AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಮತ್ತಲ್ಲಿ ಯುವಕನ ದಾಂಧಲೆ: ಸಿನಿಮಿಯ ರೀತಿಯಲ್ಲಿ ಲಾಕ್ ಮಾಡಿದ ಮಂಗಳೂರು ಪೊಲೀಸ್​​​​; ವಿಡಿಯೋ ವೈರಲ್​​

ಇತ್ತೀಚಿಗೆ ಯುವ ಜನತೆ ಹೆಚ್ಚಾಗಿ ಮಾದಕ ವಸ್ತುಗಳಿಗೆ ಅಡಿಟ್​ ಆಗುತ್ತಿದ್ದಾರೆ. ಮಾದಕ ವಸ್ತು ಸೇವಿಸಿ ನಶೆಯಲ್ಲಿ ಹುಚ್ಚಾಟವಾಡುತ್ತಾರೆ. ಇದೇರೀತಿ ಗಾಂಜಾ ನಶೆಯಲ್ಲಿ ಮಂಗಳೂರು ಹೊರವಲಯದ ಉಳ್ಳಾಲ ನಾಟೆಕಲ್ ಜಂಕ್ಷನ್ ಬಳಿ ಚೂರಿ ಹಿಡಿದು ರಸ್ತೆ ಮಧ್ಯೆ ಧಾಂದಲೆ ಮಾಡುತ್ತಿದ್ದ ಯುವಕನನ್ನು ಸಿನಿಮಿಯ ರೀತಿಯಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 21, 2023 | 2:02 PM

Share

ಮಂಗಳೂರು: ಇತ್ತೀಚಿಗೆ ಯುವ ಜನತೆ ಹೆಚ್ಚಾಗಿ ಮಾದಕ ವಸ್ತುಗಳಿಗೆ ಅಡಿಟ್​ ಆಗುತ್ತಿದ್ದಾರೆ. ಮಾದಕ ವಸ್ತು (Narcotics) ಸೇವಿಸಿ ನಶೆಯಲ್ಲಿ ಹುಚ್ಚಾಟವಾಡುತ್ತಾರೆ. ಇದೇರೀತಿ ಗಾಂಜಾ ನಶೆಯಲ್ಲಿ ಮಂಗಳೂರು ಹೊರವಲಯದ ಉಳ್ಳಾಲ (Ullal) ನಾಟೆಕಲ್ ಜಂಕ್ಷನ್ ಬಳಿ ಚೂರಿ ಹಿಡಿದು ರಸ್ತೆ ಮಧ್ಯೆ ಧಾಂದಲೆ ಮಾಡುತ್ತಿದ್ದ ಯುವಕನನ್ನು ಸಿನಿಮಿಯ ರೀತಿಯಲ್ಲಿ ಮಂಗಳೂರು ಪೊಲೀಸರು (Mangaluru Police) ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್ (24) ಬಂಧಿತ ಆರೋಪಿ.

ಅಬ್ಬೂಬಕ್ಕರ್ ಸಿದ್ಧೀಕ್ ಗಾಂಜಾ ದೊಂದಿಗೆ ಇತರ ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ನಾಟೆಕಲ್ ರಸ್ತೆಯ ಡಿವೈಡರ್ ಮೇಲೆ ನಿಂತು ಜನರಿಗೆ ಚೂರಿ‌ ತೋರಿಸಿ ಬೆದರಿಕೆ ಹಾಕುತ್ತಿದ್ದನು. ಯುವಕನ ಹುಚ್ಚಾಟ ಕಂಡು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನ ಮನ ಒಲಿಸಲು ಯತ್ನಿಸಿದ್ದಾರೆ. ಆದರೆ ಅಬ್ಬೂಬಕ್ಕರ್ ಸಿದ್ದೀಕ್ ಪೊಲೀಸರ ಮಾತಿಗೆ ಬಗ್ಗಿಲ್ಲ. ಈ ವೇಳೆ ಪೊಲೀಸರು ಚಾಣಾಕ್ಷತನ ಪ್ರದರ್ಶಿಸಿದ್ದಾರೆ. ಅಬ್ಬೂಬಕ್ಕರ್ ಸಿದ್ಧೀಕ್ ಮುಂದೆ ಅಣತೆ ದೂರದಲ್ಲಿ ನಿಂತು ಕೆಲ ಪೊಲೀಸರು ಆತನನ್ನು ಮಾತನಾಡಿಸಲು ಆರಂಭಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಕಾಲೇಜಿನಲ್ಲಿ ಬಿಲ್ಡಪ್ ಕೊಡ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

ಈ ವೇಳೆ ಸಿವಿಲ್​ ಡ್ರೆಸ್​​ನಲ್ಲಿದ್ದ ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಸಂತೋಷ್ ಅಬ್ಬೂಬಕ್ಕರ್ ಸಿದ್ಧೀಕ್​ಗೆ ತಿಳಿಯದಂತೆ ಆತನ ಹಿಂದೆ ಹೋಗಿ ಅಬ್ಬೂಬಕ್ಕರ್ ಸಿದ್ಧೀಕ್​ಯ ಎರಡು ತೋಳುಗಳಲ್ಲಿ ಕೈ ಹಾಕಿ ಲಾಕ್​​ ಮಾಡಿದ್ದಾರೆ. ನಂತರ ಆತನನ್ನು ಪೊಲೀಸ್​ ವಾಹನದಲ್ಲಿ ಹಾಕಿಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸ್ ಸಿಬ್ಬಂದಿ ‌ಸಂತೋಷ್ ಅವರ ಸಾಹಸಕ್ಕೆ‌ ಶ್ಲಾಘನೆ ವ್ಯಕ್ತವಾಗುತ್ತಿದೆ. ಇನ್ನು ಪೊಲೀಸರ ಕಾರ್ಯಾಚರಣೆ ಮೊಬೈಲ್​ನಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?