ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕಾರ; ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ- ಬಿ.ಸಿ ಪಾಟೀಲ್​

| Updated By: ಸಾಧು ಶ್ರೀನಾಥ್​

Updated on: Mar 05, 2021 | 4:39 PM

ವಿಕಾಸಸೌಧದಲ್ಲಿ ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕರಿಸಿದರು. ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಸಮ್ಮುಖದಲ್ಲಿ ನಟ ದರ್ಶನ್​ ನೂತನ ರಾಯಭಾರಿಯಾಗಿ ನೇಮಕಗೊಂಡರು.

ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕಾರ; ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ- ಬಿ.ಸಿ ಪಾಟೀಲ್​
ಕೃಷಿ ರಾಯಭಾರಿಯಾದ ನಟ ದರ್ಶನ್​
Follow us on

ಬೆಂಗಳೂರು: ವಿಕಾಸಸೌಧದಲ್ಲಿ ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಹಸಿರು ಶಾಲು ಹೊದಿಸಿ, ಮೈಸೂರು ಪೇಟಾ, ನೇಗಿಲು ಕೊಟ್ಟು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸನ್ಮಾನ ಮಾಡಿದರು. ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಸಮ್ಮುಖದಲ್ಲಿ ನಟ ದರ್ಶನ್​ ನೂತನ ರಾಯಭಾರಿಯಾಗಿ ನೇಮಕಗೊಂಡರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಯಾವುದೇ ಸಂಭಾವನೆ ಪಡೆಯದೇ ನಟ ದರ್ಶನ್​ ರಾಯಭಾರಿಯಾಗಿದ್ದಾರೆ. ಬೇರೆ ನಟರುಗಳಾಗಿದ್ದರೆ ಕೋಟಿ ಕೋಟಿ ಹಣ ಪಡೆದು ಕಂಪನಿಗಳ ರಾಯಭಾರಿಯಾಗುತ್ತಿದ್ದರು. ಇಲ್ಲಿಯವರೆಗೆ ಕೃಷಿ ಇಲಾಖೆಯಲ್ಲಿ ಕಂಡು ಕೇಳರಿಯದ ಕಾರ್ಯಕ್ರಮವಿದು ಎಂದರು.

ಕೃಷಿ ಇಲಾಖೆ ಸಚಿವ ಬಿ.ಸಿ ಪಾಟೀಲ್​

ಮುಖ್ಯಮಂತ್ರಿ ಯಡಿಯೂರಪ್ಪ  ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಖುಷಿಯಾಗಿದೆ. ಇನ್ನು, ನಟ ದರ್ಶನ್​ ಕುರಿತಾಗಿ ಹೇಳುವುದಾದರೆ ಕೃಷಿ ಹಾಗೂ ಪಶುಸಂಗೋಪನೆಯಲ್ಲಿ ದರ್ಶನ್ ತೊಡಗಿಸಿಕೊಂಡವರು. ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ. ಬಡವರು, ರೈತರ ಎಂಬುದರ ಬಗ್ಗೆ ನಟ ದರ್ಶನ್‌ಗೆ ತುಂಬಾ ಕಳಕಳಿ ಇದೆ. ಒಂದೂವರೆ ತಿಂಗಳ ಹಿಂದೆ ಅವರ ಫಾರ್ಮ್‌ಹೌಸ್‌ಗೆ ನಾನು ಹೋಗಿದ್ದೆ. ಫಾರ್ಮ್‌ಹೌಸ್‌ ಒಂದು ರೀತಿಯ ಮಿನಿ ಝೂ ನಂತೆ ಇದೆ. ಸುಮಾರು 150 ಜನರಿಗೆ ಕೆಲಸ ಕೊಟ್ಟಿದ್ದಾರೆ. ದರ್ಶನ್ ಕಷ್ಟದ ಜೀವನ ನಡೆಸಿ ಉನ್ನತ ಸ್ಥಾನಕ್ಕೆ ಬಂದಿದ್ದಾರೆ ಎಂದುಅಭಿಮಾನದಿಂದ ನುಡಿದರು.

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ

ಇವತ್ತು ರಾಬರ್ಟ್ ಸಿನಿಮಾಕ್ಕೆ ಎರಡೂವರೆಯಿಂದ ಮೂರು ಲಕ್ಷ ಜನ ಸೇರಿದ್ದರು. ಆದರೆ ನಾವೂ ಕಾರ್ಯಕ್ರಮವನ್ನ ಮಾಡಬೇಕೆಂದರೆ ಜನರನ್ನ ಕರೆದುಕೊಂಡು ಬರಬೇಕು. ದರ್ಶನ್​ ಕಾರ್ಯಕ್ರಮ ಅಂದ್ರೆ ಜನರೇ ಸ್ವಇಚ್ಛೆಯಿಂದ ಬರುತ್ತಾರೆ. ಅವರು ಪರಕಾಯ ಪ್ರವೇಶ ಮಾಡಿ ಅದ್ಭುತವಾಗಿ ನಟನೆ ಮಾಡ್ತಾರೆ. ಅವರ ರಾಬರ್ಟ್ ಸಿನಿಮಾ ಶತಕ ಬಾರಿಸಲಿ ಅಂತಾ ನಮ್ಮ ಕೃಷಿ ಇಲಾಖೆಯಿಂದ ಹರಿಸುತ್ತೇವೆ ಎಂದು ದರ್ಶನ್​ ಕುರಿತಾಗಿ ಹೇಳಿದರು.

ಇದನ್ನೂ ಓದಿ: D Boss Darshan: ಸಂಭಾವನೆ ಪಡೆಯದೆ ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾದ ದರ್ಶನ್​