AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ, ದೀಪಾವಳಿ: ಸಿಹಿತಿಂಡಿಗಳು ಸುರಕ್ಷಿತವಾ? ಸ್ವೀಟ್ಸ್‌ಗಳ ಟೆಸ್ಟ್‌ಗೆ ಮುಂದಾದ ಆಹಾರ ಇಲಾಖೆ

ದಸರಾ, ದೀಪಾವಳಿ ಹಬ್ಬ ಬಂತು ಅಂದರೆ ನೆನಪಾಗುವುದು ರುಚಿರುಚಿಯಾದ ಸಿಹಿ ತಿಂಡಿಗಳು. ಈ ಹಬ್ಬಗಳಲ್ಲಿ ಸ್ವೀಟ್ ಹಂಚಿ ಸಂಭ್ರಮಿಸುತ್ತಾರೆ. ‌ದರೆ ಇದೀಗ ಸ್ವೀಟ್‌ಗಳಲ್ಲೂ ಕಲಬೆರಕೆ ಇದೆಯಾ ಎಂಬ ಅನುಮಾನ ಕಾಡಲು ಶುರುವಾಗಿದೆ.‌ ಈ ಹಿನ್ನೆಲೆ ಸ್ವೀಟ್ಸ್‌ಗಳ ಗುಣಮಟ್ಟ ಪರಿಶೀಲನೆಗೆ ಆಹಾರ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.‌

ದಸರಾ, ದೀಪಾವಳಿ: ಸಿಹಿತಿಂಡಿಗಳು ಸುರಕ್ಷಿತವಾ? ಸ್ವೀಟ್ಸ್‌ಗಳ ಟೆಸ್ಟ್‌ಗೆ ಮುಂದಾದ ಆಹಾರ ಇಲಾಖೆ
ಸಿಹಿತಿಂಡಿಗಳು (ಸಾಂದರ್ಭಿಕ ಚಿತ್ರ)Image Credit source: Getty Images
Vinay Kashappanavar
| Edited By: |

Updated on: Sep 26, 2024 | 8:09 AM

Share

ಬೆಂಗಳೂರು, ಸೆಪ್ಟೆಂಬರ್ 26: ಆಹಾರ ಇಲಾಖೆಯಿಂದ ಈಗಾಗಲೇ ರಾಜ್ಯದಾದ್ಯಂತ ಆಹಾರ ವಸ್ತುಗಳ ಗಣಮಟ್ಟದ ಪರೀಕ್ಷೆ ಮಾಡಿ ಅನೇಕ ಫುಡ್‌ಗಳಲ್ಲಿ ಕಲಬೆರಕೆ ಪತ್ತೆಯಾಗಿದ್ದರಿಂದ ಅವುಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಇದೀಗ ಸಿಹಿ ತಿಂಡಿಗಳ ಸರದಿ. ಯಾಕೆಂದರೆ, ದಸರಾ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜನ ಹೆಚ್ಚು ಸ್ವೀಟ್ಸ್‌ಗಳನ್ನು ಖರೀದಿ ಮಾಡುತ್ತಾರೆ. ಆದರೆ ಅನೇಕ‌ ಸ್ವೀಟ್ಸ್‌ಗಳಲ್ಲಿ ಕಲರ್ ಬಳಕೆ ಹಾಗೂ ಅದಕ್ಕೆ ಸೇರಿಸುವ ಪದಾರ್ಥಗಳ ಗುಣಮಟ್ಟದ ಬಗ್ಗೆ ಅನುಮಾನ ಮೂಡಿದೆ. ಹೀಗಾಗಿ ಆಹಾರ ಸುರಕ್ಷತಾ ಇಲಾಖೆ ಎಲ್ಲಾ ಬ್ರಾಂಡ್‌ಗಳ ಸ್ವೀಟ್ಸ್‌ಗಳನ್ನ ಪರೀಕ್ಷೆ ಮಾಡಲು ಮುಂದಾಗಿದೆ. ಇದರಿಂದಾಗಿ ಸಿಹಿಯಾಗಿ, ರುಚಿಯಾಗಿ ಸಿಗುವ ಸ್ವೀಟ್ಸ್‌ಗಳಲ್ಲಿ ಆರೋಗ್ಯಕ್ಕೆ ಕಹಿ ಎನಿಸುವ ಅಂಶಗಳಿದೆಯಾ ಎಂಬುದು ತಿಳಿಯಲಿದೆ.‌

ಇದರ ಜೊತೆಗೆ ಬೇಕರಿ ತಿಂಡಿಗಳ ಮೇಲೂ ಇಲಾಖೆ ನಿಗಾವಹಿಸಲು ಮುಂದಾಗಿದೆ. ಕಳಪೆ ಮತ್ತು ಕಲಬೆರಕೆ ತುಪ್ಪದಿಂದ ತಯಾರಾಗುವ ಸಿಹಿಯ ಮೇಲೂ ನಿರ್ಬಂಧ ಹೇರಲು ಸಿದ್ಧತೆ ಮಾಡಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಮತ್ತು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಆಹಾರ ಇಲಾಖೆ ಜನರ ಆರೋಗ್ಯದ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸದ್ಯ ಸ್ವೀಟ್ಸ್‌ಗಳ ಟೆಸ್ಟ್ ಮಾಡಲು ಮುಂದಾಗಿದ್ದು, ವರದಿಗಾಗಿ ಅಧಿಕಾರಿಗಳು ಕಾಯಲಿದ್ದಾರೆ. ವರದಿ ಕೈ ಸೇರಿದ ಬಳಿಕ ಇದು ಸುರಕ್ಷಿತವಾ ಅಥವಾ ಅಲ್ಲವೇ ಎಂಬುದು ತಿಳಿಯಲಿದ್ದು, ನಂತರ ಇಲಾಖೆ ಕ್ರಮ ಕೈಗೊಳ್ಳಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೆಜೆ ಈರುಳ್ಳಿಗೆ ಕೇವಲ 35 ರೂ: ಕೇಂದ್ರ ಸರ್ಕಾರ ಯೋಜನೆಯಿಂದ ಗ್ರಾಹಕರು ಫುಲ್ ಖುಷ್

ರಾಜ್ಯದಲ್ಲಿ ಈಗಾಗಲೇ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಮತ್ತು ರಾಸಾಯನಿಕ ಬೆರೆಸುವುದನ್ನು ನಿಷೇಧಿಸಲಾಗಿದೆ. ಕೃತಕ ಬಣ್ಣ ಹಾಕಿದ ಬಾಂಬೆ ಮಿಠಾಯಿಯನ್ನು ಕೂಡ ನಿಷೇಧಿಸಲಾಗಿದೆ. ರಾಜ್ಯದ ಹೋಟೆಲ್​​ಗಳಲ್ಲಿ ನೀಡುವ ಆಹಾರದ ಗುಣಮಟ್ಟಗಳ ಪರೀಕ್ಷೆಯನ್ನು ಕೂಡ ಆಹಾರ ಇಲಾಖೆ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು