AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?

ದಸರಾ ಮಹೋತ್ಸವ ಆರಂಭವಾಗಿದ್ದು, ಅಕ್ಟೋಬರ್ 3ರಿಂದ 20 ರ ವರೆಗೆ ಕರ್ನಾಟಕದಾದ್ಯಂತ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಮಧ್ಯೆ, ದಸರಾ ರಜೆ ಸಂಬಂಧ ಖಾಸಗಿ ಶಾಲೆಗಳು ಸರ್ಕಾರದ ಕ್ಯಾಲೆಂಡರ್ ಮತ್ತು ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳಿಗೆ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟನೆ ನೀಡಿದೆ.

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?
ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?
ಗಣಪತಿ ಶರ್ಮಾ
|

Updated on: Oct 04, 2024 | 10:50 AM

Share

ಬೆಂಗಳೂರು, ಅಕ್ಟೋಬರ್ 4: ರಾಜ್ಯದಾದ್ಯಂತ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆಯ ಸಂಭ್ರಮವಾದರೆ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸಂತಸ ಇಲ್ಲ. ಇದಕ್ಕೆ ಕಾರಣ ಖಾಸಗಿ ಮತ್ತು ಅನುದಾನಿತ ಶಾಲೆಗಳು ರಜೆಯಲ್ಲಿ ಕಡಿತ ಮಾಡುತ್ತಿರುವುದು. ಈ ಕುರಿತು ಕೇಳಿಬಂದಿರುವ ಆರೋಪಗಳಿಗೆ ಇದೀಗ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟೀಕರಣ ನೀಡಿದೆ.

ದಸರಾ ರಜೆಗೆ ಸಂಬಂಧಿಸಿದಂತೆ ಕೆಲವು ಖಾಸಗಿ ಶಾಲೆಗಳು ಸರ್ಕಾರಿ ಶೈಕ್ಷಣಿಕ ಕ್ಯಾಲೆಂಡರ್‌ಗೆ ಬದ್ಧವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್, ರಜೆಯನ್ನು ನಿರ್ಧರಿಸುವ ವಿವೇಚನಾ ಅಧಿಕಾರವನ್ನು ಖಾಸಗಿ ಶಾಲೆಗಳು ಹೊಂದಿವೆ ಎಂದಿದೆ.

ಕ್ರಿಸ್‌ಮಸ್ ನಿಮಿತ್ತ ಡಿಸೆಂಬರ್‌ನಲ್ಲಿ ಮತ್ತೆ ರಜೆ ಘೋಷಿಸಬೇಕಾಗಿರುವುದರಿಂದ ಖಾಸಗಿ ಶಾಲೆಗಳು ದಸರಾ ರಜೆಯನ್ನು ಕಡಿತಗೊಳಿಸಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರಿಸ್‌ಮಸ್ ಸಮಯದಲ್ಲಿ ನಾವು ಖಾಸಗಿ ಶಾಲೆಗಳಿಗೆ ಕನಿಷ್ಠ ಒಂದು ವಾರ ರಜೆ ಘೋಷಿಸಬೇಕು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಕ್ರಿಸ್‌ಮಸ್ ಸಮಯದಲ್ಲಿ ರಜೆ ನೀಡುವುದಿಲ್ಲ. ಈ ಕಾರಣದಿಂದ ನಾವು ದಸರಾ ರಜೆಯಲ್ಲಿ ಕಡಿತ ಮಾಡುತ್ತೇವೆ. ಇದು ನಮ್ಮ ವಿವೇಚನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

ದಸರಾ ರಜೆಯನ್ನು ಮೊಟಕುಗೊಳಿಸಿದ ಖಾಸಗಿ ಶಾಲೆಗಳ ನಿರ್ಧಾರವನ್ನು ಪ್ರಶ್ನಿಸಿ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವುದಾಗಿ ಅಸೋಸಿಯೇಷನ್ ​​ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!