ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?

ದಸರಾ ಮಹೋತ್ಸವ ಆರಂಭವಾಗಿದ್ದು, ಅಕ್ಟೋಬರ್ 3ರಿಂದ 20 ರ ವರೆಗೆ ಕರ್ನಾಟಕದಾದ್ಯಂತ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಮಧ್ಯೆ, ದಸರಾ ರಜೆ ಸಂಬಂಧ ಖಾಸಗಿ ಶಾಲೆಗಳು ಸರ್ಕಾರದ ಕ್ಯಾಲೆಂಡರ್ ಮತ್ತು ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳಿಗೆ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟನೆ ನೀಡಿದೆ.

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?
ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?
Follow us
|

Updated on: Oct 04, 2024 | 10:50 AM

ಬೆಂಗಳೂರು, ಅಕ್ಟೋಬರ್ 4: ರಾಜ್ಯದಾದ್ಯಂತ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆಯ ಸಂಭ್ರಮವಾದರೆ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸಂತಸ ಇಲ್ಲ. ಇದಕ್ಕೆ ಕಾರಣ ಖಾಸಗಿ ಮತ್ತು ಅನುದಾನಿತ ಶಾಲೆಗಳು ರಜೆಯಲ್ಲಿ ಕಡಿತ ಮಾಡುತ್ತಿರುವುದು. ಈ ಕುರಿತು ಕೇಳಿಬಂದಿರುವ ಆರೋಪಗಳಿಗೆ ಇದೀಗ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟೀಕರಣ ನೀಡಿದೆ.

ದಸರಾ ರಜೆಗೆ ಸಂಬಂಧಿಸಿದಂತೆ ಕೆಲವು ಖಾಸಗಿ ಶಾಲೆಗಳು ಸರ್ಕಾರಿ ಶೈಕ್ಷಣಿಕ ಕ್ಯಾಲೆಂಡರ್‌ಗೆ ಬದ್ಧವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್, ರಜೆಯನ್ನು ನಿರ್ಧರಿಸುವ ವಿವೇಚನಾ ಅಧಿಕಾರವನ್ನು ಖಾಸಗಿ ಶಾಲೆಗಳು ಹೊಂದಿವೆ ಎಂದಿದೆ.

ಕ್ರಿಸ್‌ಮಸ್ ನಿಮಿತ್ತ ಡಿಸೆಂಬರ್‌ನಲ್ಲಿ ಮತ್ತೆ ರಜೆ ಘೋಷಿಸಬೇಕಾಗಿರುವುದರಿಂದ ಖಾಸಗಿ ಶಾಲೆಗಳು ದಸರಾ ರಜೆಯನ್ನು ಕಡಿತಗೊಳಿಸಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರಿಸ್‌ಮಸ್ ಸಮಯದಲ್ಲಿ ನಾವು ಖಾಸಗಿ ಶಾಲೆಗಳಿಗೆ ಕನಿಷ್ಠ ಒಂದು ವಾರ ರಜೆ ಘೋಷಿಸಬೇಕು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಕ್ರಿಸ್‌ಮಸ್ ಸಮಯದಲ್ಲಿ ರಜೆ ನೀಡುವುದಿಲ್ಲ. ಈ ಕಾರಣದಿಂದ ನಾವು ದಸರಾ ರಜೆಯಲ್ಲಿ ಕಡಿತ ಮಾಡುತ್ತೇವೆ. ಇದು ನಮ್ಮ ವಿವೇಚನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

ದಸರಾ ರಜೆಯನ್ನು ಮೊಟಕುಗೊಳಿಸಿದ ಖಾಸಗಿ ಶಾಲೆಗಳ ನಿರ್ಧಾರವನ್ನು ಪ್ರಶ್ನಿಸಿ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವುದಾಗಿ ಅಸೋಸಿಯೇಷನ್ ​​ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ