AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ದರ್ಶನ್ ಅಭಿಮಾನಿಗಳಿಂದ ಹಲ್ಲೆ ಆರೋಪ

ದರ್ಶನ್​ ಈ ಕೊಲೆ ಪ್ರಕರಣದಲ್ಲಿ ಸಿಕ್ಕಿಕೊಂಡಾಗಿನಿಂದ ಅವರು ಅಭಿಮಾನಿಗಳು ಅವರ ವಿರುದ್ಧ ತಮ್ಮ ಧ್ವನಿ ಎತ್ತಿದ್ದಾರೆ. ನಾವು ನಿನ್ನ ಪರವಾಗಿದ್ದೇವೆ ಬಾಸ್​ ಎಂದೆಲ್ಲಾ ಹೇಳುತ್ತಿದ್ದಾರೆ. ಅವರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ. ಇದೆಲ್ಲವನ್ನು ನೋಡುತ್ತಿದ್ದರೇ ದರ್ಶನ್​ ಅವರಂತೆಯೇ ಅವರ ಅಭಿಮಾನಿಗಳು ಕೂಡ ಒರಟು ಸ್ವಭಾವದವರು ಎನ್ನಲಾಗುತ್ತಿದೆ. ಆದರೆ ಇದೇ ಕೆಲ ದರ್ಶನ್ ಅಭಿಮಾನಿಗಳು ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವುದಾಗಿ ವರದಿ ಆಗಿದೆ.

ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ದರ್ಶನ್ ಅಭಿಮಾನಿಗಳಿಂದ ಹಲ್ಲೆ ಆರೋಪ
ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ದರ್ಶನ್ ಸೆಲೆಬ್ರಿಟಿಗಳಿಂದ ಹಲ್ಲೆ ಆರೋಪ
ಗಂಗಾಧರ​ ಬ. ಸಾಬೋಜಿ
|

Updated on:Jun 16, 2024 | 7:46 PM

Share

ಬೆಂಗಳೂರು, ಜೂನ್​ 16: ಚಿತ್ರದುರ್ಗದ ದರ್ಶನ್ (Darshan) ಅಭಿಮಾನಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಆ್ಯಂಡ್​ ಗ್ಯಾಂಗ್​ ಸದ್ಯ ಜೈಲು ಕಂಬಿ ಎಣಿಸುತ್ತಿದ್ದಾರೆ. ನಿನ್ನೆ ಕಸ್ಟಡಿ ಅಂತ್ಯವಾಗಿದ್ದ ಕಾರಣಕ್ಕೆ ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು. ಬಳಿಕ ದರ್ಶನ್‌ ಸೇರಿದಂತೆ 13 ಆರೋಪಿಗಳನ್ನ ಜೂನ್‌ 20 ರವರೆಗೆ ಅಂದ್ರೆ ಐದು ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಇದೆಲ್ಲದರ ಮಧ್ಯೆ ಈ ಪ್ರಕರಣವನ್ನು ವರದಿ ಮಾಡಲು ಹೋಗಿದ್ದ ಓರ್ವ ಪತ್ರಕರ್ತನಿಗೆ ದರ್ಶನ್​ ಅಭಿಮಾನಿಗಳು ಹಲ್ಲೆ ಮಾಡಿರುವುದಾಗಿ ವರದಿ ಆಗಿದೆ.

ದರ್ಶನ್​ ಈ ಕೊಲೆ ಪ್ರಕರಣದಲ್ಲಿ ಸಿಕ್ಕಿಕೊಂಡಾಗಿನಿಂದ ಅವರು ಅಭಿಮಾನಿಗಳು ಅವರ ವಿರುದ್ಧ ತಮ್ಮ ಧ್ವನಿ ಎತ್ತಿದ್ದಾರೆ. ನಾವು ನಿನ್ನ ಪರವಾಗಿದ್ದೇವೆ ಬಾಸ್​ ಎಂದೆಲ್ಲಾ ಹೇಳುತ್ತಿದ್ದಾರೆ. ಅವರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ. ಇದೆಲ್ಲವನ್ನು ನೋಡುತ್ತಿದ್ದರೇ ದರ್ಶನ್​ ಅವರಂತೆಯೇ ಅವರ ಅಭಿಮಾನಿಗಳು ಕೂಡ ಒರಟು ಸ್ವಭಾವದವರು ಎನ್ನಲಾಗುತ್ತಿದೆ. ಆದರೆ ಇದೇ ಒರಟು ಸ್ವಭಾವದ ಕೆಲ ದರ್ಶನ್ ಅಭಿಮಾನಿಗಳು ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಶನಿವಾರ ಸಂಜೆ 5.30 ರ ಸುಮಾರಿಗೆ ನಗರದ ನೃಪತುಂಗ ರಸ್ತೆಯಲ್ಲಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ನಿನ್ನೆ ದರ್ಶನ್​ ಅವರನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ಪ್ರಕರಣ ವರದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಗಾರ ರಕ್ಷಿತ್ ಗೌಡ ಟಿಟಿ (23) ಅವರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳಿಂದ ಹಲ್ಲೆ ಮಾಡಿ ಮೊಬೈಲ್ ಫೋನ್ ಅನ್ನು ದೋಚಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ‘ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’: ದರ್ಶನ್​ ಕೇಸ್​ಗೆ ಸುದೀಪ್​ ಪ್ರತಿಕ್ರಿಯೆ

ದರ್ಶನ್​ ವಿಚಾರಣೆ ಪ್ರಾರಂಭವಾದಾಗ ಅಲ್ಲೇ ನಿಂತಿದ್ದ ವರದಿಗಾರ ರಕ್ಷಿತ್ ಗೌಡ ಟಿಟಿ ಅವರನ್ನು ನಾಲ್ಕು ಅಪರಿಚಿತ ವ್ಯಕ್ತಿಗಳು ಅವರ ಬಳಿಗೆ ಬಂದು ನೀವು ಯಾರು ಎಂದು ಪ್ರಶ್ನಿಸಿದ್ದಾರೆ. ತಾನು ಮಾಧ್ಯಮದವನು ಎಂದು ಉತ್ತರಿಸಿದಾಗ, ಅವರು ತಕ್ಷಣ ಅವರ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದ್ದಾರೆ. ನಂತರ ಸುಮಾರು 50 ಮೀಟರ್ ಎಳೆದುಕೊಂಡು ಹೋದರು ಎಂದು ಆರೋಪಿಸಲಾಗಿದೆ. ಪತ್ರಕರ್ತನನ್ನು ಬಾಯಿಗೆ ಬಂದಂತೆ ನಿಂದಿಸಿದ್ದು, ಅಲ್ಲಿಂದ ಹೋಗುವಂತೆ ಹೇಳಿದ್ದಾರೆ. ಜೊತೆಗೆ ಮತ್ತೆ ಕಾಣಿಸಿಕೊಂಡರೆ “ಭೀಕರ ಪರಿಣಾಮ” ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?

ಪತ್ರಕರ್ತನಿಗೆ ಮೂಗಿಗೆ ಏಟಾಗಿದ್ದು, ರಕ್ತಸ್ರಾವವಾಗಿದ್ದರೂ, ನ್ಯಾಯಾಲಯದ ಸಂಕೀರ್ಣದಿಂದ ಹೊರಬಂದು ನೇರವಾಗಿ ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಲು ಹೋಗಿದ್ದಾರೆ. ದರ್ಶನ್ ಅವರ ನ್ಯಾಯಾಲಯದ ವಿಚಾರಣೆಗೆ ನಿಯೋಜನೆಗೊಂಡಿದ್ದ ಕೆಲವು ಪೊಲೀಸರು ಅವರ ಸಹಾಯ ಕೇಳಿದಾಗಲೂ ಮೂಕ ಪ್ರೇಕ್ಷಕರಂತೆ ನಿಂತಿದ್ದರು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:44 pm, Sun, 16 June 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ