AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ದಲಿತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ನಿಧನ

Siddalingaiah Death: ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಿದ್ದರು. ಎರಡು ಬರಿ ವಿಧಾನಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ಹಿರಿಯ ದಲಿತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ನಿಧನ
TV9 Web
| Updated By: guruganesh bhat|

Updated on:Jun 11, 2021 | 8:41 PM

Share

ಬೆಂಗಳೂರು:  ಹಿರಿಯ ದಲಿತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನರಾಗಿದ್ದಾರೆ. 66 ವರ್ಷದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಅವರು, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಿದ್ದರು.  1988-1994 ಮತ್ಎತು 1995-2001ರವರೆಗೆ ಬಾರಿ ವಿಧಾನಪರಿಷತ್ ಸದಸ್ಯರಾಗಿಯೂ ಡಾ.ಸಿದ್ದಲಿಂಗಯ್ಯ ಕಾರ್ಯನಿರ್ವಹಿಸಿದ್ದರು.

ದಲಿತ ಚಳವಳಿಗೆ ಹೊಸ ವೇಗ, ಹೊಸ ಸ್ಪರ್ಶ ಕೊಟ್ಟವರು ಡಾ.ಸಿದ್ದಲಿಂಗಯ್ಯ. ಸಿದ್ದಲಿಂಗಯ್ಯ ಬರೆದ ಕ್ರಾಂತಿಗೀತೆ ‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯ ಕೊಡಿ’ ರಾಜ್ಯವ್ಯಾಪಿ ಜನಪ್ರಿಯವಾಗಿತ್ತು. ದಲಿತ ಸಂವೇದನೆಗಳನ್ನು ಸಶಕ್ತವಾಗಿ, ಆಕ್ರೋಶವನ್ನು ಅಕ್ಷರಗಳಾಗಿ ಸಾರಿ ಹೇಳಿದ ಗೀತೆಯಿದು.

ಕ್ರಾಂತಿಗೀತೆ, ನೊಂದವರ ಪಾಡುಗಳನ್ನೇ ಹಾಡಾಗಿಸುತ್ತಿದ್ದ ಈ ಕವಿಯು ಶೃಂಗಾರ ಗೀತೆಗಳನ್ನು ಬರೆಯಬಲ್ಲರು ಎಂದು ನಿರೂಪಿಸಿದ್ದು ಜನಪ್ರಿಯ ಗೀತೆ ‘ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡಬೇಡ ಗೆಳತಿ’ .ಕರ್ನಾಟಕದ ದಲಿತ ಚಳವಳಿಗೆ ಹೋಗ, ಸಂಚಲನ ನೀಡಿದ್ದ ಕ್ರಾಂತಿಗೀತೆ ಕ್ರಾಂತಿ ಗೀತೆ ‘ದಲಿತರು ಬಂದರು ದಾರಿ ಬಿಡಿ’.

1953ರಲ್ಲಿ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಜನಿಸಿದ್ದ ಅವರು,  ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿ.ಎ ಆನರ್ಸ್  ಐಚ್ಛಿಕ ಕನ್ನಡ ಪದವಿ ಪಡೆದಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವಿ ಪಡೆದ ಅವರು ‘ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧಕ್ಕೆ 1989ರಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದರು.

ಡಾ.ಸಿದ್ದಲಿಂಗಯ್ಯ ಅವರ ಹೆಸರನ್ನು ಉಲ್ಲೇಖಿಸದೇ ಬಂಡಾಯ ಸಾಹಿತ್ಯದ ಇತಿಹಾಸ ಬರೆಯಲು ಸಾಧ್ಯವಿಲ್ಲ ಎಂಬಂತೆ ಅವರು ಹೆಸರುವಾಸಿಯಾಗಿದ್ದರು. ಪಂಪ, ನಾಡೋಜ ಪ್ರಶಸ್ತಿಗಳಿಗೂ ಭಾಜನರಾಗಿದ್ದ ಅವರು, ದಲಿತ, ಬಂಡಾಯವೆಂದರೆ ಹೊಡಿ- ಬಡಿ ಎಂಬುದಲ್ಲ ಎಂದು ವ್ಯಾಖ್ಯಾನಿಸಿದ್ದರು. ಸಂಚಲನ ನೀಡಿದ್ದ ಕ್ರಾಂತಿ ಗೀತೆ ‘ದಲಿತರು ಬಂದರು ದಾರಿ ಬಿಡಿ’.

ದಲಿತರು ಬರುವರು ದಾರಿಬಿಡಿ, ದಲಿತರ ಕೈಗೆ ರಾಜ್ಯಕೊಡಿ ಎಂಬ ಅವರ ಕ್ರಾಂತಿಗೀತೆ ಈಗಲೂ ದಲಿತ ಚಳವಳಿಗಳಲ್ಲಿ ಕೇಳಿಬರುವಂತಹದ್ದು. ಹೊಲೆ ಮಾದಿಗರ ಹಾಡು, ಸಾವಿರಾರು ನದಿಗಳು, ಮೆರವಣಿಗೆ, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರೆ ಕವಿತೆಗಳು ಅವರ ಪ್ರಮುಖ ಕವಿತಾ ಸಂಕಲನಗಳು.  ಸದನದಲ್ಲಿ ಸಿದ್ದಲಿಂಗಯ್ಯ  ಭಾಗ 1 ಮತ್ತು ಭಾಗ 2 ಅವರು ವಿಧಾನಪರಿಷತ್ ಸದಸ್ಯರಾಗಿ ಕರ್ತವ್ಯನಿರ್ವಹಿಸಿದ ಅನುಭವಗಳ ನೈಜ ಅನುಭವ ಕಥನ. ಅವರ ಆತ್ಮಕಥೆ ಊರು ಕೇರಿ ಭಾಗ 1 ಮತ್ತು ಭಾಗ 2ನ್ನು ಕನ್ನಡ ಸಾಹಿತ್ಯ ಎಂದಿಗೂ ಮರೆಯಲಾರದು.

ಅವರ ಊರು ಕೇರಿ ಆತ್ಕಥನ ಇಂಗ್ಲೀಷ್ ಮತ್ತು ತಮಿಳು ಭಾಷೆಗಳಿಗೆ ಅನುವಾದವಾಗಿದೆ. ಜತೆಗೆ ಅವರು ಬರೆದ ಕವಿತೆಗಳು ಭಾರತದ ಹಲವು ಭಾಷೆಗಳಿಗೆ ತರ್ಜುಮೆಗೊಂಡಿದ್ದು ಡಾ.ಸಿದ್ದಲಿಂಗಯ್ಯ ಅವರ ಹೆಸರು ಕನ್ನಡದ ಆಚೆಗೂ ಪಸರಿಸಿದೆ. ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳೂ ಅವರಿಗೆ ಸಂದಿವೆ.

ಇದನ್ನೂ ಓದಿ: Suresh Chandra Death: ಕೊರೊನಾದಿಂದ ಹಿರಿಯ ನಟ ಸುರೇಶ್​ ಚಂದ್ರ ನಿಧನ 

CM Udasi Death: ಮಾಜಿ ಸಚಿವ, ಹಾನಗಲ್ ಶಾಸಕ ಸಿ ಎಂ ಉದಾಸಿ ನಿಧನ (Poet writer Dr Siddalingaiah died in Bengaluru due to Covid)

Published On - 5:25 pm, Fri, 11 June 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್