AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ, ದೀಪಾವಳಿ: ಸಿಹಿತಿಂಡಿಗಳು ಸುರಕ್ಷಿತವಾ? ಸ್ವೀಟ್ಸ್‌ಗಳ ಟೆಸ್ಟ್‌ಗೆ ಮುಂದಾದ ಆಹಾರ ಇಲಾಖೆ

ದಸರಾ, ದೀಪಾವಳಿ ಹಬ್ಬ ಬಂತು ಅಂದರೆ ನೆನಪಾಗುವುದು ರುಚಿರುಚಿಯಾದ ಸಿಹಿ ತಿಂಡಿಗಳು. ಈ ಹಬ್ಬಗಳಲ್ಲಿ ಸ್ವೀಟ್ ಹಂಚಿ ಸಂಭ್ರಮಿಸುತ್ತಾರೆ. ‌ದರೆ ಇದೀಗ ಸ್ವೀಟ್‌ಗಳಲ್ಲೂ ಕಲಬೆರಕೆ ಇದೆಯಾ ಎಂಬ ಅನುಮಾನ ಕಾಡಲು ಶುರುವಾಗಿದೆ.‌ ಈ ಹಿನ್ನೆಲೆ ಸ್ವೀಟ್ಸ್‌ಗಳ ಗುಣಮಟ್ಟ ಪರಿಶೀಲನೆಗೆ ಆಹಾರ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.‌

ದಸರಾ, ದೀಪಾವಳಿ: ಸಿಹಿತಿಂಡಿಗಳು ಸುರಕ್ಷಿತವಾ? ಸ್ವೀಟ್ಸ್‌ಗಳ ಟೆಸ್ಟ್‌ಗೆ ಮುಂದಾದ ಆಹಾರ ಇಲಾಖೆ
ಸಿಹಿತಿಂಡಿಗಳು (ಸಾಂದರ್ಭಿಕ ಚಿತ್ರ)Image Credit source: Getty Images
Vinay Kashappanavar
| Edited By: |

Updated on: Sep 26, 2024 | 8:09 AM

Share

ಬೆಂಗಳೂರು, ಸೆಪ್ಟೆಂಬರ್ 26: ಆಹಾರ ಇಲಾಖೆಯಿಂದ ಈಗಾಗಲೇ ರಾಜ್ಯದಾದ್ಯಂತ ಆಹಾರ ವಸ್ತುಗಳ ಗಣಮಟ್ಟದ ಪರೀಕ್ಷೆ ಮಾಡಿ ಅನೇಕ ಫುಡ್‌ಗಳಲ್ಲಿ ಕಲಬೆರಕೆ ಪತ್ತೆಯಾಗಿದ್ದರಿಂದ ಅವುಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಇದೀಗ ಸಿಹಿ ತಿಂಡಿಗಳ ಸರದಿ. ಯಾಕೆಂದರೆ, ದಸರಾ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜನ ಹೆಚ್ಚು ಸ್ವೀಟ್ಸ್‌ಗಳನ್ನು ಖರೀದಿ ಮಾಡುತ್ತಾರೆ. ಆದರೆ ಅನೇಕ‌ ಸ್ವೀಟ್ಸ್‌ಗಳಲ್ಲಿ ಕಲರ್ ಬಳಕೆ ಹಾಗೂ ಅದಕ್ಕೆ ಸೇರಿಸುವ ಪದಾರ್ಥಗಳ ಗುಣಮಟ್ಟದ ಬಗ್ಗೆ ಅನುಮಾನ ಮೂಡಿದೆ. ಹೀಗಾಗಿ ಆಹಾರ ಸುರಕ್ಷತಾ ಇಲಾಖೆ ಎಲ್ಲಾ ಬ್ರಾಂಡ್‌ಗಳ ಸ್ವೀಟ್ಸ್‌ಗಳನ್ನ ಪರೀಕ್ಷೆ ಮಾಡಲು ಮುಂದಾಗಿದೆ. ಇದರಿಂದಾಗಿ ಸಿಹಿಯಾಗಿ, ರುಚಿಯಾಗಿ ಸಿಗುವ ಸ್ವೀಟ್ಸ್‌ಗಳಲ್ಲಿ ಆರೋಗ್ಯಕ್ಕೆ ಕಹಿ ಎನಿಸುವ ಅಂಶಗಳಿದೆಯಾ ಎಂಬುದು ತಿಳಿಯಲಿದೆ.‌

ಇದರ ಜೊತೆಗೆ ಬೇಕರಿ ತಿಂಡಿಗಳ ಮೇಲೂ ಇಲಾಖೆ ನಿಗಾವಹಿಸಲು ಮುಂದಾಗಿದೆ. ಕಳಪೆ ಮತ್ತು ಕಲಬೆರಕೆ ತುಪ್ಪದಿಂದ ತಯಾರಾಗುವ ಸಿಹಿಯ ಮೇಲೂ ನಿರ್ಬಂಧ ಹೇರಲು ಸಿದ್ಧತೆ ಮಾಡಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಮತ್ತು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಆಹಾರ ಇಲಾಖೆ ಜನರ ಆರೋಗ್ಯದ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸದ್ಯ ಸ್ವೀಟ್ಸ್‌ಗಳ ಟೆಸ್ಟ್ ಮಾಡಲು ಮುಂದಾಗಿದ್ದು, ವರದಿಗಾಗಿ ಅಧಿಕಾರಿಗಳು ಕಾಯಲಿದ್ದಾರೆ. ವರದಿ ಕೈ ಸೇರಿದ ಬಳಿಕ ಇದು ಸುರಕ್ಷಿತವಾ ಅಥವಾ ಅಲ್ಲವೇ ಎಂಬುದು ತಿಳಿಯಲಿದ್ದು, ನಂತರ ಇಲಾಖೆ ಕ್ರಮ ಕೈಗೊಳ್ಳಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೆಜೆ ಈರುಳ್ಳಿಗೆ ಕೇವಲ 35 ರೂ: ಕೇಂದ್ರ ಸರ್ಕಾರ ಯೋಜನೆಯಿಂದ ಗ್ರಾಹಕರು ಫುಲ್ ಖುಷ್

ರಾಜ್ಯದಲ್ಲಿ ಈಗಾಗಲೇ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಮತ್ತು ರಾಸಾಯನಿಕ ಬೆರೆಸುವುದನ್ನು ನಿಷೇಧಿಸಲಾಗಿದೆ. ಕೃತಕ ಬಣ್ಣ ಹಾಕಿದ ಬಾಂಬೆ ಮಿಠಾಯಿಯನ್ನು ಕೂಡ ನಿಷೇಧಿಸಲಾಗಿದೆ. ರಾಜ್ಯದ ಹೋಟೆಲ್​​ಗಳಲ್ಲಿ ನೀಡುವ ಆಹಾರದ ಗುಣಮಟ್ಟಗಳ ಪರೀಕ್ಷೆಯನ್ನು ಕೂಡ ಆಹಾರ ಇಲಾಖೆ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​