AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕಾರ; ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ- ಬಿ.ಸಿ ಪಾಟೀಲ್​

ವಿಕಾಸಸೌಧದಲ್ಲಿ ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕರಿಸಿದರು. ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಸಮ್ಮುಖದಲ್ಲಿ ನಟ ದರ್ಶನ್​ ನೂತನ ರಾಯಭಾರಿಯಾಗಿ ನೇಮಕಗೊಂಡರು.

ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕಾರ; ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ- ಬಿ.ಸಿ ಪಾಟೀಲ್​
ಕೃಷಿ ರಾಯಭಾರಿಯಾದ ನಟ ದರ್ಶನ್​
shruti hegde
| Edited By: |

Updated on: Mar 05, 2021 | 4:39 PM

Share

ಬೆಂಗಳೂರು: ವಿಕಾಸಸೌಧದಲ್ಲಿ ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಹಸಿರು ಶಾಲು ಹೊದಿಸಿ, ಮೈಸೂರು ಪೇಟಾ, ನೇಗಿಲು ಕೊಟ್ಟು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸನ್ಮಾನ ಮಾಡಿದರು. ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಸಮ್ಮುಖದಲ್ಲಿ ನಟ ದರ್ಶನ್​ ನೂತನ ರಾಯಭಾರಿಯಾಗಿ ನೇಮಕಗೊಂಡರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಯಾವುದೇ ಸಂಭಾವನೆ ಪಡೆಯದೇ ನಟ ದರ್ಶನ್​ ರಾಯಭಾರಿಯಾಗಿದ್ದಾರೆ. ಬೇರೆ ನಟರುಗಳಾಗಿದ್ದರೆ ಕೋಟಿ ಕೋಟಿ ಹಣ ಪಡೆದು ಕಂಪನಿಗಳ ರಾಯಭಾರಿಯಾಗುತ್ತಿದ್ದರು. ಇಲ್ಲಿಯವರೆಗೆ ಕೃಷಿ ಇಲಾಖೆಯಲ್ಲಿ ಕಂಡು ಕೇಳರಿಯದ ಕಾರ್ಯಕ್ರಮವಿದು ಎಂದರು.

b c patil

ಕೃಷಿ ಇಲಾಖೆ ಸಚಿವ ಬಿ.ಸಿ ಪಾಟೀಲ್​

ಮುಖ್ಯಮಂತ್ರಿ ಯಡಿಯೂರಪ್ಪ  ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಖುಷಿಯಾಗಿದೆ. ಇನ್ನು, ನಟ ದರ್ಶನ್​ ಕುರಿತಾಗಿ ಹೇಳುವುದಾದರೆ ಕೃಷಿ ಹಾಗೂ ಪಶುಸಂಗೋಪನೆಯಲ್ಲಿ ದರ್ಶನ್ ತೊಡಗಿಸಿಕೊಂಡವರು. ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ. ಬಡವರು, ರೈತರ ಎಂಬುದರ ಬಗ್ಗೆ ನಟ ದರ್ಶನ್‌ಗೆ ತುಂಬಾ ಕಳಕಳಿ ಇದೆ. ಒಂದೂವರೆ ತಿಂಗಳ ಹಿಂದೆ ಅವರ ಫಾರ್ಮ್‌ಹೌಸ್‌ಗೆ ನಾನು ಹೋಗಿದ್ದೆ. ಫಾರ್ಮ್‌ಹೌಸ್‌ ಒಂದು ರೀತಿಯ ಮಿನಿ ಝೂ ನಂತೆ ಇದೆ. ಸುಮಾರು 150 ಜನರಿಗೆ ಕೆಲಸ ಕೊಟ್ಟಿದ್ದಾರೆ. ದರ್ಶನ್ ಕಷ್ಟದ ಜೀವನ ನಡೆಸಿ ಉನ್ನತ ಸ್ಥಾನಕ್ಕೆ ಬಂದಿದ್ದಾರೆ ಎಂದುಅಭಿಮಾನದಿಂದ ನುಡಿದರು.

bsy

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ

ಇವತ್ತು ರಾಬರ್ಟ್ ಸಿನಿಮಾಕ್ಕೆ ಎರಡೂವರೆಯಿಂದ ಮೂರು ಲಕ್ಷ ಜನ ಸೇರಿದ್ದರು. ಆದರೆ ನಾವೂ ಕಾರ್ಯಕ್ರಮವನ್ನ ಮಾಡಬೇಕೆಂದರೆ ಜನರನ್ನ ಕರೆದುಕೊಂಡು ಬರಬೇಕು. ದರ್ಶನ್​ ಕಾರ್ಯಕ್ರಮ ಅಂದ್ರೆ ಜನರೇ ಸ್ವಇಚ್ಛೆಯಿಂದ ಬರುತ್ತಾರೆ. ಅವರು ಪರಕಾಯ ಪ್ರವೇಶ ಮಾಡಿ ಅದ್ಭುತವಾಗಿ ನಟನೆ ಮಾಡ್ತಾರೆ. ಅವರ ರಾಬರ್ಟ್ ಸಿನಿಮಾ ಶತಕ ಬಾರಿಸಲಿ ಅಂತಾ ನಮ್ಮ ಕೃಷಿ ಇಲಾಖೆಯಿಂದ ಹರಿಸುತ್ತೇವೆ ಎಂದು ದರ್ಶನ್​ ಕುರಿತಾಗಿ ಹೇಳಿದರು.

ಇದನ್ನೂ ಓದಿ: D Boss Darshan: ಸಂಭಾವನೆ ಪಡೆಯದೆ ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾದ ದರ್ಶನ್​

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ