AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಿ ಅಪಾಯ, ಯಾರದೋ ನಿರ್ಲಕ್ಷ್ಯಕ್ಕೆ ಈಜಾಡುವ ಯುವಕರು ಬಲಿ

ಕಲಬುರಗಿ: ಕಲ್ಲಿನ ಕ್ವಾರಿಯಲ್ಲಿ ನಿರ್ಮಾಣವಾದ ಕೆರೆಯಂತಹ ಪ್ರದೇಶದಲ್ಲಿ ಯುವಕರು ಈಜಲು ಹೋಗುತ್ತಿದ್ದಾರೆ. ಯಾರದೋ ನಿರ್ಲಕ್ಷ್ಯದಿಂದ ಇನ್ನ್ಯಾರದೋ ಮಕ್ಕಳು ಬಲಿಯಾಗುತ್ತಿದ್ದಾರೆ. ಸರ್ಕಾರಿ ಕಾನೂನುಗಳನ್ನು ಪಾಲಿಸದೇ ಇರುವುದರಿಂದ ಅಮಾಯಕರ ಪ್ರಾಣ ಹೋಗುವಂತಾಗಿದೆ. ಕಲುಬುರಗಿ ಜಿಲ್ಲೆಯಲ್ಲಿರುವ ಕಲ್ಲು ಗಣಿಗಾರಿಕೆಯಲ್ಲಿ ಇಂತಹ ಪರಿಸ್ಥಿತಿ ಉಂಟಾಗಿದೆ. ಇಲ್ಲಿ ಕಲ್ಲು ಗಣಿಗಾರಿಕೆ ಸರಿಯಾಗಿ ನಡೆದಿದ್ರೆ, ಯಾವುದೇ ಸಮಸ್ಯೆ ಇರ್ತಿರಲಿಲ್ಲಾ. ಆದ್ರೆ, ಕೆಲವರು ಬೇಕಾಬಿಟ್ಟಿಯಾಗಿ ಗಣಿಗಾರಿಕೆ ಮಾಡಿ, ನಂತರ ಅಲ್ಲಿ ನಿರ್ಮಾಣವಾದ ಗುಂಡಿಗಳನ್ನ ಮುಚ್ಚುತ್ತಿಲ್ಲ. ಇದ್ರಿಂದ ಆ ಪ್ರದೇಶದಲ್ಲಿ ನೀರು ತುಂಬಿಕೊಂಡಿದ್ದು, ಅನೇಕರು ಈ ನೀರಿನ ಆಳವನ್ನ […]

ಕ್ವಾರಿ ಅಪಾಯ, ಯಾರದೋ ನಿರ್ಲಕ್ಷ್ಯಕ್ಕೆ ಈಜಾಡುವ ಯುವಕರು ಬಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 20, 2019 | 10:44 AM

Share

ಕಲಬುರಗಿ: ಕಲ್ಲಿನ ಕ್ವಾರಿಯಲ್ಲಿ ನಿರ್ಮಾಣವಾದ ಕೆರೆಯಂತಹ ಪ್ರದೇಶದಲ್ಲಿ ಯುವಕರು ಈಜಲು ಹೋಗುತ್ತಿದ್ದಾರೆ. ಯಾರದೋ ನಿರ್ಲಕ್ಷ್ಯದಿಂದ ಇನ್ನ್ಯಾರದೋ ಮಕ್ಕಳು ಬಲಿಯಾಗುತ್ತಿದ್ದಾರೆ. ಸರ್ಕಾರಿ ಕಾನೂನುಗಳನ್ನು ಪಾಲಿಸದೇ ಇರುವುದರಿಂದ ಅಮಾಯಕರ ಪ್ರಾಣ ಹೋಗುವಂತಾಗಿದೆ.

ಕಲುಬುರಗಿ ಜಿಲ್ಲೆಯಲ್ಲಿರುವ ಕಲ್ಲು ಗಣಿಗಾರಿಕೆಯಲ್ಲಿ ಇಂತಹ ಪರಿಸ್ಥಿತಿ ಉಂಟಾಗಿದೆ. ಇಲ್ಲಿ ಕಲ್ಲು ಗಣಿಗಾರಿಕೆ ಸರಿಯಾಗಿ ನಡೆದಿದ್ರೆ, ಯಾವುದೇ ಸಮಸ್ಯೆ ಇರ್ತಿರಲಿಲ್ಲಾ. ಆದ್ರೆ, ಕೆಲವರು ಬೇಕಾಬಿಟ್ಟಿಯಾಗಿ ಗಣಿಗಾರಿಕೆ ಮಾಡಿ, ನಂತರ ಅಲ್ಲಿ ನಿರ್ಮಾಣವಾದ ಗುಂಡಿಗಳನ್ನ ಮುಚ್ಚುತ್ತಿಲ್ಲ.

ಇದ್ರಿಂದ ಆ ಪ್ರದೇಶದಲ್ಲಿ ನೀರು ತುಂಬಿಕೊಂಡಿದ್ದು, ಅನೇಕರು ಈ ನೀರಿನ ಆಳವನ್ನ ಸರಿಯಾಗಿ ತಿಳಿಯದೇ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಲಬುರಗಿ ನಗರದ ಹೊರವಲಯದಲ್ಲಿರುವ ರಾಣೇಶ್ ಪೀರ್ ದರ್ಗಾ ಬಳಿಯಿರುವ ಕ್ವಾರಿ ಮತ್ತು ಚಿತ್ತಾಪುರ, ಚಿಂಚೋಳಿಯಲ್ಲಿರುವ ಅನೇಕ ಕಲ್ಲಿನ ಕ್ವಾರಿಗಳಲ್ಲಿ ಈಜಲು ಹೋದವರು ಅನೇಕರು ಮೃತಪಟ್ಟಿದ್ದಾರೆ.

ಇನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರತಿಯೊಂದು ಕಲ್ಲು ಗಣಿಗಾರಿಕೆ ನಡೆಸುವ ಮಾಲೀಕರಿಗೆ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಅಂತ ಮಾಹಿತಿ ನೀಡುತ್ತಲೇ ಇರುತ್ತೆ. ಕಲ್ಲು ಕ್ವಾರಿಗಳಲ್ಲಿನ ಕಲ್ಲು ತೆಗೆದ ಮೇಲೆ ಅದನ್ನು ಮುಚ್ಚಬೇಕು.

ಅದರ ಸುತ್ತಲೂ ತಂತಿಬೇಲಿ ಹಾಕಿ, ಸಾರ್ವಜನಿಕರು ಮತ್ತು ಜಾನುವಾರುಗಳು ಅತ್ತ ಹೋಗದಂತೆ ತಡೆಯಬೇಕು ಅಂತಾ ಸೂಚನೆ ನೀಡಿದೆ. ಆದ್ರೆ, ಕೆಲವರು ಕಾನೂನುಗಳನ್ನ ಗಾಳಿಗೆ ತೂರಿ, ಗಣಿಗಾರಿಕೆ ಮಾಡಿ, ಗುಂಡಿ ಮುಚ್ಚದೇ ಬಿಡ್ತಿದ್ದಾರೆ. ಇದ್ರಿಂದ ಅಮಾಯಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

Published On - 10:13 am, Wed, 20 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ