AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ: ಗ್ಯಾಂಗ್​ ರೇಪ್​ ಶಂಕೆ

ಮಂಗಳೂರು ಹೊರವಲಯದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಹೊರ ರಾಜ್ಯದ ಯುವತಿ ಪತ್ತೆಯಾಗಿದ್ದಾರೆ. ಅವರ ಮೈಮೇಲೆ ಗಾಯಗಳಿದ್ದು, ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ.ತಡರಾತ್ರಿ ನಶೆಯಲ್ಲಿದ್ದ ಯುವತಿ ಸ್ಥಳೀಯರ ಮನೆ ಬಾಗಿಲು ಬಡಿದಿದ್ದಾರೆ. ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳ್ಳಾಲ ಠಾಣೆಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ: ಗ್ಯಾಂಗ್​ ರೇಪ್​ ಶಂಕೆ
ಸಾಂದರ್ಭಿಕ ಚಿತ್ರ
ಅಶೋಕ್​ ಪೂಜಾರಿ, ಮಂಗಳೂರು
| Edited By: ವಿವೇಕ ಬಿರಾದಾರ|

Updated on:Apr 17, 2025 | 4:54 PM

Share

ಮಂಗಳೂರು, ಏಪ್ರಿಲ್​ 17: ಮಂಗಳೂರು (Mangaluru) ಹೊರವಲಯದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಅಂತರರಾಜ್ಯದ ಯುವತಿ ಪತ್ತೆಯಾಗಿದ್ದಾರೆ. ಯುವತಿ ಮೈಮೇಲೆ ಗಾಯದ ಗುರುತು ಪತ್ತೆಯಾಗಿದ್ದು ಮೇಲೆ ಸಾಮೂಹಿಕವಾಗಿ ಅತ್ಯಾಚಾರ (Gang Rape) ಎಸಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಯುವತಿ ನಶೆಯಲ್ಲಿ ಸ್ಥಳೀಯರ ಮನೆ ಬಾಗಿಲು ಬಡಿದಿದ್ದರು. ನೀರು ಕೇಳಿ ಯುವತಿ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬುಧವಾರ (ಏ.16) ತಡರಾತ್ರಿ ಅಪರಿಚಿತ ನಾಲ್ವರ ತಂಡವೊಂದು ಬಂದಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ದೊರೆತಿದೆ. ಸದ್ಯ ಉಳ್ಳಾಲ ಠಾಣೆಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಪಡೆಯುತ್ತಿರುವ ಯುವತಿಯನ್ನು ಪೊಲೀಸರು ವಿಚಾರಣೆ ನಡೆಸಿದರು.

ಠಾಣಾ ಸರಹದ್ದಿನಲ್ಲಿ ಪ್ರದೇಶದಲ್ಲಿ ನಿರ್ಜನ ಮನೆಯೊಂದಿದೆ. ಅಲ್ಲಿಗೆ, ನಿತ್ಯ ತಡರಾತ್ರಿ ಗಾಂಜಾ, ಅಮಲು ವ್ಯಸನಿಗಳು ನಿತ್ಯ ಬರುತ್ತಿರುತ್ತಾರೆ. ಅಲ್ಲೇ ಬುಧವಾರ ತಡರಾತ್ರಿ ನಾಲ್ವರ ತಂಡವೂ ಇತ್ತು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆದರೆ ಯುವತಿ ನೆರೆಮನೆಗೆ ಬರುತ್ತಿದ್ದಂತೆ ನಾಲ್ವರ ತಂಡ ಪರಾರಿಯಾಗಿದೆ ತಿಳಿದುಬಂದಿದೆ.

ಇದನ್ನೂ ಓದಿ
Image
ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ: ವಾರ್ಷಿಕ ಆದಾಯ 155.95 ಕೋಟಿ
Image
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ನಾಲ್ವರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ
Image
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
Image
ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ!

ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ ಶಂಕೆ

ಯುವತಿ ಪಶ್ಚಿಮ ಬಂಗಾಳ ಮೂಲದವರು ಎಂದು ತಿಳಿದು ಬಂದಿದೆ. ಆದರೆ, ಯುವತಿ ಕೇರಳದ ಉಪ್ಪಳ ಎಂಬಲ್ಲಿ ವಾಸವಾಗಿದ್ದರು. ಆಟೋ ರಿಕ್ಷಾದಲ್ಲಿ ಯುವತಿಯನ್ನು ಕರೆತಂದು, ವಿಪರೀತ ಮದ್ಯ ಕುಡಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಅನುಮಾನ ವ್ಯಕ್ತವಾಗಿದೆ. ಆಟೋ ಚಾಲಕ ಸಹಿತ ಮತ್ತೆ ಇಬ್ಬರು ಯುವಕರು ಜೊತೆಗಿದ್ದ ಶಂಕೆ ಇದೆ. ದೌರ್ಜನ್ಯ ಎಸಗಿ ಯುವತಿಯನ್ನು ಬಿಟ್ಟು ತೆರಳಿರುವ ಸಾಧ್ಯತೆ ಇದೆ.

ಆ ಬಳಿಕ ಯುವತಿ ನಡುರಾತ್ರಿ ಪಕ್ಕದ ಮನೆಯ ಬಾಗಿಲು ಬಡಿದಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸಿಸಿಟಿವಿ ಕ್ಯಾಮೆರಾ ಆಧಾರದಲ್ಲಿ ಆಟೋ ರಿಕ್ಷಾ ಮಾಹಿತಿ ಲಭ್ಯವಾಗಿದೆ. ಕಡೆಯದಾಗಿ ಆಟೋ ಚಾಲಕನಿಗೆ ಯುವತಿ ಮೊಬೈಲ್​ನಿಂದ 60 ರೂಪಾಯಿ ಗೂಗಲ್ ಪೇ ಮಾಡಲಾಗಿದೆ. ಇದೇ ಆಧಾರದಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮಂಗಳೂರು ಬೆಂಗಳೂರು ಸಂಚಾರ ಮಾರ್ಗದಲ್ಲಿ ಮಹತ್ವದ ಬದಲಾವಣೆ

ಇನ್ನು, ಯುವತಿಯನ್ನು ರಕ್ಷಣೆ ಮಾಡಿದ ಸ್ಥಳೀಯ ನಿವಾಸಿ ಪ್ರವೀಣ್ ಮಾತನಾಡಿ, ಮಧ್ಯರಾತ್ರಿ‌ 12:30ಕ್ಕೆ ಯುವತಿ ಬಂದು ಬಾಗಿಲು‌‌ ತಟ್ಟಿದರು. ಅವರ ಕುತ್ತಿಗೆ ಸೇರಿದಂತೆ ಮೈಮೇಲೆ ಗಾಯವಿತ್ತು. ಕುಡಿಯೋದಕ್ಕೆ ನೀರು ಕೇಳಿದರು. ಆಟೋ ರಿಕ್ಷಾದಲ್ಲಿ ಯಾರೋ ನನ್ನನ್ನು ಕರ್ಕೊಂಡು ಬಂದು‌ ಬಿಟ್ಟು ಹೋಗಿರೋದಾಗಿ ಹೇಳಿದರು. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರು. ಊರು‌ ಯಾವುದೆಂದು ಕೇಳಿದಾಗ ಬಿಹಾರ ಎಂದು ಹೇಳಿದ್ದಾರೆ.

ತಕ್ಷಣ ಪೊಲೀಸರಿಗೆ ಕರೆ ಮಾಡಿ‌‌ ವಿಚಾರ ತಿಳಿಸಿದೆವು.ಪೊಲೀಸರು ಬಂದು ಯುವತಿಯನ್ನು‌ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಯುವತಿ ನಶೆಯಲ್ಲಿದ್ದರು. ಈ ಪ್ರದೇಶಕ್ಕೆ ರಾತ್ರಿ ಹೊತ್ತು ಅಪರಿಚಿತ ಯುವಕರು ಬರುತ್ತಾರೆ. ಈ ಬಗ್ಗೆ ಪೊಲೀಸರಿಗೂ‌ ದೂರು ನೀಡಿದ್ದೆವು ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Thu, 17 April 25

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ