AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್, ಅಭಿನಂದನೆ ಸಲ್ಲಿಸಿದ ಶಿಕ್ಷಣ ಸಚಿವ

ತಮ್ಮ ನೆಚ್ಚಿನ ನಾಯಕ ನಟರ ಹೆಸರಿನಲ್ಲಿ ಗುಂಪುಗಳನ್ನ ಕಟ್ಟಿಕೊಂಡು ಅವರ ಸಿನಿಮಾಗಳು ರಿಲೀಸ್ ಆದಾಗ ಪ್ರಚಾರ ಮಾಡ್ತಾ, ಥಿಯೇಟರ್ ಮುಂದೆ ಕಟ್ ಔಟ್ ಗೆ ಹಾಲಿನ ಅಭಿಷೇಕ ಮಾಡುವುದು, ‘ಡೈ ಹಾರ್ಡ್ ಫ್ಯಾನ್’ ಅಂತ ನಟರ ಹೆಸರನ್ನು ಅಚ್ಚೆ ಹಾಕಿಸಿಕೊಳ್ಳುವುದು, ಹುಟ್ಟುಹಬ್ಬಕ್ಕೆ ಅವರ ಮನೆಯ ಬಳಿ ಹೋಗಿ ಸೆಲಬ್ರೇಟ್ ಮಾಡೋದು ಕಾಮನ್, ಕಾಮನ್. ಆದ್ರೆ ಇಲ್ಲಿ ‘ಡಿ ಬಾಸ್’ ದರ್ಶನ್ ಅಭಿಮಾನಿಗಳು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂದುಳಿದ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದು, ಅದರ ಅಭಿವೃದ್ಧಿಗಾಗಿ […]

ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್, ಅಭಿನಂದನೆ ಸಲ್ಲಿಸಿದ ಶಿಕ್ಷಣ ಸಚಿವ
ಸಾಧು ಶ್ರೀನಾಥ್​
|

Updated on: Sep 26, 2019 | 12:15 PM

Share

ತಮ್ಮ ನೆಚ್ಚಿನ ನಾಯಕ ನಟರ ಹೆಸರಿನಲ್ಲಿ ಗುಂಪುಗಳನ್ನ ಕಟ್ಟಿಕೊಂಡು ಅವರ ಸಿನಿಮಾಗಳು ರಿಲೀಸ್ ಆದಾಗ ಪ್ರಚಾರ ಮಾಡ್ತಾ, ಥಿಯೇಟರ್ ಮುಂದೆ ಕಟ್ ಔಟ್ ಗೆ ಹಾಲಿನ ಅಭಿಷೇಕ ಮಾಡುವುದು, ‘ಡೈ ಹಾರ್ಡ್ ಫ್ಯಾನ್’ ಅಂತ ನಟರ ಹೆಸರನ್ನು ಅಚ್ಚೆ ಹಾಕಿಸಿಕೊಳ್ಳುವುದು, ಹುಟ್ಟುಹಬ್ಬಕ್ಕೆ ಅವರ ಮನೆಯ ಬಳಿ ಹೋಗಿ ಸೆಲಬ್ರೇಟ್ ಮಾಡೋದು ಕಾಮನ್, ಕಾಮನ್.

ಆದ್ರೆ ಇಲ್ಲಿ ‘ಡಿ ಬಾಸ್’ ದರ್ಶನ್ ಅಭಿಮಾನಿಗಳು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂದುಳಿದ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದು, ಅದರ ಅಭಿವೃದ್ಧಿಗಾಗಿ ದುಡಿಯಲು ಕಂಕಣತೊಟ್ಟಿದ್ದಾರೆ.

ಸರ್ಕಾರಿ ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಮೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನ ‘ಡಿ ಕಂಪನಿ ಫ್ಯಾನ್ಸ್ ಅಸೋಷಿಯೇಷನ್’ ಮೂಲಕ ದರ್ಶನ್ ಮತ್ತು ದಿನಕರ್ ತೂಗುದೀಪ್ ಫ್ಯಾನ್ಸ್ ದತ್ತು ಪಡೆದಿದ್ದಾರೆ. 2 ವರ್ಷಗಳ ಅವಧಿಯಲ್ಲಿ ಶಾಲಾ ಕಟ್ಟಡ ದುರಸ್ಥಿ, ಮಕ್ಕಳಿಗೆ ಉತ್ತಮ ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯದ ನೆರವು ನೀಡಲು ಮುಂದಾಗಿದ್ದಾರೆ.

ಶಿಕ್ಷಣ ಸಚಿವರಿಂದ ಡಿ ಫ್ಯಾನ್ಸ್ ಪ್ರಶಂಸೆ: ಅಭಿಮಾನಿಗಳ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಈಗಾಗಲೆ ದರ್ಶನ್ ಅಭಿಮಾನಿಗಳು ಶಾಲೆಗೆ ಬೇಕಾಗಿರುವ ಸಾಮಾಗ್ರಿ ಪಟ್ಟಿ ಸಿದ್ಧ ಪಡಿಸಿಕೊಂಡಿದ್ದಾರೆ. ಇವರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗ್ತಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ