AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ತಂಗಡಿಯಲ್ಲಿ ಬೆತ್ತಲೆ ವಿಡಿಯೋ ಕಾಲ್ ಗೆ ಬಿತ್ತು ಹೆಣ! ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಅಪರಿಚಿತಳ ಮೊಬೈಲ್ ನಲ್ಲಿ ಇವರ ಮುಖ ಸೆರೆಯಾಗಿರುತ್ತೆ. ಅದರ ಸ್ಕ್ರೀನ್ ಶಾಟ್ ಮತ್ತು ರೆಕಾರ್ಡ್ ಮಾಡಿಕೊಂಡು ಅದನ್ನೆ ದಾಳವಾಗಿ ಉಪಯೋಗಿಸೋದು ಈ ತಂಡದ ಪ್ಲಾನ್.

ಬೆಳ್ತಂಗಡಿಯಲ್ಲಿ ಬೆತ್ತಲೆ ವಿಡಿಯೋ ಕಾಲ್ ಗೆ ಬಿತ್ತು ಹೆಣ! ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಯುವಕ
ಬೆಳ್ತಂಗಡಿಯಲ್ಲಿ ಬೆತ್ತಲೆ ವಿಡಿಯೋ ಕಾಲ್ ಗೆ ಬಿತ್ತು ಹೆಣ
TV9 Web
| Updated By: ಸಾಧು ಶ್ರೀನಾಥ್​|

Updated on: Jan 31, 2023 | 5:27 PM

Share

ಕರಾವಳಿಯಲ್ಲಿ ವ್ಯವಸ್ಥಿತವಾಗಿ ಬ್ಲಾಕ್ ಮೇಲ್ (blackmail) ಮಾಡುವ ಜಾಲ ಬೀಡುಬಿಟ್ಟಿದೆ. ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರೇ ಇವರ ಟಾರ್ಗೆಟ್. ಆ ಗ್ಯಾಂಗ್​ನ ಪೈಕಿ ಯಾವುದಾದರೂ ಸುಂದರ ಯುವತಿಯ ಅಂಗಾಂಗ ನೋಡಿ ಜೊಲ್ಲು ಸುರಿಸಿದ್ರೆ… ನಿಮ್ಮ ಜೇಬಿಗೆ ಕತ್ತರಿ ಬಿತ್ತು ಅಂತಾನೆ ಅರ್ಥ. ಇದೇ ಗ್ಯಾಂಗ್ ನಿಂದಾಗಿ ಅಮಾನಯಕ ಯುವಕನೊಬ್ಬನ ಪ್ರಾಣ ಹೋಗಿದೆ (suicide). ಇದೇನು ಸ್ಟೋರಿ. ನೀವೆ ನೋಡಿ. ಮಗನನ್ನು ಕಳೆದುಕೊಂಡು ಗೋಳಾಡುತ್ತಿರೋ ಪೋಷಕರು. ಮುಗ್ದನೊಬ್ಬನ ಸಾವಿನಲ್ಲಿ ಕಂಬಿನಿ ಮಿಡಿಯುತ್ತಿರೋ ಇಡೀ ಗ್ರಾಮಸ್ಥರು ಸ್ನೇಹಿತರು ಬಂಧು ಬಳಗ. ಹೌದು ಅಲ್ಲಿ ಹದಿಹರೆಯದ ಯುವಕನೊಬ್ಬ ಅನ್ಯಾಯವಾಗಿ ಸಾವಿಗೀಡಾಗಿದ್ದ. ಮೃತಪಟ್ಟವನ ಹೆಸರು ಹರ್ಷಿತ್. 19 ವರ್ಷ ವಯಸ್ಸು. ದಕ್ಷಿಣ ಕನ್ನಡ ಜಿಲ್ಲೆ (Dakshina Kannada) ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನಿವಾಸಿ. ಬೆಳ್ತಂಗಡಿ (Belthangady) ಗುರುದೇವ ಕಾಲೇಜ್‌ ನಲ್ಲಿ 2 ನೇ ವರ್ಷದ ಬಿ.ಕಾಂ. ಪದವಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ.

ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ಯುವತಿಯೊಬ್ಬಳು ಹರ್ಷಿತ್ ಸಂಪರ್ಕಕ್ಕೆ ಬಂದಿದ್ದಾಳೆ. ಇನ್‌ ಸ್ಟಾಗ್ರಾಂ ಮೂಲಕ ಚಾಟಿಂಗ್‌ ಮಾಡಿಕೊಂಡಿದ್ದು, ನಂತರ ಹರ್ಷಿತ್ ಮೊಬೈಲ್‌ ಗೆ ವಿಡಿಯೋ ಕಾಲ್‌ ಮಾಡಿದ್ದಾಳೆ. 3 ಸೆಕಂಡ್ ಗಳಲ್ಲಿ ವಿಡಿಯೋ ಕಾಲ್ ನ್ನು ಹರ್ಷಿತ ಕಟ್ ಮಾಡಿದ್ದಾನೆ. ನಂತರ ಯುವಕನೊಬ್ಬ ಕರೆ ಮಾಡಿ ನಿನ್ನ ವೈಯಕ್ತಿಕ ವಿಡಿಯೋ ನನ್ನ ಬಳಿ ಇದೆ. ಇದನ್ನು ಸಾರ್ವಜನಿಕವಾಗಿ ವೈರಲ್‌ ಮಾಡುತ್ತೇನೆ. ವೈರಲ್‌ ಮಾಡಬಾರದು ಎಂದಾದರೆ ತನಗೆ 11,000 ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾಳೆ.

ಹಣ ಕೊಡಲು ಜನವರಿ 23 ರವರೆಗೆ ಅವಕಾಶ ಕೊಡುವಂತೆ ಕೇಳಿದ್ದು, ಆದರೆ ಹಣ ಹೊಂದಾಣಿಕೆಯಾಗಿಲ್ಲ. ವೈಯಕ್ತಿಕ ವಿಡಿಯೋ ವನ್ನು ವೈರಲ್‌ ಮಾಡಿದರೆ ಮಾನ ಹೋಗುತ್ತದೆ ಎಂದು ಅಂಜಿದ ಹರ್ಷಿತ್, ಭಯದಿಂದ ಮೊನ್ನೆ ಭಾನುವಾರ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸೋಮವಾರ ಮೃತಪಟ್ಟಿದ್ದಾನೆ ಎಂದು ಸ್ಥಳೀಯ ನಿವಾಸಿ ಯತೀಶ್ ಧರ್ಮಸ್ಥಳ ಹೇಳಿದ್ದಾರೆ.

ಇನ್ನು ಈ ಜಾಲಕ್ಕೆ ಸಿಲುಕಿದ್ದು ಹರ್ಷಿತ್ ಮಾತ್ರವಲ್ಲ. ಆತನ ಮೂವರು ಸ್ನೇಹಿತರೂ ಕೂಡ ಇದೇ ರೀತಿ ಬ್ಲಾಕ್ ಮೇಲ್ ಗೆ ಒಳಗಾಗಿದ್ರು. ಅಪರಿಚಿತ ಹುಡುಗಿ ವಿಡಿಯೋ ಕಾಲ್ ಮಾಡುತ್ತಾಳೆ. ಆಗ ಆಕೆ ಬೆತ್ತಲಾಗಿರುತ್ತಾಳೆ. ಆಕೆಯ ಮುಖ ಕಾಣುತ್ತಿರೋದಿಲ್ಲ. ವಿಡಿಯೋ ಕಾಲ್ ರಿಸೀವ್ ಮಾಡಿ ಅಲ್ಲಿ ಏನು ಕಾಣುತ್ತಿದೆ ಅಂತಾ ನೋಡುವಷ್ಟರಲ್ಲೇ ಕಾಲ್ ಕಟ್ ಆಗುತ್ತೆ.

ಅಪರಿಚಿತಳ ಮೊಬೈಲ್ ನಲ್ಲಿ ಇವರ ಮುಖ ಸೆರೆಯಾಗಿರುತ್ತೆ. ಅದರ ಸ್ಕ್ರೀನ್ ಶಾಟ್ ಮತ್ತು ರೆಕಾರ್ಡ್ ಮಾಡಿಕೊಂಡು ಅದನ್ನೆ ದಾಳವಾಗಿ ಉಪಯೋಗಿಸೋದು ಈ ತಂಡದ ಪ್ಲಾನ್. ಹೀಗೆ ಇವರಿಂದ ಮೋಸ ಹೋದವರು ಅದೆಷ್ಟೋ ಬಾರಿ ಸಾಕಷ್ಟು ಹಣವನ್ನು ಅವರ ಖಾತೆಗೆ ಹಾಕಿದ್ದಾರೆ ಎಂದು ಈ ದುರುಳರ ಬ್ಲಾಕ್ ಮೇಲ್ ಜಾಲವನ್ನು ಎಳೆ ಎಳೆಯಾಗಿ ಬಿಡಿಸಿಡುತ್ತಾರೆ ಇಲ್ಲಿನ ಯುವಕರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಜನರಿಗೆ ಇದೇ ರೀತಿ ಮೋಸವಾಗಿದೆ. ಕೆಲವರು ಹಣ ಕೊಟ್ಟು ಕೈತೊಳೆದುಕೊಂಡಿದ್ದಾರೆ. ಇನ್ನು ಕೆಲವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೋನ್ ನಂಬರ್ ಮತ್ತು ಅಕೌಂಟ್ ಡೀಟೇಲ್ಸ್ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆದ್ರೆ ಈ ಕಿರಾತಕ ಬುದ್ದಿಗೆ ಒಂದು ಅಮಾಯಕ ಪ್ರಾಣ ಬಿಟ್ಟಿದ್ದು ನಿಜಕ್ಕೂ ದುರಂತ.

ವರದಿ: ಪೃಥ್ವಿರಾಜ್ ಬೊಮ್ಮನಕೆರೆ, ಟಿವಿ9, ಮಂಗಳೂರು 

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!