AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್, ಅಭಿನಂದನೆ ಸಲ್ಲಿಸಿದ ಶಿಕ್ಷಣ ಸಚಿವ

ತಮ್ಮ ನೆಚ್ಚಿನ ನಾಯಕ ನಟರ ಹೆಸರಿನಲ್ಲಿ ಗುಂಪುಗಳನ್ನ ಕಟ್ಟಿಕೊಂಡು ಅವರ ಸಿನಿಮಾಗಳು ರಿಲೀಸ್ ಆದಾಗ ಪ್ರಚಾರ ಮಾಡ್ತಾ, ಥಿಯೇಟರ್ ಮುಂದೆ ಕಟ್ ಔಟ್ ಗೆ ಹಾಲಿನ ಅಭಿಷೇಕ ಮಾಡುವುದು, ‘ಡೈ ಹಾರ್ಡ್ ಫ್ಯಾನ್’ ಅಂತ ನಟರ ಹೆಸರನ್ನು ಅಚ್ಚೆ ಹಾಕಿಸಿಕೊಳ್ಳುವುದು, ಹುಟ್ಟುಹಬ್ಬಕ್ಕೆ ಅವರ ಮನೆಯ ಬಳಿ ಹೋಗಿ ಸೆಲಬ್ರೇಟ್ ಮಾಡೋದು ಕಾಮನ್, ಕಾಮನ್. ಆದ್ರೆ ಇಲ್ಲಿ ‘ಡಿ ಬಾಸ್’ ದರ್ಶನ್ ಅಭಿಮಾನಿಗಳು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂದುಳಿದ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದು, ಅದರ ಅಭಿವೃದ್ಧಿಗಾಗಿ […]

ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್, ಅಭಿನಂದನೆ ಸಲ್ಲಿಸಿದ ಶಿಕ್ಷಣ ಸಚಿವ
ಸಾಧು ಶ್ರೀನಾಥ್​
|

Updated on: Sep 26, 2019 | 12:15 PM

Share

ತಮ್ಮ ನೆಚ್ಚಿನ ನಾಯಕ ನಟರ ಹೆಸರಿನಲ್ಲಿ ಗುಂಪುಗಳನ್ನ ಕಟ್ಟಿಕೊಂಡು ಅವರ ಸಿನಿಮಾಗಳು ರಿಲೀಸ್ ಆದಾಗ ಪ್ರಚಾರ ಮಾಡ್ತಾ, ಥಿಯೇಟರ್ ಮುಂದೆ ಕಟ್ ಔಟ್ ಗೆ ಹಾಲಿನ ಅಭಿಷೇಕ ಮಾಡುವುದು, ‘ಡೈ ಹಾರ್ಡ್ ಫ್ಯಾನ್’ ಅಂತ ನಟರ ಹೆಸರನ್ನು ಅಚ್ಚೆ ಹಾಕಿಸಿಕೊಳ್ಳುವುದು, ಹುಟ್ಟುಹಬ್ಬಕ್ಕೆ ಅವರ ಮನೆಯ ಬಳಿ ಹೋಗಿ ಸೆಲಬ್ರೇಟ್ ಮಾಡೋದು ಕಾಮನ್, ಕಾಮನ್.

ಆದ್ರೆ ಇಲ್ಲಿ ‘ಡಿ ಬಾಸ್’ ದರ್ಶನ್ ಅಭಿಮಾನಿಗಳು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂದುಳಿದ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದು, ಅದರ ಅಭಿವೃದ್ಧಿಗಾಗಿ ದುಡಿಯಲು ಕಂಕಣತೊಟ್ಟಿದ್ದಾರೆ.

ಸರ್ಕಾರಿ ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಮೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನ ‘ಡಿ ಕಂಪನಿ ಫ್ಯಾನ್ಸ್ ಅಸೋಷಿಯೇಷನ್’ ಮೂಲಕ ದರ್ಶನ್ ಮತ್ತು ದಿನಕರ್ ತೂಗುದೀಪ್ ಫ್ಯಾನ್ಸ್ ದತ್ತು ಪಡೆದಿದ್ದಾರೆ. 2 ವರ್ಷಗಳ ಅವಧಿಯಲ್ಲಿ ಶಾಲಾ ಕಟ್ಟಡ ದುರಸ್ಥಿ, ಮಕ್ಕಳಿಗೆ ಉತ್ತಮ ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯದ ನೆರವು ನೀಡಲು ಮುಂದಾಗಿದ್ದಾರೆ.

ಶಿಕ್ಷಣ ಸಚಿವರಿಂದ ಡಿ ಫ್ಯಾನ್ಸ್ ಪ್ರಶಂಸೆ: ಅಭಿಮಾನಿಗಳ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಈಗಾಗಲೆ ದರ್ಶನ್ ಅಭಿಮಾನಿಗಳು ಶಾಲೆಗೆ ಬೇಕಾಗಿರುವ ಸಾಮಾಗ್ರಿ ಪಟ್ಟಿ ಸಿದ್ಧ ಪಡಿಸಿಕೊಂಡಿದ್ದಾರೆ. ಇವರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗ್ತಿದೆ.

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್