AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಮತ್ತಲ್ಲಿ ಯುವಕನ ದಾಂಧಲೆ: ಸಿನಿಮಿಯ ರೀತಿಯಲ್ಲಿ ಲಾಕ್ ಮಾಡಿದ ಮಂಗಳೂರು ಪೊಲೀಸ್​​​​; ವಿಡಿಯೋ ವೈರಲ್​​

ಇತ್ತೀಚಿಗೆ ಯುವ ಜನತೆ ಹೆಚ್ಚಾಗಿ ಮಾದಕ ವಸ್ತುಗಳಿಗೆ ಅಡಿಟ್​ ಆಗುತ್ತಿದ್ದಾರೆ. ಮಾದಕ ವಸ್ತು ಸೇವಿಸಿ ನಶೆಯಲ್ಲಿ ಹುಚ್ಚಾಟವಾಡುತ್ತಾರೆ. ಇದೇರೀತಿ ಗಾಂಜಾ ನಶೆಯಲ್ಲಿ ಮಂಗಳೂರು ಹೊರವಲಯದ ಉಳ್ಳಾಲ ನಾಟೆಕಲ್ ಜಂಕ್ಷನ್ ಬಳಿ ಚೂರಿ ಹಿಡಿದು ರಸ್ತೆ ಮಧ್ಯೆ ಧಾಂದಲೆ ಮಾಡುತ್ತಿದ್ದ ಯುವಕನನ್ನು ಸಿನಿಮಿಯ ರೀತಿಯಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 21, 2023 | 2:02 PM

Share

ಮಂಗಳೂರು: ಇತ್ತೀಚಿಗೆ ಯುವ ಜನತೆ ಹೆಚ್ಚಾಗಿ ಮಾದಕ ವಸ್ತುಗಳಿಗೆ ಅಡಿಟ್​ ಆಗುತ್ತಿದ್ದಾರೆ. ಮಾದಕ ವಸ್ತು (Narcotics) ಸೇವಿಸಿ ನಶೆಯಲ್ಲಿ ಹುಚ್ಚಾಟವಾಡುತ್ತಾರೆ. ಇದೇರೀತಿ ಗಾಂಜಾ ನಶೆಯಲ್ಲಿ ಮಂಗಳೂರು ಹೊರವಲಯದ ಉಳ್ಳಾಲ (Ullal) ನಾಟೆಕಲ್ ಜಂಕ್ಷನ್ ಬಳಿ ಚೂರಿ ಹಿಡಿದು ರಸ್ತೆ ಮಧ್ಯೆ ಧಾಂದಲೆ ಮಾಡುತ್ತಿದ್ದ ಯುವಕನನ್ನು ಸಿನಿಮಿಯ ರೀತಿಯಲ್ಲಿ ಮಂಗಳೂರು ಪೊಲೀಸರು (Mangaluru Police) ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್ (24) ಬಂಧಿತ ಆರೋಪಿ.

ಅಬ್ಬೂಬಕ್ಕರ್ ಸಿದ್ಧೀಕ್ ಗಾಂಜಾ ದೊಂದಿಗೆ ಇತರ ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ನಾಟೆಕಲ್ ರಸ್ತೆಯ ಡಿವೈಡರ್ ಮೇಲೆ ನಿಂತು ಜನರಿಗೆ ಚೂರಿ‌ ತೋರಿಸಿ ಬೆದರಿಕೆ ಹಾಕುತ್ತಿದ್ದನು. ಯುವಕನ ಹುಚ್ಚಾಟ ಕಂಡು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನ ಮನ ಒಲಿಸಲು ಯತ್ನಿಸಿದ್ದಾರೆ. ಆದರೆ ಅಬ್ಬೂಬಕ್ಕರ್ ಸಿದ್ದೀಕ್ ಪೊಲೀಸರ ಮಾತಿಗೆ ಬಗ್ಗಿಲ್ಲ. ಈ ವೇಳೆ ಪೊಲೀಸರು ಚಾಣಾಕ್ಷತನ ಪ್ರದರ್ಶಿಸಿದ್ದಾರೆ. ಅಬ್ಬೂಬಕ್ಕರ್ ಸಿದ್ಧೀಕ್ ಮುಂದೆ ಅಣತೆ ದೂರದಲ್ಲಿ ನಿಂತು ಕೆಲ ಪೊಲೀಸರು ಆತನನ್ನು ಮಾತನಾಡಿಸಲು ಆರಂಭಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಕಾಲೇಜಿನಲ್ಲಿ ಬಿಲ್ಡಪ್ ಕೊಡ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

ಈ ವೇಳೆ ಸಿವಿಲ್​ ಡ್ರೆಸ್​​ನಲ್ಲಿದ್ದ ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಸಂತೋಷ್ ಅಬ್ಬೂಬಕ್ಕರ್ ಸಿದ್ಧೀಕ್​ಗೆ ತಿಳಿಯದಂತೆ ಆತನ ಹಿಂದೆ ಹೋಗಿ ಅಬ್ಬೂಬಕ್ಕರ್ ಸಿದ್ಧೀಕ್​ಯ ಎರಡು ತೋಳುಗಳಲ್ಲಿ ಕೈ ಹಾಕಿ ಲಾಕ್​​ ಮಾಡಿದ್ದಾರೆ. ನಂತರ ಆತನನ್ನು ಪೊಲೀಸ್​ ವಾಹನದಲ್ಲಿ ಹಾಕಿಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸ್ ಸಿಬ್ಬಂದಿ ‌ಸಂತೋಷ್ ಅವರ ಸಾಹಸಕ್ಕೆ‌ ಶ್ಲಾಘನೆ ವ್ಯಕ್ತವಾಗುತ್ತಿದೆ. ಇನ್ನು ಪೊಲೀಸರ ಕಾರ್ಯಾಚರಣೆ ಮೊಬೈಲ್​ನಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!