AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Press Meet: ಕಾಣದ ಕೈಗಳು ಕೆಲಸ ಮಾಡುತ್ತಿವೆ; ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಗರಂ

ದರ್ಶನ್ ಸುದ್ದಿಗೋಷ್ಠಿ: ಸಿನಿಮಾ ಇದ್ದರೆ ಹೊರಗೆ ಬರುತ್ತೀನಿ. ಇಲ್ಲ ಅಂದರೆ ಈ ತರ ವಿಷಯ ಇದ್ದರೆ ಹೊರಗೆ ಬರುತ್ತೀನಿ ಅಷ್ಟೆ. ಊಟ ಕೊಡುವುದು ವಿಳಂಬವಾಗಿದ್ದಕ್ಕೆ ಪ್ರಶ್ನಿಸಿದ್ದೆ. ಯಾಕಪ್ಪಾ ಎಂದು ಪ್ರಶ್ನಿಸಿದ್ದೆ ಅದನ್ನೇ ದೊಡ್ಡದು ಮಾಡ್ತಿದ್ದಾರೆ.

Darshan Press Meet: ಕಾಣದ ಕೈಗಳು ಕೆಲಸ ಮಾಡುತ್ತಿವೆ; ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಗರಂ
ನಟ ದರ್ಶನ್​(ಸಾಂದರ್ಭಿಕ ಚಿತ್ರ)
TV9 Web
| Edited By: sandhya thejappa|

Updated on:Jul 15, 2021 | 1:06 PM

Share

ಬೆಂಗಳೂರು: ಇಂದ್ರಜಿತ್ ಲಂಕೇಶ್ ಏನು ಬೇಕಾದರೂ ಹೇಳಿಕೊಳ್ಳಲಿ ಎಂದು ಹೇಳಿಕೆ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಜೂನ್ 16ರಂದೇ ಅರುಣಾ ಕುಮಾರಿಗೆ ನಿನ್ನದು ಏನೂ ತಪ್ಪಿಲ್ಲ ಎಂದು ಹೇಳಿದ್ದೆ. ನಾವು ಯಾವುದೇ ಕಾರಣಕ್ಕೂ ಇದನ್ನು ಮುಚ್ಚಾಕುತ್ತಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನನ್ನದು, ಸಂದೇಶ್ ನಾಗರಾಜ್ದು ಸಾವಿರ ಗಲಾಟೆ ಇದೆ. ನಾನು ಹಲ್ಲೆ ನಡೆಸಿದ್ದೇನೆ ಎಂಬುದು ಅವರ ಆರೋಪ ಅಲ್ಲವೇ, ಅದು ಸಾಬೀತಾಗಿದ್ಯಾ? ಎಂದು ಪ್ರಶ್ನಿಸಿದ್ದಾರೆ.

ಸಿನಿಮಾ ಇದ್ದರೆ ಹೊರಗೆ ಬರುತ್ತೀನಿ. ಇಲ್ಲ ಅಂದರೆ ಈ ತರ ವಿಷಯ ಇದ್ದರೆ ಹೊರಗೆ ಬರುತ್ತೀನಿ ಅಷ್ಟೆ. ಊಟ ಕೊಡುವುದು ವಿಳಂಬವಾಗಿದ್ದಕ್ಕೆ ಪ್ರಶ್ನಿಸಿದ್ದೆ. ಯಾಕಪ್ಪಾ ಎಂದು ಪ್ರಶ್ನಿಸಿದ್ದೆ ಅದನ್ನೇ ದೊಡ್ಡದು ಮಾಡ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಬೆಂಗಳೂರಿನಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್ ಹೇಳಿದರು.

ಸಂದೇಶ್ ಮತ್ತು ನನ್ನ ನಡುವೆ ಸಾಕಷ್ಟು ಜಗಳಗಳು ಇದಾವೆ. ಊಟ ಯಾಕಪ್ಪ ಲೇಟು, ಅಂತ ಗದರಿರಬಹುದು. ನಾನೇನಾದ್ರು ಮಾಡಿದ್ರೆ ಸಂದೇಶ್ ಸುಮ್ಮನೆ ಇರುತ್ತಿರಲಿಲ್ಲ. ಇಂದ್ರಜಿತ್ ದೊಡ್ಡವರು ಏನೂ ಬೇಕಾದ್ರು ಹೇಳಲಿ.  ಊಹ, ಪೋಹಗಳನ್ನ ಬಿಟ್ಟು ಬಿಡಿ ಎಂದು ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಅಸ್ಪಷ್ಟ ಉತ್ತರ ನೀಡಿದ್ದಾರೆ.

ಇಂದ್ರಜಿತ್ ಅವರು ದೊಡ್ಡ ತನಿಖೆದಾರರು, ನಾಲ್ಕು ದಿನದ ಲೆಕ್ಕ ತೆಗೆದುಕೊಳ್ಳಲಿ. ಇಂದ್ರಜಿತ್ ಅವರು ಪ್ರೂವ್ ಮಾಡಿಕೊಳ್ಳಲಿ ಎಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ ಚಾಲೆಂಜಿಂಗ್ ಸ್ಟಾರ್, ಇಂದ್ರಜಿತ್ ಅವರು ಎರಡು ಬಾರಿ ಇಂಟರ್ ವ್ಯೂ ಕೇಳಿ ಕರೆ ಮಾಡಿದ್ದರು. ನಾನು ಈಗ ಆಗಲ್ಲ ಅಂದೆ. ಅವರು ನನ್ನ ಒಂದು ಸಿನೆಮಾ ನಿರ್ದೇಶನ ಮಾಡಿದ್ದಾರೆ. ಈಗ ಈ ಇಶ್ಯೂ ಮಾಡಿ ಹೊಸದಾಗಿ ಏನೋ ಡೈರೆಕ್ಟ್ ಮಾಡ್ತಿದ್ದಾರೆ. ಈಗ ಮೈಸೂರಿಗೆ ಹೋಗ್ತಾ ಇದ್ದೇನೆ. ಉಮಾಪತಿ, ಹರ್ಷಗೆ  ಇಲ್ಲಿಗೆ ನಿಲ್ಲಿಸಿ ಎಂದಿದ್ದೇನೆ. ಪೊಲೀಸ್ ತನಿಖೆ ನಡೆದ ಮೇಲೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಸಂಜೆ 5 ಘಂಟೆಗೆ ಇಂದ್ರಜಿತ್ ಲಂಕೇಶ್​ ಮತ್ತೊಂದು ಸುದ್ದಿಗೋಷ್ಠಿ; ಈ ಮಧ್ಯೆ ದರ್ಶನ್ ಪ್ರತಿಕ್ರಿಯೆ ಸಾಧ್ಯತೆ

Indrajit Lankesh Press Meet: ಮೈಸೂರು ಪೊಲೀಸ್ ಸ್ಟೇಷನ್​ಗಳು ಸೆಟಲ್ ಮೆಂಟ್ ಸ್ಟೇಷನ್​ಗಳಾಗಿವೆ; ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

(Darshan react to Indrajit Lankesh Statement in Bengaluru)

Published On - 12:42 pm, Thu, 15 July 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು