AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ರಾಜಾತಿಥ್ಯ ಕೇಸ್​: ವಿಲ್ಸನ್ ಗಾರ್ಡನ್ ನಾಗ, ವೇಲುಗೆ 3 ದಿನ ಪೊಲೀಸ್​ ಕಸ್ಟಡಿ, ದರ್ಶನ್​​ಗೆ ಸಂಕಷ್ಟ ಎದುರಾಗುತ್ತಾ?

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಗಾರ್ಡನ್ ನಾಗ ಮತ್ತು ವೇಲುಗೆ 3 ದಿನ ಪೊಲೀಸ್​ ಕಸ್ಟಡಿ ನೀಡಿ ಬೆಂಗಳೂರಿನ 9ನೇ ಅಪರ ಮುಖ್ಯ ನ್ಯಾಯಾಧೀಶರ ಆದೇಶ ಹೊರಡಿಸಿದೆ. ಮತ್ತೊಂದಡೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ  ಕೋರ್ಟ್ ನಾಳೆಗೆ ವಿಚಾರಣೆ ಮುಂದೂಡಿದೆ.

ಜೈಲಿನಲ್ಲಿ ರಾಜಾತಿಥ್ಯ ಕೇಸ್​: ವಿಲ್ಸನ್ ಗಾರ್ಡನ್ ನಾಗ, ವೇಲುಗೆ 3 ದಿನ ಪೊಲೀಸ್​ ಕಸ್ಟಡಿ, ದರ್ಶನ್​​ಗೆ ಸಂಕಷ್ಟ ಎದುರಾಗುತ್ತಾ?
ಜೈಲಿನಲ್ಲಿ ರಾಜಾತಿಥ್ಯ ಕೇಸ್​: ವಿಲ್ಸನ್ ಗಾರ್ಡನ್ ನಾಗ, ವೇಲುಗೆ 3 ದಿನ ಪೊಲೀಸ್​ ಕಸ್ಟಡಿ, ದರ್ಶನ್​​ಗೆ ಸಂಕಷ್ಟ ಎದುರಾಗುತ್ತಾ?
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 19, 2024 | 6:03 PM

Share

ಬೆಂಗಳೂರು, ಸೆಪ್ಟೆಂಬರ್​ 19: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಗಾರ್ಡನ್ ನಾಗ (Wilson Garden Naga) ಮತ್ತು ವೇಲುಗೆ 3 ದಿನ ಪೊಲೀಸ್​ ಕಸ್ಟಡಿ ನೀಡಿ ಬೆಂಗಳೂರಿನ 9ನೇ ಅಪರ ಮುಖ್ಯ ನ್ಯಾಯಾಧೀಶರ ಆದೇಶ ಹೊರಡಿಸಲಾಗಿದೆ. ಇಂದಿನಿಂದ ಸೆ.21ರ ಸಂಜೆ 4.30ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದ್ದು, ಅಷ್ಟರೊಳಗೆ ಕೋರ್ಟ್​ಗೆ ಹಾಜರುಪಡಿಸಲು ಸೂಚಿಸಲಾಗಿದೆ.

ನಾಗ ಮತ್ತು ವೇಲು ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ ಪೊಲೀಸರು, ಜೈಲಿನ ಒಳಗೆ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಮೊಬೈಲ್​ಗಳು ಪತ್ತೆಯಾಗಿದೆ. ಇನ್ನೂ ಕೆಲ ಮೊಬೈಲ್ ಪತ್ತೆಮಾಡಬೇಕಿದೆ. ಹೀಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ; ವಿಲ್ಸನ್ ಗಾರ್ಡನ್ ನಾಗನ ಫೋನ್ ಸೇರಿ 18 ಮೊಬೈಲ್ ಸೀಜ್

ಜೈಲಿನ ಒಳಗೆ ನಡೆದಿರುವ ವಿಚಾರ ಹಾಗಾಗಿ ಜೈಲಿನ ಒಳಗೆ ವಿಚಾರಣೆ ನಡೆಯಲಿ. ಇವರನ್ನು ಹೊರ ಕರೆತಂದು ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲಾ ಎಂದು ನಾಗನ ಪರ ವಕೀಲರು ಮನವಿ ಮಾಡಿದ್ದಾರೆ. ಈಗಾಗಲೇ ಬೆಳಗಾವಿ ಜೈಲಿಗೆ ವರ್ಗಾವಣೆ ಆದೇಶ ಆಗಿದೆ ಎಂದು ಕೊರ್ಟ್​ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸೆಷನ್ಸ್ ಕೋರ್ಟ್ ಆದೇಶ ಪ್ರತಿಯನ್ನು ನ್ಯಾಯಾಧೀಶರು ಕೇಳಿದ್ದಾರೆ. ಬಳಿಕ ಕೆಲಕಾಲ ವಿಚಾರಣೆಯನ್ನು 9ನೇ ACMM ಕೋರ್ಟ್​ ಜಡ್ಜ್ ಮುಂದೂಡಿದರು.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿದ ಕೋರ್ಟ್

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ  ಕೋರ್ಟ್ ನಾಳೆಗೆ ವಿಚಾರಣೆ ಮುಂದೂಡಿದೆ. ಜಾಗವೊಂದರ ಬೀಗ ತೆರವಿಗೆ ಅನುಮತಿ ಕೋರಿ ಕಗ್ಗಲೀಪುರ ಪೊಲೀಸರಿಂದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ವಿಲ್ಸನ್​ ಗಾರ್ಡನ್​ ನಾಗನ ಮೊಬೈಲ್​ ವಶಕ್ಕೆ

ವೈಯಾಲಿಕಾವಲ್ ಪೊಲೀಸರಿಂದ ಚಲುವರಾಜು ದೂರಿಗೆ ಸಂಬಂಧಿಸಿದಂತೆ ಬಾಡಿ ವಾರಂಟ್​ಗೆ ಅರ್ಜಿಗೆ ಮನವಿ ಮಾಡಲಾಗಿದೆ. ಈಗಾಗಲೇ ನಿರೀಕ್ಷಣಾ ಜಾಮೀನು ಮಂಜೂರಾಗಿರುವ ಹಿನ್ನೆಲೆ ಬಾಡಿ ವಾರಂಟ್​ಗೆ ಮುನಿರತ್ನ ಪರ ವಕೀಲರಿಂದ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್