AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Whats App ಮೂಲಕ ಬಡ ಕುಟುಂಬಕ್ಕೆ ಸೂರು ನಿರ್ಮಿಸಿದ ಯುವಕರು

ಮಂಗಳೂರು: ಲಾಕ್​ಡೌನ್ ಸಮಯದಲ್ಲಿ ಎಲ್ಲರೂ ಮನೆಯೊಳಗಿದ್ದು ಆರೋಗ್ಯ ಮತ್ತು ಭವಿಷ್ಯದ ಚಿಂತೆಯಲ್ಲಿದ್ರೆ ಅಲ್ಲೊಂದು ಯುವಕರ ಗುಂಪು ಮತ್ತೊಬ್ಬರ ಬದುಕು ಕಟ್ಟುವ ಕೆಲಸ ಮಾಡಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ವಾಟ್ಸಪ್ ಗ್ರೂಪ್ ರಚಿಸಿದೆ. ಇವರು ದಾನಿಗಳ ನೆರವಿನ ಜೊತೆಗೆ ಶ್ರಮದಾನದ ಮೂಲಕ ಬಡ ಕುಟುಂಬವೊಂದಕ್ಕೆ ಮನೆ ಕಟ್ಟಿ ಮಾದರಿಯಾಗಿದ್ದಾರೆ. 2.5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ […]

Whats App ಮೂಲಕ ಬಡ ಕುಟುಂಬಕ್ಕೆ ಸೂರು ನಿರ್ಮಿಸಿದ ಯುವಕರು
ಸಾಧು ಶ್ರೀನಾಥ್​
|

Updated on: May 26, 2020 | 3:48 PM

Share

ಮಂಗಳೂರು: ಲಾಕ್​ಡೌನ್ ಸಮಯದಲ್ಲಿ ಎಲ್ಲರೂ ಮನೆಯೊಳಗಿದ್ದು ಆರೋಗ್ಯ ಮತ್ತು ಭವಿಷ್ಯದ ಚಿಂತೆಯಲ್ಲಿದ್ರೆ ಅಲ್ಲೊಂದು ಯುವಕರ ಗುಂಪು ಮತ್ತೊಬ್ಬರ ಬದುಕು ಕಟ್ಟುವ ಕೆಲಸ ಮಾಡಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ವಾಟ್ಸಪ್ ಗ್ರೂಪ್ ರಚಿಸಿದೆ. ಇವರು ದಾನಿಗಳ ನೆರವಿನ ಜೊತೆಗೆ ಶ್ರಮದಾನದ ಮೂಲಕ ಬಡ ಕುಟುಂಬವೊಂದಕ್ಕೆ ಮನೆ ಕಟ್ಟಿ ಮಾದರಿಯಾಗಿದ್ದಾರೆ.

2.5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಈ ಎರಡು ಯುವಕ ಮಂಡಲದ ಸದಸ್ಯರು ಶ್ರಮದಾನ ನಡೆಸುವ ಮೂಲಕ ಅಸಹಾಯಕ ಕುಟುಂಬವೊಂದಕ್ಕೆ ಆಸರೆಯಾಗಿ ಸುಮಾರು 2.5 ಲಕ್ಷ ರೂ. ವೆಚ್ಚದಲ್ಲಿ ಮನೆಯೊಂದನ್ನು ನಿರ್ಮಿಸಿ ಹಸ್ತಾಂತರಿಸಲು ಸಿದ್ಧತೆ ನಡೆಸಿದ್ದಾರೆ. ಸವಣೂರು ಗ್ರಾಮ ಪಂಚಾಯತ್‌ನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕದ ಮಾಣಿ ಎಂಬವರ ಮಗಳು ಸುಂದರಿ ಅವರು ತನ್ನ ಮಕ್ಕಳಾದ ಆಶಾ, ಧನ್ವಿ, ಸನತ್ ಜತೆ ಸಣ್ಣ ಟರ್ಪಾಲ್ ಕಟ್ಟಿದ ಜೋಪಡಿಯಲ್ಲಿ ವಾಸವಾಗಿದ್ದಾರೆ. ಕಟ್ಟಿಗೆ ದಾಸ್ತಾನಿನಂತಿರುವ ಸಣ್ಣ ಮನೆ, ಅಡುಗೆ ಕೋಣೆಯಿಂದ ಹಿಡಿದು ಎಲ್ಲವೂ ಅದರಲ್ಲಿಯೇ ನಡೆಯಬೇಕು.

ಮಳೆ ಬಂದರೆ ಸೋರುವ ಮೇಲ್ಛಾವಣಿ, ಭದ್ರತೆ ಇಲ್ಲವೇ ಇಲ್ಲದಂತಹ ಅಸಹಾಯಕ ಸ್ಥಿತಿಯಲ್ಲಿಯೇ ಜೀವನ ಕಳೆಯುತ್ತಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಇಲ್ಲಿನ ಯುವಕ ಮಂಡಲ ಹಾಗೂ ಸೇವಾ ಭಾರತಿ ವತಿಯಿಂದ ಆಹಾರದ ಕಿಟ್ ಕೊಡುವ ಸಂದರ್ಭದಲ್ಲಿ ಇವರ ದಯನೀಯ ಸ್ಥಿತಿ ಕಂಡು, ಈ ಮಳೆಗಾಲದಲ್ಲಿ ಈ ಮನೆಯಲ್ಲಿರುವುದು ಕಷ್ಟಕರ ಎಂಬುದನ್ನು ಅರಿತು ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು.

ಕಟ್ಟೋಣ ಬಾಳಿಗೊಂದು ಸೂರು ಇವರ ಮನೆಯ ದಾಖಲೆ ಪತ್ರಗಳು ಸರಿಯಿಲ್ಲದ ಕಾರಣ ಸರ್ಕಾರದ ನಿವೇಶನವೂ ದೊರಕಿರಲಿಲ್ಲ. ಇದಕ್ಕಾಗಿ ವಾಟ್ಸಾಪ್​ನಲ್ಲಿ ಕಟ್ಟೋಣ ಬಾಳಿಗೊಂದು ಸೂರು ಎಂಬ ಗುಂಪು ರಚಿಸಿದ್ದಾರೆ. ದಾನಿಗಳನ್ನು, ಯುವಕ ಮಂಡಲಗಳ ಸದಸ್ಯರನ್ನು ಸೇರಿಸಿ ಕಾರ್ಯೋನ್ಮುಖರಾಗಿದ್ದಾರೆ. ಇದೀಗ ಮನೆ ನಿರ್ಮಾಣದ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದೆ.

ಗ್ರಾಮ ಪಂಚಾಯತ್​ನ ಕುಡಿಯುವ ನೀರಿನ ಸಂಪರ್ಕ ಬಿಟ್ಟರೆ ಬೇರೆ ಯಾವುದೇ ನೀರಿನಾಶ್ರಯ ಇಲ್ಲದಿರುವುದರಿಂದ ಪುತ್ತೂರು ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ‌ ನವೀನ್ ಭಂಡಾರಿ ಅವರು ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಬಾವಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರು. ಜೂನ್ 5 ರೊಳಗೆ ಮನೆ ನಿರ್ಮಾಣ ಪೂರ್ಣಗೊಳಿಸಿ‌ ಕುಟುಂಬಕ್ಕೆ ಹಸ್ತಾಂತರ ಮಾಡುವ ಇರಾದೆ ಈ ತಂಡಕ್ಕೆ ಇದೆ.

ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸಮೀಪದಲ್ಲಿ ನಿರ್ಗತಿಕ ಕುಟುಂಬವೊಂದಕ್ಕೆ ಸವಣೂರು ಗ್ರಾ.ಪಂ ಅಧ್ಯಕ್ಷೆ ಬಿ.ಕೆ.ಇಂದಿರಾ, ಸದಸ್ಯ ಸತೀಶ್ ಅಂಗಡಿಮೂಲೆ, ಸಾಮಾಜಿಕ ಕಾರ್ಯಕರ್ತ, ವಿದ್ಯುತ್ ಗುತ್ತಿಗೆದಾರ ಸುಬ್ರಾಯ ಗೌಡ ಅವರ ನೇತೃತ್ವದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ಇದರ ಸಹಭಾಗಿತ್ವದಲ್ಲಿ ಮನೆ ನಿರ್ಮಾಣ ಮಾಡುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ.

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ