AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ಬಳಿ ಭೀಕರ ಅಪಘಾತ: ಹೆದ್ದಾರಿಯಲ್ಲೇ ಕಮರಿಹೋಯ್ತು ಡ್ಯಾನ್ಸರ್​ ಕನಸು; ಆಗಿದ್ದೇನು?

ಕೆಟ್ಟುನಿಂತ ಕಾರನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ಯಾಂಟರ್​ ಡಿಕ್ಕಿಯಾಗಿ ಡ್ಯಾನ್ಸರ್​ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಡಾಬಸ್​ಪೇಟೆ ಬಳಿ ನಡೆದಿದೆ. ಅಪಘಾತ ಸಂಬಂಧ ಕ್ಯಾಂಟರ್​ ಚಾಲಕನನ್ನು ಬಂಧಿಸಲಾಗಿದ್ದು, ನೃತ್ಯಗಾರನ ನೂರಾರು ಕನಸು ಹೆದ್ದಾರಿಯಲ್ಲೇ ಕಮರಿಹೋಗಿದೆ. ಅಪಘಾತದ ದೃಶ್ಯವನ್ನು ಗಮನಿಸಿದರೆ ಇದು ನಿಜಕ್ಕೂ ಅಪಘಾತವೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಉದ್ಭವಿಸಿದ್ದು, ಆ ಬಗ್ಗೆಯೂ ತನಿಖೆ ನಡೆಯುತ್ತಿದೆ.

ನೆಲಮಂಗಲ ಬಳಿ ಭೀಕರ ಅಪಘಾತ: ಹೆದ್ದಾರಿಯಲ್ಲೇ ಕಮರಿಹೋಯ್ತು ಡ್ಯಾನ್ಸರ್​ ಕನಸು; ಆಗಿದ್ದೇನು?
ಅಪಘಾತದಲ್ಲಿ ಡ್ಯಾನ್ಸರ್​ ಸಾವು
ಮಂಜುನಾಥ ಕೆಬಿ
| Edited By: |

Updated on:Nov 04, 2025 | 6:58 PM

Share

ನೆಲಮಂಗಲ, ನವೆಂಬರ್​ 04: ಕ್ಯಾಂಟರ್​ ಡಿಕ್ಕಿಯಾಗಿ ಖ್ಯಾತ ಡ್ಯಾನ್ಸರ್​ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಡಾಬಸ್​ಪೇಟೆ ಬಳಿಯ ಪೆಮ್ಮನಹಳ್ಳಿಯಲ್ಲಿ ನಡೆದಿದೆ. ಮೃತ ಡ್ಯಾನ್ಸರ್​​ ಅನ್ನು ಸುಧೀಂದ್ರ ಎಂದು ಗುರುತಿಸಲಾಗಿದೆ. ತಮ್ಮ ಕಾರು ಕೆಟ್ಟುನಿಂತ ಹಿನ್ನಲೆ ಹೆದ್ದಾರಿ ಪಕ್ಕ ಅದನ್ನು ನಿಲ್ಲಿಸಿ ಏನಾಗಿದೆ ಎಂದು ಪರೀಕ್ಷಿಸುತ್ತಿದ್ದ ಸುಧೀಂದ್ರಗೆ ಹಿಂದಿನಿಂದ ವೇಗವಾಗಿ ಬಂದ ಕ್ಯಾಂಟರ್​ ಏಕಾಏಕಿ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದು, ನೃತ್ಯಗಾರನ ನೂರಾರು ಕನಸು ಹೆದ್ದಾರಿಯಲ್ಲೇ ಕಮರಿಹೋಗಿದೆ.

ವೇಗವಾಗಿ ಬಂದು ಗುದ್ದಿದ ಕ್ಯಾಂಟರ್​

ಅಪಘಾತದಲ್ಲಿ ಮೃತಪಟ್ಟ ಸುಧೀಂದ್ರ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ. ಡ್ಯಾನ್ಸರ್ ಆಗಿ ನೂರಾರು ಯುವಕ- ಯುವತಿಯರಿಗೆ ಮತ್ತು ಮಕ್ಕಳಿಗೆ ತರಬೇತಿ ನೀಡುತ್ತಿದ್ದ ಇವರು, ಜೀವನ ನಿರ್ವಹಣೆಗೆ ಪ್ಲವರ್ ಡೆಕೊರೇಟರ್​ ಆಗಿಯೂ ಕೆಲಸ ಮಾಡುತ್ತಿದ್ದರು. ತಮ್ಮ ಕೆಲಸ ಕಾರ್ಯಕ್ಕಾಗಿ ಅವರು ಹೊಸ ಕಾರು ಖರೀದಿಸಿದ್ದು, ಒಂದೇ ದಿನಕ್ಕೆ ಅದು ಹೆದ್ದಾರಿಯಲ್ಲಿ ಕೆಟ್ಟು ನಿಂತು ಅವರ ಜೀವವನ್ನೇ ಬಲಿ ಪಡೆದಿದೆ. ಘಟನೆ ಸಂಬಂಧ ನೆಲಮಂಗಲದ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಯಾಂಟರ್​ ಚಾಲಕನನ್ನ ಬಂಧಿಸಲಾಗಿದೆ.

ಇದನ್ನೂ ಓದಿ: ಹತ್ಯೆಯಾದವನ ಬರ್ತ್​ಡೇ ದಿನವೇ ಹಂತಕರಿಗೆ ಜೀವಾವಧಿ ಶಿಕ್ಷೆ

ಅಪಘಾತವೋ? ಕೊಲೆಯೋ?

ಅಪಘಾತದ ದೃಶ್ಯವನ್ನು ಗಮನಿಸಿದರೆ ಇದು ನಿಜಕ್ಕೂ ಅಪಘಾತವೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಹೈವೇಯಲ್ಲಿ ಹೋಗುತ್ತಿದ್ದ ಕ್ಯಾಂಟರ್​ ಏಕಾಏಕಿ ರಸ್ತೆ ಬದಿಗೆ ನುಗ್ಗಿರೋದು ಅನುಮಾನಗಳಿಗೆ ಕಾರಣ ಆಗಿದೆ. ಹೀಗಾಗಿ ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:41 pm, Tue, 4 November 25

Follow Us
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ