AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Press Meet: ಕಾಣದ ಕೈಗಳು ಕೆಲಸ ಮಾಡುತ್ತಿವೆ; ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಗರಂ

ದರ್ಶನ್ ಸುದ್ದಿಗೋಷ್ಠಿ: ಸಿನಿಮಾ ಇದ್ದರೆ ಹೊರಗೆ ಬರುತ್ತೀನಿ. ಇಲ್ಲ ಅಂದರೆ ಈ ತರ ವಿಷಯ ಇದ್ದರೆ ಹೊರಗೆ ಬರುತ್ತೀನಿ ಅಷ್ಟೆ. ಊಟ ಕೊಡುವುದು ವಿಳಂಬವಾಗಿದ್ದಕ್ಕೆ ಪ್ರಶ್ನಿಸಿದ್ದೆ. ಯಾಕಪ್ಪಾ ಎಂದು ಪ್ರಶ್ನಿಸಿದ್ದೆ ಅದನ್ನೇ ದೊಡ್ಡದು ಮಾಡ್ತಿದ್ದಾರೆ.

Darshan Press Meet: ಕಾಣದ ಕೈಗಳು ಕೆಲಸ ಮಾಡುತ್ತಿವೆ; ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಗರಂ
ನಟ ದರ್ಶನ್​(ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Jul 15, 2021 | 1:06 PM

Share

ಬೆಂಗಳೂರು: ಇಂದ್ರಜಿತ್ ಲಂಕೇಶ್ ಏನು ಬೇಕಾದರೂ ಹೇಳಿಕೊಳ್ಳಲಿ ಎಂದು ಹೇಳಿಕೆ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಜೂನ್ 16ರಂದೇ ಅರುಣಾ ಕುಮಾರಿಗೆ ನಿನ್ನದು ಏನೂ ತಪ್ಪಿಲ್ಲ ಎಂದು ಹೇಳಿದ್ದೆ. ನಾವು ಯಾವುದೇ ಕಾರಣಕ್ಕೂ ಇದನ್ನು ಮುಚ್ಚಾಕುತ್ತಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನನ್ನದು, ಸಂದೇಶ್ ನಾಗರಾಜ್ದು ಸಾವಿರ ಗಲಾಟೆ ಇದೆ. ನಾನು ಹಲ್ಲೆ ನಡೆಸಿದ್ದೇನೆ ಎಂಬುದು ಅವರ ಆರೋಪ ಅಲ್ಲವೇ, ಅದು ಸಾಬೀತಾಗಿದ್ಯಾ? ಎಂದು ಪ್ರಶ್ನಿಸಿದ್ದಾರೆ.

ಸಿನಿಮಾ ಇದ್ದರೆ ಹೊರಗೆ ಬರುತ್ತೀನಿ. ಇಲ್ಲ ಅಂದರೆ ಈ ತರ ವಿಷಯ ಇದ್ದರೆ ಹೊರಗೆ ಬರುತ್ತೀನಿ ಅಷ್ಟೆ. ಊಟ ಕೊಡುವುದು ವಿಳಂಬವಾಗಿದ್ದಕ್ಕೆ ಪ್ರಶ್ನಿಸಿದ್ದೆ. ಯಾಕಪ್ಪಾ ಎಂದು ಪ್ರಶ್ನಿಸಿದ್ದೆ ಅದನ್ನೇ ದೊಡ್ಡದು ಮಾಡ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಬೆಂಗಳೂರಿನಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್ ಹೇಳಿದರು.

ಸಂದೇಶ್ ಮತ್ತು ನನ್ನ ನಡುವೆ ಸಾಕಷ್ಟು ಜಗಳಗಳು ಇದಾವೆ. ಊಟ ಯಾಕಪ್ಪ ಲೇಟು, ಅಂತ ಗದರಿರಬಹುದು. ನಾನೇನಾದ್ರು ಮಾಡಿದ್ರೆ ಸಂದೇಶ್ ಸುಮ್ಮನೆ ಇರುತ್ತಿರಲಿಲ್ಲ. ಇಂದ್ರಜಿತ್ ದೊಡ್ಡವರು ಏನೂ ಬೇಕಾದ್ರು ಹೇಳಲಿ.  ಊಹ, ಪೋಹಗಳನ್ನ ಬಿಟ್ಟು ಬಿಡಿ ಎಂದು ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಅಸ್ಪಷ್ಟ ಉತ್ತರ ನೀಡಿದ್ದಾರೆ.

ಇಂದ್ರಜಿತ್ ಅವರು ದೊಡ್ಡ ತನಿಖೆದಾರರು, ನಾಲ್ಕು ದಿನದ ಲೆಕ್ಕ ತೆಗೆದುಕೊಳ್ಳಲಿ. ಇಂದ್ರಜಿತ್ ಅವರು ಪ್ರೂವ್ ಮಾಡಿಕೊಳ್ಳಲಿ ಎಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ ಚಾಲೆಂಜಿಂಗ್ ಸ್ಟಾರ್, ಇಂದ್ರಜಿತ್ ಅವರು ಎರಡು ಬಾರಿ ಇಂಟರ್ ವ್ಯೂ ಕೇಳಿ ಕರೆ ಮಾಡಿದ್ದರು. ನಾನು ಈಗ ಆಗಲ್ಲ ಅಂದೆ. ಅವರು ನನ್ನ ಒಂದು ಸಿನೆಮಾ ನಿರ್ದೇಶನ ಮಾಡಿದ್ದಾರೆ. ಈಗ ಈ ಇಶ್ಯೂ ಮಾಡಿ ಹೊಸದಾಗಿ ಏನೋ ಡೈರೆಕ್ಟ್ ಮಾಡ್ತಿದ್ದಾರೆ. ಈಗ ಮೈಸೂರಿಗೆ ಹೋಗ್ತಾ ಇದ್ದೇನೆ. ಉಮಾಪತಿ, ಹರ್ಷಗೆ  ಇಲ್ಲಿಗೆ ನಿಲ್ಲಿಸಿ ಎಂದಿದ್ದೇನೆ. ಪೊಲೀಸ್ ತನಿಖೆ ನಡೆದ ಮೇಲೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಸಂಜೆ 5 ಘಂಟೆಗೆ ಇಂದ್ರಜಿತ್ ಲಂಕೇಶ್​ ಮತ್ತೊಂದು ಸುದ್ದಿಗೋಷ್ಠಿ; ಈ ಮಧ್ಯೆ ದರ್ಶನ್ ಪ್ರತಿಕ್ರಿಯೆ ಸಾಧ್ಯತೆ

Indrajit Lankesh Press Meet: ಮೈಸೂರು ಪೊಲೀಸ್ ಸ್ಟೇಷನ್​ಗಳು ಸೆಟಲ್ ಮೆಂಟ್ ಸ್ಟೇಷನ್​ಗಳಾಗಿವೆ; ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

(Darshan react to Indrajit Lankesh Statement in Bengaluru)

Published On - 12:42 pm, Thu, 15 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್