AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಕೇಸ್​ ಎಫೆಕ್ಟ್​: ಜೈಲಲ್ಲಿ ಖೈದಿಗಳು ಸಿಗರೇಟ್​ ಸೇದುವ ಹಾಗಿಲ್ಲ; ಸುಪ್ರೀಂ ಖಡಕ್​ ಸೂಚನೆ

Darshan Thoogudeepa: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ನಟ ದರ್ಶನ್ ಜಾಮೀನು ರದ್ದಾಗಿದೆ. ವಿಚಾರಣೆ ವೇಳೆ ಹೈಕೋರ್ಟ್ ಆದೇಶಗಳ ಲೋಪವನ್ನು ಎತ್ತಿ ತೋರಿಸಿದ ಸುಪ್ರೀಂ, ಇನ್ನು ಮುಂದೆ ಜೈಲಲ್ಲಿ ಖೈದಿಗಳು ಸಿಗರೇಟ್​ ಸೇದಿದರೆ ಅಥವಾ ರಾಜ್ಯಾತಿಥ್ಯದ ಫೋಟೋ ಕಂಡು ಬಂದರೆ ಕ್ರಮಕೈಗೊಳ್ಳುವಂತೆ ಖಡಕ್​ ಎಚ್ಚರಿಕೆ ನೀಡಿದೆ.

ದರ್ಶನ್​ ಕೇಸ್​ ಎಫೆಕ್ಟ್​: ಜೈಲಲ್ಲಿ ಖೈದಿಗಳು ಸಿಗರೇಟ್​ ಸೇದುವ ಹಾಗಿಲ್ಲ; ಸುಪ್ರೀಂ ಖಡಕ್​ ಸೂಚನೆ
ದರ್ಶನ, ಸುಪ್ರೀಂಕೋರ್ಟ್
ಗಂಗಾಧರ​ ಬ. ಸಾಬೋಜಿ
|

Updated on:Aug 14, 2025 | 11:56 AM

Share

ಬೆಂಗಳೂರು, ಆಗಸ್ಟ್​ 14: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ (Supreme Court) ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶಗಳ ಲೋಪವನ್ನು ಸುಪ್ರೀಂ ಎತ್ತಿ ತೋರಿಸಿದೆ. ಆ ಮೂಲಕ ಇನ್ನು ಮುಂದೆ ಆರೋಪಿಗಳು ಜೈಲಿನಲ್ಲಿ ಸಿಗರೇಟ್ ಸೇದಿದ ಅಥವಾ ರಾಜ್ಯಾತಿಥ್ಯದ ಯಾವುದೇ ಫೋಟೋ ಕಂಡು ಬಂದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ

ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆ ಮಾಡಿದ್ದು, ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್​ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದರು.

ಇದನ್ನೂ ಓದಿ: SC on Darshan Bail: ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

ಇದನ್ನೂ ಓದಿ
Image
ದರ್ಶನ್​, ಪವಿತ್ರಾ ಬೇಲ್ ರದ್ದು, ಸರ್ಕಾರಿ ವಕೀಲರು ಹೇಳಿದ್ದೇನು?
Image
ಸ್ವಯಂಕೃತ ತಪ್ಪುಗಳೇ ಕುಣಿಕೆ ಆಯ್ತು ; ದರ್ಶನ್ ಜಾಮೀನು ರದ್ದಿಗೆ ಕಾರಣಗಳು
Image
ರೇಣುಕಾಸ್ವಾಮಿ ಕೊಲೆ: ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು
Image
ದರ್ಶನ್​​ಗೆ ಮತ್ತೆ ಜೈಲು; ಇಲ್ಲಿದೆ ವಿಚಾರಣೆಯ ಲೈವ್ ವಿಡಿಯೋ

ಇನ್ನು ಮುಂದೆ ರಾಜ್ಯಾತಿಥ್ಯದ ಯಾವುದೇ ಫೋಟೋ, ವಿಡಿಯೋ ಕಂಡು ಬಂದರೆ, ಆರೋಪಿ ಜೈಲಿನ ಲಾನ್​ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಇದು ಲ್ಯಾಂಡ್ ಮಾರ್ಕ್ ತೀರ್ಪು. ಈ ತೀರ್ಪಿನ ಪ್ರತಿ ಎಲ್ಲಾ ಹೈಕೋರ್ಟ್​ಗಳಿಗೆ ಮತ್ತು ಜೈಲುಗಳಿಗೂ ಕಳುಹಿಸುವಂತೆ ಸುಪ್ರೀಂಕೋರ್ಟ್ ಖಡಕ್​ ಸೂಚನೆ ನೀಡಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

ರೇಣುಕಾಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್​​ ಜೈಲು ಪಾಲಾಗಿದ್ದರು. ಬಳಿಕ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋಗಳು ವೈರಲ್​ ಆಗಿದ್ದವು. ದರ್ಶನ್ ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ಎಲ್ಲೆಡೆ ಹರಿದಾಡಿತ್ತು. ಇದು ಸಾಕಷ್ಟು ಸಂಚಲನಕ್ಕೂ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಇದು ಸರ್ಕಾರಕ್ಕೆ ಮುಜುಗರ ಕೂಡ ತಂದಿತ್ತು. ಬಳಿಕ ವಿಚಾರ ಗೊತ್ತಾದ ತಕ್ಷಣ 9 ಸಿಬ್ಬಂದಿ ಅಮಾನತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:18 am, Thu, 14 August 25