಪ್ರವೇಶವು ಕುದುರೆಮುಖ ವಿಭಾಗದ ವ್ಯಾಪ್ತಿಗೆ ಒಳಪಟ್ಟಿದೆ ಮತ್ತು ಆ ಕಡೆಯಿಂದಲೂ ಕಾರ್ಯಾಚರಣೆ ನಡೆಯುತ್ತಿದೆ. ನಮಗೆ ಸಾಧ್ಯವಾದಷ್ಟೂ ಮಟ್ಟಿಗೆ ಕುದುರೆಮುಖ ವಿಭಾಗದ ವ್ಯಾಪ್ತಿಗೆ ಒಳಪಟ್ಟ ಪ್ರದೇಶದ ಬೆಂಕಿ ನಂದಿಸಲು ಪ್ರಯತ್ನಿಸಿದ್ದೇವೆ. ಅದು ನೆಟ್​​ವರ್ಕ್ ಇಲ್ಲದ ಪ್ರದೇಶವಾಗಿದ್ದು, ಅರಣ್ಯ ಇಲಾಖೆಯ ಕುದುರೆಮುಖ ವಿಣಭಾಗದ ಸಿಬ್ಬಂದಿ ಜತೆ ಸಂವಹನ ನಡೆಸುವುದು ಕಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಕಾಡ್ಗಿಚ್ಚು ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಬೆಂಕಿ ನಂದಿಸಬೇಕಿರುವ ಪ್ರದೇಶ ದುರ್ಗಮ ಬೆಟ್ಟ ಪ್ರದೇಶವಾದ್ದರಿಂದ ಕಾರ್ಯಾಚರಣೆ ಕಷ್ಟಕರವಾಗಿದೆ. ಸಿಬ್ಬಂದಿ ಸುಮಾರು 7 ಕಿಲೋಮೀಟರ್​​ನಷ್ಟು ನಡೆದುಕೊಂಡೇ ತೆರಳಬೇಕಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಕಲೇಶಪುರ: ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಗಳೂರು ಆಸ್ಪತ್ರೆಯಲ್ಲಿ ಸಾವು

ಈ ಮಧ್ಯೆ, ಗುತ್ಯಡ್ಕ ಹಾಗೂ ಮಿತ್ತಬಾಗಿಲು ಸಮೀಪದ ಕುರೇಕಲ್​ನಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಅಳದಂಗಡಿ ವಿಭಾಗದಲ್ಲಿ ಕಾರ್ಯಾಚರಣೆಯಲ್ಲಿ ನಿರತರಾಗಿರುವ ಅರಣ್ಯ ಇಲಾಖೆ ಸಿಬ್ಬಂದಿಗೆ ಗುತ್ಯಡ್ಕ ಪ್ರದೇಶದಿಂದ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಭಾಗದಲ್ಲಿ ಸ್ವಯಂಸೇವಕರ ಸಹಾಯದಿಂದ ಬೆಂಕಿ ನಂದಿಸಲಾಗಿದೆ ಎಂದು ಸ್ವಾತಿ ಎಲ್ ತಿಳಿಸಿದ್ದಾರೆ.

ಸಕಲೇಶಪುರ ಬಳಿ ಇತ್ತೀಚೆಗೆ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸುಂದರೇಶ್ ಇತ್ತೀಚೆಗೆ ಮೃತಪಟ್ಟಿದ್ದರು. ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು. ವೇಗವಾಗಿ ವ್ಯಾಪಿಸಿದ್ದ ಬೆಂಕಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರೆದಿತ್ತು. ಬೆಂಕಿಗೆ ಸಿಲುಕಿ ಡಿಆರ್​ಎಫ್ ಓ ಮಂಜುನಾಥ್, ಫಾರೆಸ್ಟ್ ಗಾರ್ಡ್ ಸುಂದರೇಶ್ ವಾಚರ್ ಗಳಾದ ತುಂಗೇಶ್ ಮತ್ತು ಮಹೇಶ್​ಗೆ ಗಾಯಗಳಾಗಿದ್ದವು. ಸುಂದರೇಶ್ ಹಾಗೂ ಮಂಜುನಾಥ್ ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದರು. ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Thu, 23 February 23

ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!