AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ಬಳಿ ಭೀಕರ ಅಪಘಾತ: ಹೆದ್ದಾರಿಯಲ್ಲೇ ಕಮರಿಹೋಯ್ತು ಡ್ಯಾನ್ಸರ್​ ಕನಸು; ಆಗಿದ್ದೇನು?

ಕೆಟ್ಟುನಿಂತ ಕಾರನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ಯಾಂಟರ್​ ಡಿಕ್ಕಿಯಾಗಿ ಡ್ಯಾನ್ಸರ್​ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಡಾಬಸ್​ಪೇಟೆ ಬಳಿ ನಡೆದಿದೆ. ಅಪಘಾತ ಸಂಬಂಧ ಕ್ಯಾಂಟರ್​ ಚಾಲಕನನ್ನು ಬಂಧಿಸಲಾಗಿದ್ದು, ನೃತ್ಯಗಾರನ ನೂರಾರು ಕನಸು ಹೆದ್ದಾರಿಯಲ್ಲೇ ಕಮರಿಹೋಗಿದೆ. ಅಪಘಾತದ ದೃಶ್ಯವನ್ನು ಗಮನಿಸಿದರೆ ಇದು ನಿಜಕ್ಕೂ ಅಪಘಾತವೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಉದ್ಭವಿಸಿದ್ದು, ಆ ಬಗ್ಗೆಯೂ ತನಿಖೆ ನಡೆಯುತ್ತಿದೆ.

ನೆಲಮಂಗಲ ಬಳಿ ಭೀಕರ ಅಪಘಾತ: ಹೆದ್ದಾರಿಯಲ್ಲೇ ಕಮರಿಹೋಯ್ತು ಡ್ಯಾನ್ಸರ್​ ಕನಸು; ಆಗಿದ್ದೇನು?
ಅಪಘಾತದಲ್ಲಿ ಡ್ಯಾನ್ಸರ್​ ಸಾವು
ಮಂಜುನಾಥ ಕೆಬಿ
| Updated By: ಪ್ರಸನ್ನ ಹೆಗಡೆ|

Updated on:Nov 04, 2025 | 6:58 PM

Share

ನೆಲಮಂಗಲ, ನವೆಂಬರ್​ 04: ಕ್ಯಾಂಟರ್​ ಡಿಕ್ಕಿಯಾಗಿ ಖ್ಯಾತ ಡ್ಯಾನ್ಸರ್​ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಡಾಬಸ್​ಪೇಟೆ ಬಳಿಯ ಪೆಮ್ಮನಹಳ್ಳಿಯಲ್ಲಿ ನಡೆದಿದೆ. ಮೃತ ಡ್ಯಾನ್ಸರ್​​ ಅನ್ನು ಸುಧೀಂದ್ರ ಎಂದು ಗುರುತಿಸಲಾಗಿದೆ. ತಮ್ಮ ಕಾರು ಕೆಟ್ಟುನಿಂತ ಹಿನ್ನಲೆ ಹೆದ್ದಾರಿ ಪಕ್ಕ ಅದನ್ನು ನಿಲ್ಲಿಸಿ ಏನಾಗಿದೆ ಎಂದು ಪರೀಕ್ಷಿಸುತ್ತಿದ್ದ ಸುಧೀಂದ್ರಗೆ ಹಿಂದಿನಿಂದ ವೇಗವಾಗಿ ಬಂದ ಕ್ಯಾಂಟರ್​ ಏಕಾಏಕಿ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದು, ನೃತ್ಯಗಾರನ ನೂರಾರು ಕನಸು ಹೆದ್ದಾರಿಯಲ್ಲೇ ಕಮರಿಹೋಗಿದೆ.

ವೇಗವಾಗಿ ಬಂದು ಗುದ್ದಿದ ಕ್ಯಾಂಟರ್​

ಅಪಘಾತದಲ್ಲಿ ಮೃತಪಟ್ಟ ಸುಧೀಂದ್ರ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ. ಡ್ಯಾನ್ಸರ್ ಆಗಿ ನೂರಾರು ಯುವಕ- ಯುವತಿಯರಿಗೆ ಮತ್ತು ಮಕ್ಕಳಿಗೆ ತರಬೇತಿ ನೀಡುತ್ತಿದ್ದ ಇವರು, ಜೀವನ ನಿರ್ವಹಣೆಗೆ ಪ್ಲವರ್ ಡೆಕೊರೇಟರ್​ ಆಗಿಯೂ ಕೆಲಸ ಮಾಡುತ್ತಿದ್ದರು. ತಮ್ಮ ಕೆಲಸ ಕಾರ್ಯಕ್ಕಾಗಿ ಅವರು ಹೊಸ ಕಾರು ಖರೀದಿಸಿದ್ದು, ಒಂದೇ ದಿನಕ್ಕೆ ಅದು ಹೆದ್ದಾರಿಯಲ್ಲಿ ಕೆಟ್ಟು ನಿಂತು ಅವರ ಜೀವವನ್ನೇ ಬಲಿ ಪಡೆದಿದೆ. ಘಟನೆ ಸಂಬಂಧ ನೆಲಮಂಗಲದ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಯಾಂಟರ್​ ಚಾಲಕನನ್ನ ಬಂಧಿಸಲಾಗಿದೆ.

ಇದನ್ನೂ ಓದಿ: ಹತ್ಯೆಯಾದವನ ಬರ್ತ್​ಡೇ ದಿನವೇ ಹಂತಕರಿಗೆ ಜೀವಾವಧಿ ಶಿಕ್ಷೆ

ಅಪಘಾತವೋ? ಕೊಲೆಯೋ?

ಅಪಘಾತದ ದೃಶ್ಯವನ್ನು ಗಮನಿಸಿದರೆ ಇದು ನಿಜಕ್ಕೂ ಅಪಘಾತವೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಹೈವೇಯಲ್ಲಿ ಹೋಗುತ್ತಿದ್ದ ಕ್ಯಾಂಟರ್​ ಏಕಾಏಕಿ ರಸ್ತೆ ಬದಿಗೆ ನುಗ್ಗಿರೋದು ಅನುಮಾನಗಳಿಗೆ ಕಾರಣ ಆಗಿದೆ. ಹೀಗಾಗಿ ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:41 pm, Tue, 4 November 25

ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ
ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ
ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ರೈತರು
ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ರೈತರು
ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು: ಸ್ಥಳಕ್ಕೆ ಓಡಿ ಬಂದ ಸಚಿವ ಹೇಳಿದ್ದೇನು?
ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು: ಸ್ಥಳಕ್ಕೆ ಓಡಿ ಬಂದ ಸಚಿವ ಹೇಳಿದ್ದೇನು?
ರಾಹುಲ್, ಲಾಲುಗೆ ಸೀತಾ ಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ
ರಾಹುಲ್, ಲಾಲುಗೆ ಸೀತಾ ಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ
8 ದಿನ ಬಳಿಕ ಧರಣಿ ಸ್ಥಳಕ್ಕೆ ಬಂದ ಸಚಿವರ ವಿರುದ್ಧ ರೊಚ್ಚಿಗೆದ್ದ ರೈತರು
8 ದಿನ ಬಳಿಕ ಧರಣಿ ಸ್ಥಳಕ್ಕೆ ಬಂದ ಸಚಿವರ ವಿರುದ್ಧ ರೊಚ್ಚಿಗೆದ್ದ ರೈತರು
ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ಯಶ್: ಪುತ್ರನಿಗೆ ಹಣ ಸಹಾಯ
ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ಯಶ್: ಪುತ್ರನಿಗೆ ಹಣ ಸಹಾಯ
106 ಮೀ. ಉದ್ದದ ಸಿಕ್ಸರ್ ಬಾರಿಸಿದ ಶಿವಂ ದುಬೆ
106 ಮೀ. ಉದ್ದದ ಸಿಕ್ಸರ್ ಬಾರಿಸಿದ ಶಿವಂ ದುಬೆ