AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಮ್‌ಮೇಟ್ ಯುವತಿಯರ ಬಟ್ಟೆ ಬದಲಿಸುವ ವಿಡಿಯೋ ಮಾಡಿ ವೈರಲ್ ಮಾಡಿದ್ದವಳು ಅರೆಸ್ಟ್​

ರೂಮ್​ ಮೇಟ್​ ಯುವತಿಯರ ಬಟ್ಟೆ ಬದಲಾಯಿಸುವುದನ್ನು ರಹಸ್ಯವಾಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ಮತ್ತೋರ್ವ ಯುವತಿ ಸಿಕ್ಕಿಬಿದ್ದಿದ್ದಾಳೆ. ನಂಬಿಕೆ ಮೇಲೆ ರೂಮ್ ನಲ್ಲಿಟ್ಟುಕೊಂಡಿದ್ದಕ್ಕೆ ಈ ರೀತಿಯ ಮಣ್ಣ ತಿನ್ನುವ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಮೊನ್ನೆ ಅಷ್ಟೇ ಕಾರ್ಕಳದ ಅಭಿಷೇಕ್ ಎನ್ನುವ ಯುವಕ ಬರೆದಿಟ್ಟಿದ್ದ ಡೆತ್​ ನೋಟ್​ ನಲ್ಲೂ ಸಹ ಬಂಧಿತ ಯುವತಿ ಹೆಸರು ಸಹ ಉಲ್ಲೇಖಿಸಿದ್ದ. ಅಲ್ಲದೇ ಈಕೆಯ ಬಂಡವಾಳ ಸಹ ಬಿಚ್ಚಿಟ್ಟಿದ್ದ.

ರೂಮ್‌ಮೇಟ್  ಯುವತಿಯರ ಬಟ್ಟೆ ಬದಲಿಸುವ ವಿಡಿಯೋ ಮಾಡಿ ವೈರಲ್ ಮಾಡಿದ್ದವಳು ಅರೆಸ್ಟ್​
ಅಭಿಷೇಕ್ (ಮೃತ ಯುವಕ), ನಿರೀಕ್ಷಾ (ಬಂಧಿತ ಆರೋಪಿ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 19, 2025 | 6:47 PM

Share

ಮಂಗಳೂರು (ಅಕ್ಟೋಬರ್ 19): ಇಬ್ಬರು ಯುವತಿಯರ ಬಟ್ಟೆ ಬದಲಾಯಿಸುವುದನ್ನು ರಹಸ್ಯವಾಗಿ ಚಿತ್ರೀಕರಿಸಿ ವಿಡಿಯೋ ವೈರಲ್ ಮಾಡಿದ ಆರೋಪದ ಮೇಲೆ ಯುವತಿಯನ್ನ ಮಂಗಳೂರಿನ (Mangaluru) ಕದ್ರಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಲಶದ ನಿರೀಕ್ಷಾ ಬಂಧನವಾಗಿರುವ ಯುವತಿ. ನಿರೀಕ್ಷಾ ಹಾಗೂ ಇನ್ನಿಬ್ಬರು ಯುವತಿಯರು ಸೇರಿಕೊಂಡು ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಆದ್ರೆ, ನಿರೀಕ್ಷಾ ತನ್ನ ರೂಮ್​​ ಮೇಟ್ ಯುವತಿಯರು ಬಟ್ಟೆ ಬದಲಿಸುವುದನ್ನು ವಿಡಿಯೋ ಮಾಡಿಕೊಂಡು ವೈರಲ್ ಮಾಡಿದ್ದಾಳೆ. ಈ ಸಂಬಂಧ ಇದೀಗ ನಿರೀಕ್ಷಾಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಅತ್ತ  ಆತ್ಮಹತ್ಯೆ ಮಾಡಿಕೊಂಡಿದ್ದ ಕಾರ್ಕಳದ ಅಭಿಷೇಕ್ ತನ್ನ ಡೆತ್ ನೋಟ್‌ನಲ್ಲಿ ಇದೇ ನಿರೀಕ್ಷಾಳ ಹೆಸರು ಉಲ್ಲೇಖ ಮಾಡಿದ್ದ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.

ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರು ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಯುವತಿಯರ ಬಟ್ಟೆ ಬದಲಾಯಿಸುವ ದೃಶ್ಯವನ್ನು ನಿರೀಕ್ಷಾ ರಹಸ್ಯವಾಗಿ ವಿಡಿಯೋ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ವಿಡಿಯೋವನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮೃತ ಅಭಿಷೇಕ್‌ಗೆ ಕಳುಹಿಸಿದ್ದಾಳೆ ಎಂದು ತಿಳಿದುಬಂದಿದೆ. ಅಭಿಷೇಕ್, ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿದ್ದವನು, ಕಳೆದ ಅಕ್ಟೋಬರ್ 09 ರಂದು ಕಾರ್ಕಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.

ಇದನ್ನೂ ಓದಿ: ಕಾರ್ಕಳ ಯುವಕನ ಸಾವಿನ ಹಿಂದೆ ಹನಿಟ್ರ್ಯಾಪ್ ಜಾಲ? ಡೆತ್ ನೋಟ್​​ನಿಂದ ಸ್ಪೋಟಕ ಅಂಶ ಬಯಲು

ಆದ್ರೆ, ಅಭಿಷೇಕ್ ಆತ್ಮಹತ್ಯೆಗೂ ಮುನ್ನ ಸುದೀರ್ಘ  ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ನಿರೀಕ್ಷಾ ಸೇರಿದಂತೆ ಕೆಲವರ ಹೆಸರು ಉಲ್ಲೇಖಿಸಿ ಹನಿಟ್ರ್ಯಾಪ್ ಆರೋಪ ಮಾಡಿದ್ದಾನೆ. ಜೊತೆಗೆ ನಿರೀಕ್ಷಾ ತನ್ನ ರೂಂಮೇಟ್‌ಗಳಾದ ಇಬ್ಬರು ಯುವತಿಯರ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ್ದಾಳೆ ಎಂದು ಉಲ್ಲೇಖಿಸಿದ್ದ.

ಸಾಯುವ ಮುನ್ನ ಅಭಿಷೇಕ್ ‘truth group’ ಎಂಬ ವಾಟ್ಸಾಪ್ ಗುಂಪು ರಚಿಸಿ, ಅದರಲ್ಲಿ ಈ ಯುವತಿಯರ ವಿಡಿಯೋ ಸೇರಿದಂತೆ ಕೆಲವು ವಿಡಿಯೋಗಳನ್ನು ಹರಿಬಿಟ್ಟಿದ್ದಾನೆ.ಈ ಘಟನೆಯಿಂದ ಆಘಾತಗೊಂಡ ಸಂತ್ರಸ್ತ ಯುವತಿಯರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿಯರ ದೂರು ದಾಖಲಿಸಿಕೊಂಡ ಕದ್ರಿ ಪೊಲೀಸರು ರಹಸ್ಯವಾಗಿ ವಿಡಿಯೋ ರೆಕಾರ್ಡ್ ಮಾಡಿದ್ದ ನಿರೀಕ್ಷಾಳನ್ನು ಬಂಧಿಸಿದ್ದಾರೆ.

ಸದ್ಯ ಆರೋಪಿ ವಿರುದ್ಧ ಬಿಎನ್‌ಎಸ್ 77, 78(2), 294(2)(a) ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಕಳೆದ ಒಂದು ವರ್ಷದ ಹಿಂದೆ ಚಿತ್ರೀಕರಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ಸಂಬಂಧ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಅಭಿಷೇಕ್‌ನ ಆತ್ಮಹತ್ಯೆಗೆ ಸಂಬಂಧಿಸಿದ ತನಿಖೆಯನ್ನು ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Published On - 6:28 pm, Sun, 19 October 25

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು