ಇಲ್ಲಿ ಕೇಳಿ ಬರುತ್ತಿದೆಯಂತೆ ರಕ್ತೇಶ್ವರಿ ದೈವದ ಗೆಜ್ಜೆ ಸದ್ದು; ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಉತ್ತರವೇನು ಗೊತ್ತಾ?

ಕಳೆದ ಕೆಲ ದಿನಗಳಿಂದ ಏಯ್ಯಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್​ನಲ್ಲಿ ಜನರಿಗೆ ರಕ್ತೇಶ್ವರಿ ದೈವಾದ ಬೆಳಕು, ಗೆಜ್ಜೆ ಸದ್ದು ಕೇಳಿ ಬರುತ್ತಿದ್ದು ಸದ್ಯ ಪ್ರಶ್ನಾ ಚಿಂತನೆಯಲ್ಲಿ ದೈವದ ಕುರುಹು ಪತ್ತೆ ಆಗಿದೆ. ರಕ್ತೇಶ್ವರಿ ದೈವದ ಪವಾಡ ಇಡೀ ಗ್ರಾಮದ ಜನರ ಅನುಭವಕ್ಕೆ ಬಂದಿದೆ. ಸದ್ಯ ಮರದ ಬುಡದಲ್ಲೇ ದೀಪ ಹಚ್ಚಿ ರಕ್ತೇಶ್ವರಿ ದೈವದ ಆರಾಧನೆ ಮಾಡಲಾಗುತ್ತಿದೆ.

ಇಲ್ಲಿ ಕೇಳಿ ಬರುತ್ತಿದೆಯಂತೆ ರಕ್ತೇಶ್ವರಿ ದೈವದ ಗೆಜ್ಜೆ ಸದ್ದು; ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಉತ್ತರವೇನು ಗೊತ್ತಾ?
ಇಲ್ಲಿ ಕೇಳಿ ಬರುತ್ತಿದೆಯಂತೆ ರಕ್ತೇಶ್ವರಿ ದೈವದ ಗೆಜ್ಜೆ ಸದ್ದು
Edited By:

Updated on: Feb 28, 2024 | 9:55 AM

ಮಂಗಳೂರು, ಫೆ.28: ದೈವಗಳು ನಂಬಿದವರನ್ನು ಯಾವತ್ತೂ ಕೈ ಬಿಡಲ್ಲ ಅನ್ನೋದು ಕರಾವಳಿಗರ ನಂಬಿಕೆ. ಹೀಗಾಗಿ ತುಳುನಾಡಿನಲ್ಲಿ ದೈವಾರಾಧನೆ (Daivaradhane) ತನ್ನದೇ ಆದ ಮಹತ್ವವನ್ನು ಹೊಂದಿದೆ. ಇನ್ನು ಇತ್ತೀಚೆಗೆ ಏಯ್ಯಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಹಿಂಬದಿಯಲ್ಲಿ ಇರುವ ನಾಗಮಂಟಪ ರಸ್ತೆಯ ರಕ್ತೇಶ್ವರಿ (Rakteshwari) ಕ್ಷೇತ್ರದಲ್ಲಿ ದೈವದ ಗೆಜ್ಜೆ ಶಬ್ಧದ ಕೇಳಿ ಬರುತ್ತಿದೆ ಎಂದು ಹೇಳಲಾಗುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆಗಳು ಕೂಡ ನಡೆದಿದ್ದವು. ಸದ್ಯ ಈಗ ಪ್ರಶ್ನಾ ಚಿಂತನೆ ಹಾಕಿದಾಗ ರಕ್ತೇಶ್ವರಿ ದೈವದ ಇರುವಿಕೆ ಪತ್ತೆಯಾಗಿದೆ. ರಕ್ತೇಶ್ವರಿ ದೈವದ ಪವಾಡಕ್ಕೆ ಜನ ಮನಸೋತಿದ್ದಾರೆ.

ತುಳುನಾಡ ದೈವಾರಾಧನೆಯ ಮತ್ತೊಂದು ವಿಸ್ಮಯಕಾರಿ ಕಥೆ ಏಯ್ಯಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್​ನಲ್ಲಿ ಕೇಳಿ ಬಂದಿದೆ. ಇಲ್ಲಿನ ಜನರಿಗೆ ಬೆಂಕಿ ಬೆಳಕು, ಗೆಜ್ಜೆ ಸದ್ದಿನ ಜೊತೆಗೆ ರಕ್ತೇಶ್ವರಿ ದೈವ ಸಂಚರಿಸುವ ಅನುಭವಗಳಾಗುತ್ತಿವೆ. ಗ್ರಾಮದ ಅನೇಕ ಜನ ಬೆಳಕಿನ ದರ್ಶನ, ಸದ್ದಿನ ಅನುಭವ ಮಾಡಿದ್ದಾರೆ. ಈ ಅನುಭವದಿಂದ ಚಿಂತೆಗೆ ಬಿದ್ದಿದ್ದ ಜನರಿಗೆ ದೈವದ ಪವಾಡ ಇರುವುದು ಪತ್ತೆಯಾಗಿದೆಯಂತೆ.

ಇದನ್ನೂ ಓದಿ: ಮಂಗಳೂರು: ದೈವ ನರ್ತನ ಮುಗಿಸ್ತಿದ್ದಂತೆ ಹೃದಯಾಘಾತದಿಂದ ನರ್ತಕ ಸಾವು

ಬಹಳ ವರ್ಷಗಳ ಹಿಂದೆ ಏಯ್ಯಾಡಿ ರಕ್ತೇಶ್ವರಿ ದೈವ ಆರಾಧನೆಗೆ ಒಳಗಾಗಿದ್ದ ಪ್ರದೇಶ. ಆದರೆ ಕೆಲವು ವರ್ಷಗಳಿಂದ ರಕ್ತೇಶ್ವರಿ ದೈವದ ಆರಾಧನೆ ಇಲ್ಲಿ ಸ್ಥಗಿತವಾಗಿತ್ತು. ಗ್ರಾಮದಲ್ಲೊಂದು ದೈವಸ್ಥಾನವಿದೆ ಎಂಬ ಬಗ್ಗೆ ಗ್ರಾಮಸ್ಥರಿಗೂ ಗೊತ್ತಿರಲಿಲ್ಲ. ಆದರೆ ಪ್ರಶ್ನಾ ಚಿಂತನೆಯಲ್ಲಿ ದೈವದ ಕುರುಹು ಪತ್ತೆ ಆಗಿದೆ. ಪ್ರಶ್ನಾ ಚಿಂತನೆಯಲ್ಲಿ ನಾಗಾರಧನೆಯ ಸುಳಿವು ಸಿಕ್ಕಿತ್ತು. ಹೀಗಾಗಿ ಎಯ್ಯಾಡಿಯ ಪೊದೆಗಳಿಂದ ಆವರಿಸಿದ್ದ ಜಾಗ ಪ್ರಶ್ನಾ ಚಿಂತನೆಯಲ್ಲಿ ಪತ್ತೆಯಾಗಿತ್ತು. ಆ ಜಾಗದಲ್ಲಿ ದೀಪ ಹಚ್ಚುವಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಯಿತು. ಸೂಚನೆಯಂತೆ ನಾಗನ ಹುತ್ತದ ಬಳಿ ಗ್ರಾಮದ ಜನರು ದೀಪ ಹಚ್ಚುತ್ತಿದ್ದರು. ಇಷ್ಟೆಲ್ಲ ಆದರೂ ಜನರಿಗೆ ಮತ್ತೆ ಮತ್ತೆ ಗೆಜ್ಜೆಯ ಸದ್ದು ಕೇಳಿ ಬರುತ್ತಿತ್ತಂತೆ.

ಅದೇ ಜಾಗದ ಮರವೊಂದರ ಬುಡದ ಬಳಿ ಆ ಗೆಜ್ಜೆ ಸದ್ದು ಕೊನೆಯಾಗ್ತಿತ್ತಂತೆ. ಈ ವೇಳೆ ಮತ್ತೆ ಪ್ರಶ್ನಾ ಚಿಂತನೆ ಹಾಕಿದಾಗ ರಕ್ತೇಶ್ವರಿ ದೈವದ ಇರುವಿಕೆ ಪತ್ತೆಯಾಗಿದೆ. ಮರದ ಬುಡದಲ್ಲೇ ರಕ್ತೇಶ್ವರಿ ದೈವ ನೆಲೆ ನಿಂತಿರೋದು ಚಿಂತನೆಯಲ್ಲಿ ಗೋಚರವಾಗಿದೆ ಎಂದು ಇಲ್ಲಿನ ಗ್ರಾಮಸ್ಥರು ಬೆಳಕಿನ ದರ್ಶನದ ದೈವದ ಪವಾಡದ ಬಗ್ಗೆ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಈಗಲೂ ಮರದ ಬುಡದಲ್ಲೇ ರಕ್ತೇಶ್ವರಿ ದೈವದ ಪ್ರಖರ ಬೆಳಕು, ಗೆಜ್ಜೆ ಸದ್ದು ಅಂತ್ಯವಾಗ್ತಿದೆ. ರಕ್ತೇಶ್ವರಿ ದೈವದ ಪವಾಡ ಇಡೀ ಗ್ರಾಮದ ಜನರ ಅನುಭವಕ್ಕೆ ಬಂದಿದೆ. ಸದ್ಯ ಮರದ ಬುಡದಲ್ಲೇ ದೀಪ ಹಚ್ಚಿ ರಕ್ತೇಶ್ವರಿ ದೈವದ ಆರಾಧನೆ ಮಾಡಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us