AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalit murder: ಬೀರನಕುಪ್ಪದಲ್ಲಿ ದಲಿತ ಗ್ರಾಮಸ್ಥನ ಹತ್ಯೆ -ಸಿಐಡಿ ತನಿಖೆಗೆ ಆಗ್ರಹಿಸಿ ಕೆಜಿಎಫ್​ ಎಸ್ಪಿ ಕಚೇರಿವರೆಗೆ 12 ಕಿಮೀ ಪಾದಯಾತ್ರೆ

KGF: ಗ್ರಾಮದಲ್ಲಿ ಇಂದಿಗೂ ಕೊಲೆಯಾದ ನಾರಾಯಣಪ್ಪ ಕುಟುಂಬಸ್ಥರು ಗ್ರಾಮಕ್ಕೆ ಹೋಗಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನದ ಹಿಂದಷ್ಟೇ ಬೀರನಕುಪ್ಪ ಗ್ರಾಮಕ್ಕೆ ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು.

Dalit murder: ಬೀರನಕುಪ್ಪದಲ್ಲಿ ದಲಿತ ಗ್ರಾಮಸ್ಥನ ಹತ್ಯೆ -ಸಿಐಡಿ ತನಿಖೆಗೆ ಆಗ್ರಹಿಸಿ ಕೆಜಿಎಫ್​ ಎಸ್ಪಿ ಕಚೇರಿವರೆಗೆ 12 ಕಿಮೀ ಪಾದಯಾತ್ರೆ
ಬೀರನಕುಪ್ಪದಲ್ಲಿ ದಲಿತ ಗ್ರಾಮಸ್ಥನ ಹತ್ಯೆ: ಸಿಐಡಿ ತನಿಖೆಗೆ ಆಗ್ರಹಿಸಿ, ಕೆಜಿಎಫ್​ ಎಸ್ಪಿ ಕಚೇರಿವರೆಗೆ 12 ಕಿಮೀ ಪಾದಯಾತ್ರೆ
TV9 Web
| Updated By: ಸಾಧು ಶ್ರೀನಾಥ್​|

Updated on:May 30, 2022 | 8:28 PM

Share

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಬೀರನಕುಪ್ಪ ಗ್ರಾಮದಲ್ಲಿ ಮೇ 9 ರಂದು ರಾತ್ರಿ ಗ್ರಾಮದ ನಾರಾಯಣಪ್ಪ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀರನಕುಪ್ಪ ಗ್ರಾಮದಲ್ಲಿ ಇಂದಿಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೃಷ್ಣಾರೆಡ್ಡಿ ಹಾಗೂ ಆತನ ಕುಟುಂಬದವರು ದಲಿತ ಜನಾಂಗಕ್ಕೆ ಸೇರಿದ್ದ ನಾರಾಯಣಪ್ಪನನ್ನು ಅವರದ್ದೇ ಮನೆಯಲ್ಲಿ ಅಟ್ಟಾಡಿಸಿ ಬರ್ಬರವಾಗಿ ಕೊಂದು ಅವರ ಇಡೀ ಕುಟುಂಬವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಗ್ರಾಮದಲ್ಲಿ ಇಂದಿಗೂ ಕೊಲೆಯಾದ ನಾರಾಯಣಪ್ಪ ಕುಟುಂಬಸ್ಥರು ಗ್ರಾಮಕ್ಕೆ ಹೋಗಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನದ ಹಿಂದಷ್ಟೇ ಬೀರನಕುಪ್ಪ ಗ್ರಾಮಕ್ಕೆ ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು. ಇದರ ಬೆನ್ನಲ್ಲೇ ಇಂದು ಕೋಲಾರ ಜಿಲ್ಲಾ ಬೋವಿ ಜನಾಂಗದ ಸಾವಿರಾರು ಜನರು ಬೀರನಕುಪ್ಪ ಗ್ರಾಮದಿಂದ ಕೋಲಾರ ಜಿಲ್ಲೆಯ ಕೆಜಿಎಫ್​ ಎಸ್ಪಿ ಕಚೇರಿವರೆಗೆ ಸುಮಾರು 12 ಕಿ.ಮೀ ಪಾದಯಾತ್ರೆ ಮೂಲಕ ತೆರಳಿ ಪ್ರಕರಣದ ನಿಶ್ಪಕ್ಷಪಾತ ತನಿಖೆಯಾಗಬೇಕು, ಜೊತೆಗೆ ಪ್ರಕರಣದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಭಾಗಿಯಾಗಿರುವ ಎಲ್ಲರನ್ನು ಬಂಧಿಸಬೇಕು, ಜೊತೆಗೆ ಇಡೀ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

ಇಂದು ಮಧ್ಯಾಹ್ನ ಬೀರನಕುಪ್ಪ ಗ್ರಾಮದಿಂದ ಹೊರಟ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಸರ್ಕಾರದ ವಿರುದ್ದ ಹಾಗೂ ಪೊಲೀಸ್​ ಇಲಾಖೆ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಬೃಹತ್​ ಪ್ರತಿಭಟನೆ ಮೆರವಣಿಗೆ ಮಾಡಿದರು. ಕೂಡಲೇ ಸರ್ಕಾರ ನಾರಾಯಣಪ್ಪ ಅವರ ಕೊಲೆ ಪ್ರಕರಣವನ್ನು ಸಿಐಡಿ ಒಪ್ಪಿಸಬೇಕು, ಜೊತೆಗೆ ನಾರಾಯಣಪ್ಪ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಪ್ರತಿಭಟನಾಕಾರರ ಆಗ್ರಹಿಸಿದ್ದಾರೆ. ಇನ್ನು ಗ್ರಾಮದಲ್ಲೂ ಬೂದಿ ಮುಚ್ಚಿದ ಕೆಂಡದ ವಾತಾವರಣ ನಿರ್ಮಾಣವಾಗಿದೆ, ಗ್ರಾಮದಲ್ಲಿ ಕೊಲೆ ನಡೆದು 25 ದಿನ ಕಳೆದರೂ ಗ್ರಾಮದಲ್ಲಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. ಜೊತೆಗೆ ಇಂದು ಪ್ರತಿಭಟನೆ ಹಿನ್ನೆಲೆ ಸುಮಾರು 400 ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯಿಂದ ಬಂದೋಬಸ್ತ್​ ಮಾಡಲಾಗಿತ್ತು.

ಸರಕಾರಿ ಜಾಗದಲ್ಲಿ ತಿಪ್ಪೆ ಹಾಕಿದ್ದಕ್ಕೆ ಆಕ್ರೋಶ; ದಲಿತ ಮಹಿಳೆಯರ ಮೇಲೆ ಹಲ್ಲೆ

ಯಾದಗಿರಿ: ದಲಿತ ಮಹಿಳೆಯ ಮುಖ ತೋರಿಸಿದಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಲಿತ ವೃದ್ದೆ ಪೀರಮ್ಮ ಮುಖ ತೋರಿಸಿದಕ್ಕೆ ಅನ್ಯ ಸಮುದಾಯದ ಜನರಿಂದ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಕ್ರೋಶಗೊಂಡ ಅನ್ಯ ಸಮುದಾಯದ ಜನರಿಂದ ಮೂವರು ದಲಿತ ಮಹಿಳೆಯರ ಮೇಲೆ ಹಲ್ಲೆ ಮಾಡಲಾಗಿದೆ. ಭೀಮರಾಯ, ಚಂದ್ರಮಪ್ಪ, ಯಲ್ಲಪ್ಪ, ವೆಂಕಟೇಶ, ಭಾಗಮ್ಮ, ರಾಮವ್ವ ಸೇರಿ ದೊಣ್ಣೆಗಳಿಂದ ಮೂವರು ಮಹಿಳೆಯರಿಗೆ ಹಲ್ಲೆ ಮಾಡಿದ್ದಾರೆ. ಅದರಲ್ಲಿ ಓರ್ವ ವೃದ್ದೆ ಪೀರಮ್ಮಳಿಗೆ ಗಂಭೀರ ಗಾಯಗಳಾಗಿವೆ.

ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲು.. ಅನ್ಯ ಕೋಮಿನ ಜನರ ಮನೆ ಮುಂಭಾಗದಲ್ಲಿರುವ ಸರಕಾರಿ ಜಾಗದಲ್ಲಿ ಪೀರಮ್ಮ ತಿಪ್ಪೆ ಹಾಕಿದ್ದಕ್ಕೆ ಆಕ್ರೋಶಗೊಂಡ ಅನ್ಯ ಕೋಮಿನ ಜನ ಈ ಹೇಯ ಘಟನೆ ನಡೆಸಿದ್ದಾರೆ. ತಿಪ್ಪೆ ನೆಪ ಮಾಡಿ ಮುಖ ತೋರಿಸಬೇಡವೆಂದು ದಲಿತ ವೃದ್ದೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

Karnataka High Court: 80ರ ಅಜ್ಜಿ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ವರದಕ್ಷಿಣೆ ಕೇಸ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್! ಇದನ್ನೂ ಓದಿ: ನ್ಯಾಷನಲ್ ಲಾ ಸ್ಕೂಲ್ನಲ್ಲಿ ಕಾನೂನು ಓದಿದ ದಾವಣಗೆರೆಯ ಅವಿನಾಶ್ ಮೊದಲ ಅಟೆಂಪ್ಟಿನಲ್ಲೇ ಐಎಎಸ್ ಪಾಸ್! UPSC ಪರೀಕ್ಷೆಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಸಾಧನೆ ಏನು?

 

Published On - 8:24 pm, Mon, 30 May 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?