AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದರೆ ಭಯ ಬೇಡ; ಡ್ಯಾನ್ಸ್ ಮಾಡಿ ವಿಡಿಯೋ ಹಂಚಿಕೊಳ್ಳಿ, ಖುಷಿಯಾಗಿರಿ ಎಂದು ಧೈರ್ಯ ತುಂಬಿದ ಸೋಂಕಿತ ಪೇದೆ

ಕೊರೊನಾ ಪಾಸಿಟಿವ್ ಬಂದರೆ ಭಯ ಪಡಬೇಡಿ ಚಿಲ್ ಆಗಿರಿ ಎಂದು ಸಾರುವಂತಹ ಆತ್ಮಸ್ಥೈರ್ಯಕ್ಕೆ ಮನೆಯಲ್ಲೆ ಡ್ಯಾನ್ಸ್ ಮಾಡಿದ್ದಾರೆ. ಸೋಂಕಿನಿಂದ ಭಯಭೀತರಾಗದೆ ಹೋಂ ಐಸೋಲೇಷನ್ ಆಗಿ ಕಾಲಹರಣಕ್ಕೆ ಡ್ಯಾನ್ಸ್ ಮಾಡುವಂತ ಸಂದೇಶ ರವಾನಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೊರೊನಾ ಬಂದರೆ ಭಯ ಬೇಡ; ಡ್ಯಾನ್ಸ್ ಮಾಡಿ ವಿಡಿಯೋ ಹಂಚಿಕೊಳ್ಳಿ, ಖುಷಿಯಾಗಿರಿ ಎಂದು ಧೈರ್ಯ ತುಂಬಿದ ಸೋಂಕಿತ ಪೇದೆ
ಧೈರ್ಯ ತುಂಬಿದ ಸೋಂಕಿತ ಪೇದೆ
ಆಯೇಷಾ ಬಾನು
ಆಯೇಷಾ ಬಾನು|

Updated on: May 07, 2021 | 11:57 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆಗೆ ಇಡೀ ಭಾರತ ಕುಸಿದುಕುಳಿತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರು ನರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳು ಫುಲ್ ಆಗಿವೆ. ಬೆಡ್, ಆಕ್ಸಿಜನ್ ಇಲ್ಲದೆ ಜನ ಸಾಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರು ಆತ್ಮಸೈರ್ಯ ಕಳೆದುಕೊಳ್ಳುತ್ತಿದ್ದಾರೆ. ಕೊರೊನಾ ಬಂದರೆ ಮುಂದೆ ಸಾವು ಖಚಿತವೆಂಬಂತೆ ಭಾವಿಸುತ್ತಿದ್ದಾರೆ. ಇದರ ನಡುವೆ ಸೋಂಕಿತ ಪೇದೆ ಮನೆಯಿಂದಲೇ ಕುಳಿದು ಕುಪ್ಪಳಿಸುವ ಮೂಲಕ ಸೋಂಕಿತರಿಗೆ ಧೈರ್ಯ ತುಂಬುವ ಪ್ರಯತ್ನ ಪಟ್ಟಿದ್ದಾರೆ.

ಸದ್ಯ ನಮಗೆ ಕಷ್ಟದ ದಿನಗಳು ಎದುರಾಗಿವೆ. ಆದ್ರೆ ಇದು ಶಾಶ್ವತವಲ್ಲ. ಈಗ ಬಂದಿರುವ ಕಷ್ಟಗಳನ್ನು ಹಿಮ್ಮೆಟ್ಟಿಸಿ ಮುಂದೆ ನುಗ್ಗಬೇಕು. ದೇವನಹಳ್ಳಿ ಸಂಚಾರಿ ಪೊಲೀಸ್ ಸಿಬ್ಬಂದಿ ಕೊರೊನಾಗೆ ತುತ್ತಾಗಿದ್ದು ಕಳೆದ ಐದು ದಿನಗಳಿಂದ ಹೋಂ ಐಸೋಲೇಷನ್ ಆಗಿದ್ದಾರೆ. ಕೊರೊನಾ ಪಾಸಿಟಿವ್ ಬಂದರೆ ಭಯ ಪಡಬೇಡಿ, ಚಿಲ್ ಆಗಿರಿ ಎಂದು ಸಾರುತ್ತಾ ಆತ್ಮಸ್ಥೈರ್ಯಕ್ಕೆ ಮನೆಯಲ್ಲೆ ಡ್ಯಾನ್ಸ್ ಮಾಡಿದ್ದಾರೆ. ಸೋಂಕಿನಿಂದ ಭಯಭೀತರಾಗದೆ ಹೋಂ ಐಸೋಲೇಷನ್ ಆಗಿ… ಕಾಲಹರಣಕ್ಕೆ ಡ್ಯಾನ್ಸ್ ಮಾಡುವಂತ ಸಂದೇಶ ರವಾನಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸೋಂಕಿತ ಪೇದೆ ಮನೆಯಲ್ಲೇ ಚಿಕಿತ್ಸೆ ಪಡೆದುಕೊಂಡು ಮಗಳ ಜೊತೆ ಡ್ಯಾನ್ಸ್ ಮಾಡುವ ಮೂಲಕ ಸೋಂಕಿತರು ಭಯ ಪಡದೆ ಖುಷಿಯಾಗಿರುವಂತೆ ಸಲಹೆ ನೀಡಿದ್ದಾರೆ. ಮಗಳಿಗೆ ಕೊರೊನಾ ಬಂದಿದ್ದರೂ ಭಯದಿಂದ ಇರದಂತೆ, ಪ್ರತಿದಿನ ಡ್ಯಾನ್ಸ್ ಮಾಡಿ ಇತರರಿಗೆ ವಿಡಿಯೋ ರವಾನೆ ಮಾಡಿ ಆತ್ಮ ಸ್ಥೈರ್ಯ ಹೆಚ್ಚಿಸಿಕೊಳ್ಳಲು ಸಲಹೆ ನೀಡಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಯ ಸಂದೇಶದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 20 ಕೊರೊನಾ ಸೋಂಕಿತರು ಮೃತ; ನಿಲ್ಲದ ಸರಣಿ ಸಾವು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು