AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿನವ ವಾಲ್ಮೀಕಿ ಖ್ಯಾತಿಯ, ಯಕ್ಷಗಾನ ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ

Bottikere Purushottama Poonja: ಕಟೀಲು ಮೇಳದ ಹಿರಿಯ ಭಾಗವತರಾಗಿದ್ದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (65) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ಪುರುಷೋತ್ತಮ ಪೂಂಜರು ಯಕ್ಷಗಾನ ವೇಷಧಾರಿ, ಪ್ರಸಂಗಕರ್ತ, ಹಿಮ್ಮೇಳ ವಾದಕ, ಸಮರ್ಥ ಭಾಗವತರಾಗಿ ಯಕ್ಷರಂಗದ ವಿವಿಧ ಮಜಲುಗಳಲ್ಲಿ ಅನುಭವ ಹೊಂದಿದ್ದರು.

ಅಭಿನವ ವಾಲ್ಮೀಕಿ ಖ್ಯಾತಿಯ, ಯಕ್ಷಗಾನ ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ
ಬೊಟ್ಟಿಕೆರೆ ಪುರುಷೋತ್ತಮ ಪೂಂಜ
Follow us
TV9 Web
| Updated By: Skanda

Updated on:Aug 15, 2021 | 9:35 AM

ಮಂಗಳೂರು: ಕಟೀಲು ಮೇಳದ ಹಿರಿಯ ಭಾಗವತರಾಗಿದ್ದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (65) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ಪುರುಷೋತ್ತಮ ಪೂಂಜರು ಯಕ್ಷಗಾನ ವೇಷಧಾರಿ, ಪ್ರಸಂಗಕರ್ತ, ಹಿಮ್ಮೇಳ ವಾದಕ, ಸಮರ್ಥ ಭಾಗವತರಾಗಿ ಯಕ್ಷರಂಗದ ವಿವಿಧ ಮಜಲುಗಳಲ್ಲಿ ಅನುಭವ ಹೊಂದಿದ್ದರು. ಪೂಂಜರು ಕನ್ನಡ ಮತ್ತು ತುಳು ಭಾಷೆಯಲ್ಲಿ ಸುಮಾರು 32 ಪ್ರಸಂಗಗಳನ್ನು ರಚಿಸಿದ್ದಾರೆ. ಅವರ ‘ಮಾನಿಷಾದ’ ಎಂಬ ಯಕ್ಷಗಾನ ಪ್ರಸಂಗವು ಅಪಾರ ಜನಪ್ರಿಯತೆ ಗಳಿಸಿದೆ.

ಮಂಗಳೂರಿನ ಮಂಜನಾಡಿಯ ಬೊಟ್ಟಿಕೆರೆ ನಿವಾಸಿ ಆಗಿರುವ ಪುರುಷೋತ್ತಮ‌ ಪೂಂಜರು, 1953 ಜೂನ್ 21 ರಂದು ಜನಿಸಿದ್ದರು. ಯಕ್ಷಗಾನದಲ್ಲಿ ಹೊಸಹಿತ್ಲು ಮಹಾಲಿಂಗ ಭಟ್ಟ ಹಾಗೂ ಆನೆಗುಂಡಿ ಗಣಪತಿ ಭಟ್ಟರ ಮಾರ್ಗದರ್ಶನದಲ್ಲಿ ಸವ್ಯಸಾಚಿ ಎನಿಸಿಕೊಂಡಿದ್ದರು. ಅಕಾಡೆಮಿಕ್ಸ್‌ನಲ್ಲಿ ಬಿಎಸ್ಸಿ ಪದವಿಯನ್ನೂ ಗಳಿಸಿದ್ದರು.

ಪ್ರಧಾನ ಭಾಗವತರಾಗಿ ಅವರು ಸುಮಾರು 45 ವರ್ಷಗಳ ಅನುಭವ ಹೊಂದಿದ್ದಾರೆ. ಕೊನೆಯದಾಗಿ ಕಟೀಲು ಒಂದನೇ ಮೇಳದ ಪ್ರಧಾನ ಭಾಗವತರಾಗಿದ್ದರು. ಅಲ್ಲದೆ, ಉಪ್ಪಳ ಮೇಳ, ಮುಂಬೈನ ಗೀತಾಂಬಿಕಾ‌ ಮೇಳ, ಪುತ್ತೂರು ಮೇಳ, ಕರ್ನಾಟಕ ಮೇಳದಲ್ಲಿ ಭಾಗವತರಾಗಿದ್ದರು. ಸುಮಾರು 30 ವರ್ಷಗಳ ಕಾಲ ಕಟೀಲು ಮೇಳ ಒಂದರಲ್ಲೇ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

ಪುರುಷೋತ್ತಮ ಪೂಂಜರು, ಮಾನಿಷಾದ, ನಳಿನಾಕ್ಷಿ ನಂದಿನಿ, ಉಭಯಕುಲ ಬಿಲ್ಲೋಜ, ಮೇಘಮಯೂರಿ, ಸ್ವರ್ಣ ನೂಪುರ, ಕ್ಷಾತ್ರ ಮೇಧ, ಮಾತಂಗ ಕನ್ಯೆ, ಗಾಂಗೇಯ, ರಾಜಾ ದ್ರುಪದ, ಅಮೃತ ವರ್ಷಿಣಿ (ಕನ್ನಡ ಪ್ರಸಂಗಗಳು), ಕುಡಿಯನ ಕೊಂಬಿರೆಲ್, ದಳವಾಯಿ ಮುದ್ದಣೆ, ಗರುಡಕೇಂಜವೆ, ಪಟ್ಟದಕತ್ತಿ, ಕುಡಿಯನ ಕಣ್ಣ್ (ತುಳು ಪ್ರಸಂಗಗಳು) ಮುಂತಾದ ಪ್ರಸಂಗಗಳನ್ನು ರಚಿಸಿದ್ದಾರೆ. ಅವರ ಪ್ರಸಂಗಗಳನ್ನು ಯಕ್ಷಧ್ರುವ ಪಟ್ಲ‌ ಫೌಂಡೇಶನ್ ಟ್ರಸ್ಟ್ ‘ಅಂಬುರುಹ’ ಎಂಬ ಹೆಸರಿನಿಂದ ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: Art and Entertainment : ಪುರುಷ ದೃಷ್ಟಿಕೋನದಿಂದಲೇ ಯಕ್ಷಗಾನದಲ್ಲಿ ಶೃಂಗಾರ ವ್ಯಕ್ತ

ಮೂಡಬಿದಿರೆಯಲ್ಲಿ ವೇದಿಕೆಯಲ್ಲಿ ಕುಣಿಯುವಾಗಲೇ ಕುಸಿದು ಬಿದ್ದ ಯಕ್ಷಗಾನ ಕಲಾವಿದ

(Yakshagana Bhagavatha Artist and Scholar Bottikere Purushottama Poonja Death)

Published On - 9:22 am, Sun, 15 August 21

ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್