AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅರ್ಧ ದಿನದಲ್ಲಿ 1 ಸಾವಿರ ತೆಂಗಿನಕಾಯಿ ಸುಲಿಯುವ ಎರಡು ಮಕ್ಕಳ ತಾಯಿ

ಇಬ್ಬರು ಮಕ್ಕಳ ತಾಯಿಯೊಬ್ಬಳು ಜೀವನೋಪಾಯವಾಗಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಆರಿಸಿಕೊಂಡಿದ್ದಾಳೆ. ತನ್ನ ಸಂಸಾರವನ್ನು ಸಾಗಿಸಲು ಮತ್ತು ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಈ ಕೆಲಸಕ್ಕೆ ಇಳಿದಿದ್ದಾರೆ. ತನ್ನ ಸಾಮರ್ಥ್ಯ ಯಾರಿಗೇನು ಕಮ್ಮಿ ಇಲ್ಲ ಎಂದು ಕೆಲಸ ಮಾಡುವ ಇವರು, ಅರ್ಧ ದಿನದಲ್ಲೇ 1 ಸಾವಿರ ತೆಂಗಿನಕಾಯಿ ಸುಳಿಯುತ್ತಾರೆ.

ಮಂಗಳೂರು: ಅರ್ಧ ದಿನದಲ್ಲಿ 1 ಸಾವಿರ ತೆಂಗಿನಕಾಯಿ ಸುಲಿಯುವ ಎರಡು ಮಕ್ಕಳ ತಾಯಿ
ತೆಂಗಿನಕಾಯಿ ಸುಲಿಯುವ ಮಹಿಳೆ
Rakesh Nayak Manchi
Rakesh Nayak Manchi|

Updated on: Oct 06, 2023 | 11:53 AM

Share

ಮಂಗಳೂರು, ಅ.6: ಇಬ್ಬರು ಮಕ್ಕಳ ತಾಯಿಯೊಬ್ಬಳು ಜೀವನೋಪಾಯವಾಗಿ ತೆಂಗಿನಕಾಯಿ (Coconut) ಸುಲಿಯುವ ಕೆಲಸವನ್ನು ಆರಿಸಿಕೊಂಡಿದ್ದಾಳೆ. ತನ್ನ ಸಂಸಾರವನ್ನು ಸಾಗಿಸಲು ಮತ್ತು ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಈ ಕೆಲಸಕ್ಕೆ ಇಳಿದಿದ್ದಾರೆ. ತನ್ನ ಸಾಮರ್ಥ್ಯ ಯಾರಿಗೇನು ಕಮ್ಮಿ ಇಲ್ಲ ಎಂದು ಕೆಲಸ ಮಾಡುವ ಇವರು, ಅರ್ಧ ದಿನದಲ್ಲೇ 1 ಸಾವಿರ ತೆಂಗಿನಕಾಯಿ ಸುಳಿಯುತ್ತಾರೆ.

ಮೂಲತಃ ಮಡಿಕೇರಿಯವರಾದ 40 ವರ್ಷದ ಹರಿಣಾಕ್ಷಿ, ಪ್ರಸ್ತುತ ಕಾಸರಗೋಡಿನ ವಾಣಿನಗರದಲ್ಲಿ ವಾಸಿಸುತ್ತಿದ್ದಾರೆ. ಪುತ್ತೂರಿನ ತೆಂಗಿನಕಾಯಿ ವ್ಯಾಪಾರಿಯೊಬ್ಬರ ಮೂಲಕ ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಗಡಿ ಮನೆಗಳು ಮತ್ತು ಹೊಲಗಳಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸದಲ್ಲಿ ತೊಡಗಿದ್ದಾರೆ. ಅವರು ಪ್ರತಿ ತೆಂಗಿನಕಾಯಿಗೆ 1 ರೂಪಾಯಿ ಗಳಿಸುತ್ತಾರೆ ಮತ್ತು ಅರ್ಧ ದಿನದಲ್ಲಿ ಸುಮಾರು 1,000 ತೆಂಗಿನಕಾಯಿಗಳನ್ನು ಸುಲಿಯಬಲ್ಲರು.

“ಕೆಲವು ವರ್ಷಗಳ ಹಿಂದೆ ನಾನು ಕಾಸರಗೋಡಿಗೆ ಸ್ಥಳಾಂತರಗೊಂಡಾಗ ಈ ಕೆಲಸ ಪ್ರಾರಂಭಿಸಿದೆ. ಒಂಟಿ ತಾಯಿಯಾಗಿ, ನಾನು ಆದಾಯದ ಮಾರ್ಗವನ್ನು ಕಂಡುಹಿಡಿಯಬೇಕಾಗಿತ್ತು. ನಾನು ಇಡುಕ್ಕಿಯಲ್ಲಿ ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದೇನೆ ಮತ್ತು ಈ ಹಿಂದೆ ಬೆಂಗಳೂರು ಮತ್ತು ಚೆನ್ನೈನಲ್ಲಿ ಕೆಲಸ ಮಾಡಿದ್ದೇನೆ” ಎಂದು ಹರಿನಾಕ್ಷಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ತೆಂಗಿನಕಾಯಿ ಮೊಳಕೆಯಲ್ಲಿರುವ ಔಷಧೀಯ ಗುಣಗಳನ್ನು ತಿಳಿದುಕೊಳ್ಳಿ

ವೈಯಕ್ತಿಕ ಪರಿಸ್ಥಿತಿಗಳಿಂದಾಗಿ ನಾನು ಕಾಸರಗೋಡಿನಲ್ಲಿ ನೆಲೆಸಿದೆ. ಅಲ್ಲಿ ನಾನು ಉದ್ಯೋಗವನ್ನು ಹುಡುಕಲು ಹೆಣಗಾಡಿದೆ. ಪರಿಣಾಮವಾಗಿ, ನಾನು ವಿವಿಧ ಸಣ್ಣಪುಟ್ಟ ಕೆಲಸಗಳನ್ನು ಕೈಗೆತ್ತಿಕೊಂಡೆ. ಕಾರ್ಮಿಕನಾಗಿ ಮತ್ತು ಮನೆಗೆಲಸ ಕೆಲಸ ಮಾಡಲು ಆರಂಭಿಸಿದೆ. ಅದು ಸಾಧಾರಣ ಆದಾಯವನ್ನು ಮಾತ್ರ ಒದಗಿಸುತ್ತಿತ್ತು ಎಂದರು.

ಕಾಸರಗೋಡಿನ ಮನೆಯೊಂದರಲ್ಲಿ ಕೆಲಸ ಮಾಡುವಾಗ, ನಾನು ತೆಂಗಿನಕಾಯಿ ಸುಲಿಯುವುದನ್ನು ಕಲಿತುಕೊಂಡೆ. ಆದರೆ ಪರಿಸ್ಥಿತಿಗಳು ನನ್ನನ್ನು ಕೆಲಸವನ್ನು ಬಿಡುವಂತೆ ಮಾಡಿತು. ಅದೃಷ್ಟವಶಾತ್, ಪುತ್ತೂರಿನ ಅರ್ಲಪದವು ಎಂಬಲ್ಲಿನ ತೆಂಗಿನಕಾಯಿ ವ್ಯಾಪಾರಿಯೊಬ್ಬರ ಪರಿಚಯವಾಯಿತು. ಅವರು ನನ್ನನ್ನು ವಿವಿಧ ಹೊಲಗಳು ಮತ್ತು ಮನೆಗಳಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸಕ್ಕೆ ಸಂಪರ್ಕಿಸಿದರು.

11 ವರ್ಷದ ಮಗಳು ಮತ್ತು ಒಂಬತ್ತು ವರ್ಷದ ಮಗನ ತಾಯಿಯಾಗಿರುವ ಹರಿನಾಕ್ಷಿ, ಆದಾಯಕ್ಕೆ ಪೂರಕವಾಗಿ ಹಸುವನ್ನು ಸಾಕುತ್ತಿದ್ದಾರೆ. “ನನ್ನ ಬಾಲ್ಯದಿಂದಲೂ, ನಾನು ಹಲವಾರು ಸವಾಲುಗಳನ್ನು ಎದುರಿಸಿದ್ದೇನೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ನನ್ನ ಹೆತ್ತವರನ್ನು ಕಳೆದುಕೊಂಡೆ. ನಾನು ಪ್ರತಿದಿನ ಸರಿಸುಮಾರು 1,000 ತೆಂಗಿನಕಾಯಿಗಳನ್ನು ತೆಗೆಯಲು ಸಮರ್ಥನಾಗಿದ್ದೇನೆ. ಗಂಟೆಗೆ ಸರಾಸರಿ 100 ತೆಂಗಿನಕಾಯಿಗಳ ದರದಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾಗಿ ವರದಿ ಮಾಡಿದೆ.

ನನ್ನ ಬಿಡುವಿನ ವೇಳೆಯಲ್ಲಿ ನಾನು ಏಣಿಯನ್ನು ಬಳಸಿ ಅಡಿಕೆ ಕೊಯ್ಲು ಮತ್ತು ಮೆಣಸು ಕೊಯ್ಲು ತೆಗೆಯುವ ಕೆಲಸ ಕೂಡ ಮಾಡುತ್ತೇನೆ ಎಂದು ಹೇಳುವ ಮೂಲಕ ಅವರು ಕಠಿಣ ಪರಿಶ್ರಮಕ್ಕೆ ತಮ್ಮ ಅಚಲ ಬದ್ಧತೆಯನ್ನು ಒತ್ತಿ ಹೇಳಿದರು.

“ಅವರು ಕಷ್ಟಪಟ್ಟು ಕೆಲಸ ಮಾಡುತ್ತಾರೆ ಮತ್ತು ಅನೇಕರಿಗೆ ಮಾದರಿಯಾಗಿದ್ದಾರೆ. ಸಾಂಪ್ರದಾಯಿಕವಾಗಿ ಪುರುಷ ಪ್ರಾಬಲ್ಯವನ್ನು ಹೊಂದಿರುವ ತೆಂಗಿನಕಾಯಿ ಸುಲಿಯುವ ವೃತ್ತಿ ಕ್ಷೇತ್ರದಲ್ಲಿ ಮಹಿಳೆಯನ್ನು ಕಂಡಿರಲಿಲ್ಲ ಎಂದು ಕೃಷಿ ನಿಯತಕಾಲಿಕವಾದ ಅಡಿಕೆ ಪತ್ರಿಕೆಯ ಸಂಪಾದಕ ಶ್ರೀ ಪಡ್ರೆ ಹೇಳಿದ್ದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು