AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕಾರ; ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ- ಬಿ.ಸಿ ಪಾಟೀಲ್​

ವಿಕಾಸಸೌಧದಲ್ಲಿ ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕರಿಸಿದರು. ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಸಮ್ಮುಖದಲ್ಲಿ ನಟ ದರ್ಶನ್​ ನೂತನ ರಾಯಭಾರಿಯಾಗಿ ನೇಮಕಗೊಂಡರು.

ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕಾರ; ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ- ಬಿ.ಸಿ ಪಾಟೀಲ್​
ಕೃಷಿ ರಾಯಭಾರಿಯಾದ ನಟ ದರ್ಶನ್​
shruti hegde
| Updated By: ಸಾಧು ಶ್ರೀನಾಥ್​|

Updated on: Mar 05, 2021 | 4:39 PM

Share

ಬೆಂಗಳೂರು: ವಿಕಾಸಸೌಧದಲ್ಲಿ ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಹಸಿರು ಶಾಲು ಹೊದಿಸಿ, ಮೈಸೂರು ಪೇಟಾ, ನೇಗಿಲು ಕೊಟ್ಟು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸನ್ಮಾನ ಮಾಡಿದರು. ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಸಮ್ಮುಖದಲ್ಲಿ ನಟ ದರ್ಶನ್​ ನೂತನ ರಾಯಭಾರಿಯಾಗಿ ನೇಮಕಗೊಂಡರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಯಾವುದೇ ಸಂಭಾವನೆ ಪಡೆಯದೇ ನಟ ದರ್ಶನ್​ ರಾಯಭಾರಿಯಾಗಿದ್ದಾರೆ. ಬೇರೆ ನಟರುಗಳಾಗಿದ್ದರೆ ಕೋಟಿ ಕೋಟಿ ಹಣ ಪಡೆದು ಕಂಪನಿಗಳ ರಾಯಭಾರಿಯಾಗುತ್ತಿದ್ದರು. ಇಲ್ಲಿಯವರೆಗೆ ಕೃಷಿ ಇಲಾಖೆಯಲ್ಲಿ ಕಂಡು ಕೇಳರಿಯದ ಕಾರ್ಯಕ್ರಮವಿದು ಎಂದರು.

b c patil

ಕೃಷಿ ಇಲಾಖೆ ಸಚಿವ ಬಿ.ಸಿ ಪಾಟೀಲ್​

ಮುಖ್ಯಮಂತ್ರಿ ಯಡಿಯೂರಪ್ಪ  ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಖುಷಿಯಾಗಿದೆ. ಇನ್ನು, ನಟ ದರ್ಶನ್​ ಕುರಿತಾಗಿ ಹೇಳುವುದಾದರೆ ಕೃಷಿ ಹಾಗೂ ಪಶುಸಂಗೋಪನೆಯಲ್ಲಿ ದರ್ಶನ್ ತೊಡಗಿಸಿಕೊಂಡವರು. ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ. ಬಡವರು, ರೈತರ ಎಂಬುದರ ಬಗ್ಗೆ ನಟ ದರ್ಶನ್‌ಗೆ ತುಂಬಾ ಕಳಕಳಿ ಇದೆ. ಒಂದೂವರೆ ತಿಂಗಳ ಹಿಂದೆ ಅವರ ಫಾರ್ಮ್‌ಹೌಸ್‌ಗೆ ನಾನು ಹೋಗಿದ್ದೆ. ಫಾರ್ಮ್‌ಹೌಸ್‌ ಒಂದು ರೀತಿಯ ಮಿನಿ ಝೂ ನಂತೆ ಇದೆ. ಸುಮಾರು 150 ಜನರಿಗೆ ಕೆಲಸ ಕೊಟ್ಟಿದ್ದಾರೆ. ದರ್ಶನ್ ಕಷ್ಟದ ಜೀವನ ನಡೆಸಿ ಉನ್ನತ ಸ್ಥಾನಕ್ಕೆ ಬಂದಿದ್ದಾರೆ ಎಂದುಅಭಿಮಾನದಿಂದ ನುಡಿದರು.

bsy

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ

ಇವತ್ತು ರಾಬರ್ಟ್ ಸಿನಿಮಾಕ್ಕೆ ಎರಡೂವರೆಯಿಂದ ಮೂರು ಲಕ್ಷ ಜನ ಸೇರಿದ್ದರು. ಆದರೆ ನಾವೂ ಕಾರ್ಯಕ್ರಮವನ್ನ ಮಾಡಬೇಕೆಂದರೆ ಜನರನ್ನ ಕರೆದುಕೊಂಡು ಬರಬೇಕು. ದರ್ಶನ್​ ಕಾರ್ಯಕ್ರಮ ಅಂದ್ರೆ ಜನರೇ ಸ್ವಇಚ್ಛೆಯಿಂದ ಬರುತ್ತಾರೆ. ಅವರು ಪರಕಾಯ ಪ್ರವೇಶ ಮಾಡಿ ಅದ್ಭುತವಾಗಿ ನಟನೆ ಮಾಡ್ತಾರೆ. ಅವರ ರಾಬರ್ಟ್ ಸಿನಿಮಾ ಶತಕ ಬಾರಿಸಲಿ ಅಂತಾ ನಮ್ಮ ಕೃಷಿ ಇಲಾಖೆಯಿಂದ ಹರಿಸುತ್ತೇವೆ ಎಂದು ದರ್ಶನ್​ ಕುರಿತಾಗಿ ಹೇಳಿದರು.

ಇದನ್ನೂ ಓದಿ: D Boss Darshan: ಸಂಭಾವನೆ ಪಡೆಯದೆ ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾದ ದರ್ಶನ್​

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು