AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಮ್‌ಮೇಟ್ ಯುವತಿಯರ ಬಟ್ಟೆ ಬದಲಿಸುವ ವಿಡಿಯೋ ಮಾಡಿ ವೈರಲ್ ಮಾಡಿದ್ದವಳು ಅರೆಸ್ಟ್​

ರೂಮ್​ ಮೇಟ್​ ಯುವತಿಯರ ಬಟ್ಟೆ ಬದಲಾಯಿಸುವುದನ್ನು ರಹಸ್ಯವಾಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ಮತ್ತೋರ್ವ ಯುವತಿ ಸಿಕ್ಕಿಬಿದ್ದಿದ್ದಾಳೆ. ನಂಬಿಕೆ ಮೇಲೆ ರೂಮ್ ನಲ್ಲಿಟ್ಟುಕೊಂಡಿದ್ದಕ್ಕೆ ಈ ರೀತಿಯ ಮಣ್ಣ ತಿನ್ನುವ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಮೊನ್ನೆ ಅಷ್ಟೇ ಕಾರ್ಕಳದ ಅಭಿಷೇಕ್ ಎನ್ನುವ ಯುವಕ ಬರೆದಿಟ್ಟಿದ್ದ ಡೆತ್​ ನೋಟ್​ ನಲ್ಲೂ ಸಹ ಬಂಧಿತ ಯುವತಿ ಹೆಸರು ಸಹ ಉಲ್ಲೇಖಿಸಿದ್ದ. ಅಲ್ಲದೇ ಈಕೆಯ ಬಂಡವಾಳ ಸಹ ಬಿಚ್ಚಿಟ್ಟಿದ್ದ.

ರೂಮ್‌ಮೇಟ್  ಯುವತಿಯರ ಬಟ್ಟೆ ಬದಲಿಸುವ ವಿಡಿಯೋ ಮಾಡಿ ವೈರಲ್ ಮಾಡಿದ್ದವಳು ಅರೆಸ್ಟ್​
ಅಭಿಷೇಕ್ (ಮೃತ ಯುವಕ), ನಿರೀಕ್ಷಾ (ಬಂಧಿತ ಆರೋಪಿ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 19, 2025 | 6:47 PM

Share

ಮಂಗಳೂರು (ಅಕ್ಟೋಬರ್ 19): ಇಬ್ಬರು ಯುವತಿಯರ ಬಟ್ಟೆ ಬದಲಾಯಿಸುವುದನ್ನು ರಹಸ್ಯವಾಗಿ ಚಿತ್ರೀಕರಿಸಿ ವಿಡಿಯೋ ವೈರಲ್ ಮಾಡಿದ ಆರೋಪದ ಮೇಲೆ ಯುವತಿಯನ್ನ ಮಂಗಳೂರಿನ (Mangaluru) ಕದ್ರಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಲಶದ ನಿರೀಕ್ಷಾ ಬಂಧನವಾಗಿರುವ ಯುವತಿ. ನಿರೀಕ್ಷಾ ಹಾಗೂ ಇನ್ನಿಬ್ಬರು ಯುವತಿಯರು ಸೇರಿಕೊಂಡು ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಆದ್ರೆ, ನಿರೀಕ್ಷಾ ತನ್ನ ರೂಮ್​​ ಮೇಟ್ ಯುವತಿಯರು ಬಟ್ಟೆ ಬದಲಿಸುವುದನ್ನು ವಿಡಿಯೋ ಮಾಡಿಕೊಂಡು ವೈರಲ್ ಮಾಡಿದ್ದಾಳೆ. ಈ ಸಂಬಂಧ ಇದೀಗ ನಿರೀಕ್ಷಾಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಅತ್ತ  ಆತ್ಮಹತ್ಯೆ ಮಾಡಿಕೊಂಡಿದ್ದ ಕಾರ್ಕಳದ ಅಭಿಷೇಕ್ ತನ್ನ ಡೆತ್ ನೋಟ್‌ನಲ್ಲಿ ಇದೇ ನಿರೀಕ್ಷಾಳ ಹೆಸರು ಉಲ್ಲೇಖ ಮಾಡಿದ್ದ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.

ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರು ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಯುವತಿಯರ ಬಟ್ಟೆ ಬದಲಾಯಿಸುವ ದೃಶ್ಯವನ್ನು ನಿರೀಕ್ಷಾ ರಹಸ್ಯವಾಗಿ ವಿಡಿಯೋ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ವಿಡಿಯೋವನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮೃತ ಅಭಿಷೇಕ್‌ಗೆ ಕಳುಹಿಸಿದ್ದಾಳೆ ಎಂದು ತಿಳಿದುಬಂದಿದೆ. ಅಭಿಷೇಕ್, ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿದ್ದವನು, ಕಳೆದ ಅಕ್ಟೋಬರ್ 09 ರಂದು ಕಾರ್ಕಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.

ಇದನ್ನೂ ಓದಿ: ಕಾರ್ಕಳ ಯುವಕನ ಸಾವಿನ ಹಿಂದೆ ಹನಿಟ್ರ್ಯಾಪ್ ಜಾಲ? ಡೆತ್ ನೋಟ್​​ನಿಂದ ಸ್ಪೋಟಕ ಅಂಶ ಬಯಲು

ಆದ್ರೆ, ಅಭಿಷೇಕ್ ಆತ್ಮಹತ್ಯೆಗೂ ಮುನ್ನ ಸುದೀರ್ಘ  ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ನಿರೀಕ್ಷಾ ಸೇರಿದಂತೆ ಕೆಲವರ ಹೆಸರು ಉಲ್ಲೇಖಿಸಿ ಹನಿಟ್ರ್ಯಾಪ್ ಆರೋಪ ಮಾಡಿದ್ದಾನೆ. ಜೊತೆಗೆ ನಿರೀಕ್ಷಾ ತನ್ನ ರೂಂಮೇಟ್‌ಗಳಾದ ಇಬ್ಬರು ಯುವತಿಯರ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ್ದಾಳೆ ಎಂದು ಉಲ್ಲೇಖಿಸಿದ್ದ.

ಸಾಯುವ ಮುನ್ನ ಅಭಿಷೇಕ್ ‘truth group’ ಎಂಬ ವಾಟ್ಸಾಪ್ ಗುಂಪು ರಚಿಸಿ, ಅದರಲ್ಲಿ ಈ ಯುವತಿಯರ ವಿಡಿಯೋ ಸೇರಿದಂತೆ ಕೆಲವು ವಿಡಿಯೋಗಳನ್ನು ಹರಿಬಿಟ್ಟಿದ್ದಾನೆ.ಈ ಘಟನೆಯಿಂದ ಆಘಾತಗೊಂಡ ಸಂತ್ರಸ್ತ ಯುವತಿಯರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿಯರ ದೂರು ದಾಖಲಿಸಿಕೊಂಡ ಕದ್ರಿ ಪೊಲೀಸರು ರಹಸ್ಯವಾಗಿ ವಿಡಿಯೋ ರೆಕಾರ್ಡ್ ಮಾಡಿದ್ದ ನಿರೀಕ್ಷಾಳನ್ನು ಬಂಧಿಸಿದ್ದಾರೆ.

ಸದ್ಯ ಆರೋಪಿ ವಿರುದ್ಧ ಬಿಎನ್‌ಎಸ್ 77, 78(2), 294(2)(a) ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಕಳೆದ ಒಂದು ವರ್ಷದ ಹಿಂದೆ ಚಿತ್ರೀಕರಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ಸಂಬಂಧ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಅಭಿಷೇಕ್‌ನ ಆತ್ಮಹತ್ಯೆಗೆ ಸಂಬಂಧಿಸಿದ ತನಿಖೆಯನ್ನು ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Published On - 6:28 pm, Sun, 19 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್