AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಕೇಸ್​ ಎಫೆಕ್ಟ್​: ಜೈಲಲ್ಲಿ ಖೈದಿಗಳು ಸಿಗರೇಟ್​ ಸೇದುವ ಹಾಗಿಲ್ಲ; ಸುಪ್ರೀಂ ಖಡಕ್​ ಸೂಚನೆ

Darshan Thoogudeepa: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ನಟ ದರ್ಶನ್ ಜಾಮೀನು ರದ್ದಾಗಿದೆ. ವಿಚಾರಣೆ ವೇಳೆ ಹೈಕೋರ್ಟ್ ಆದೇಶಗಳ ಲೋಪವನ್ನು ಎತ್ತಿ ತೋರಿಸಿದ ಸುಪ್ರೀಂ, ಇನ್ನು ಮುಂದೆ ಜೈಲಲ್ಲಿ ಖೈದಿಗಳು ಸಿಗರೇಟ್​ ಸೇದಿದರೆ ಅಥವಾ ರಾಜ್ಯಾತಿಥ್ಯದ ಫೋಟೋ ಕಂಡು ಬಂದರೆ ಕ್ರಮಕೈಗೊಳ್ಳುವಂತೆ ಖಡಕ್​ ಎಚ್ಚರಿಕೆ ನೀಡಿದೆ.

ದರ್ಶನ್​ ಕೇಸ್​ ಎಫೆಕ್ಟ್​: ಜೈಲಲ್ಲಿ ಖೈದಿಗಳು ಸಿಗರೇಟ್​ ಸೇದುವ ಹಾಗಿಲ್ಲ; ಸುಪ್ರೀಂ ಖಡಕ್​ ಸೂಚನೆ
ದರ್ಶನ, ಸುಪ್ರೀಂಕೋರ್ಟ್
ಗಂಗಾಧರ​ ಬ. ಸಾಬೋಜಿ
|

Updated on:Aug 14, 2025 | 11:56 AM

Share

ಬೆಂಗಳೂರು, ಆಗಸ್ಟ್​ 14: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ (Supreme Court) ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶಗಳ ಲೋಪವನ್ನು ಸುಪ್ರೀಂ ಎತ್ತಿ ತೋರಿಸಿದೆ. ಆ ಮೂಲಕ ಇನ್ನು ಮುಂದೆ ಆರೋಪಿಗಳು ಜೈಲಿನಲ್ಲಿ ಸಿಗರೇಟ್ ಸೇದಿದ ಅಥವಾ ರಾಜ್ಯಾತಿಥ್ಯದ ಯಾವುದೇ ಫೋಟೋ ಕಂಡು ಬಂದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ

ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆ ಮಾಡಿದ್ದು, ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್​ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದರು.

ಇದನ್ನೂ ಓದಿ: SC on Darshan Bail: ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

ಇದನ್ನೂ ಓದಿ
Image
ದರ್ಶನ್​, ಪವಿತ್ರಾ ಬೇಲ್ ರದ್ದು, ಸರ್ಕಾರಿ ವಕೀಲರು ಹೇಳಿದ್ದೇನು?
Image
ಸ್ವಯಂಕೃತ ತಪ್ಪುಗಳೇ ಕುಣಿಕೆ ಆಯ್ತು ; ದರ್ಶನ್ ಜಾಮೀನು ರದ್ದಿಗೆ ಕಾರಣಗಳು
Image
ರೇಣುಕಾಸ್ವಾಮಿ ಕೊಲೆ: ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು
Image
ದರ್ಶನ್​​ಗೆ ಮತ್ತೆ ಜೈಲು; ಇಲ್ಲಿದೆ ವಿಚಾರಣೆಯ ಲೈವ್ ವಿಡಿಯೋ

ಇನ್ನು ಮುಂದೆ ರಾಜ್ಯಾತಿಥ್ಯದ ಯಾವುದೇ ಫೋಟೋ, ವಿಡಿಯೋ ಕಂಡು ಬಂದರೆ, ಆರೋಪಿ ಜೈಲಿನ ಲಾನ್​ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಇದು ಲ್ಯಾಂಡ್ ಮಾರ್ಕ್ ತೀರ್ಪು. ಈ ತೀರ್ಪಿನ ಪ್ರತಿ ಎಲ್ಲಾ ಹೈಕೋರ್ಟ್​ಗಳಿಗೆ ಮತ್ತು ಜೈಲುಗಳಿಗೂ ಕಳುಹಿಸುವಂತೆ ಸುಪ್ರೀಂಕೋರ್ಟ್ ಖಡಕ್​ ಸೂಚನೆ ನೀಡಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

ರೇಣುಕಾಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್​​ ಜೈಲು ಪಾಲಾಗಿದ್ದರು. ಬಳಿಕ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋಗಳು ವೈರಲ್​ ಆಗಿದ್ದವು. ದರ್ಶನ್ ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ಎಲ್ಲೆಡೆ ಹರಿದಾಡಿತ್ತು. ಇದು ಸಾಕಷ್ಟು ಸಂಚಲನಕ್ಕೂ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಇದು ಸರ್ಕಾರಕ್ಕೆ ಮುಜುಗರ ಕೂಡ ತಂದಿತ್ತು. ಬಳಿಕ ವಿಚಾರ ಗೊತ್ತಾದ ತಕ್ಷಣ 9 ಸಿಬ್ಬಂದಿ ಅಮಾನತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:18 am, Thu, 14 August 25

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ