AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?

ದಸರಾ ಮಹೋತ್ಸವ ಆರಂಭವಾಗಿದ್ದು, ಅಕ್ಟೋಬರ್ 3ರಿಂದ 20 ರ ವರೆಗೆ ಕರ್ನಾಟಕದಾದ್ಯಂತ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಮಧ್ಯೆ, ದಸರಾ ರಜೆ ಸಂಬಂಧ ಖಾಸಗಿ ಶಾಲೆಗಳು ಸರ್ಕಾರದ ಕ್ಯಾಲೆಂಡರ್ ಮತ್ತು ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳಿಗೆ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟನೆ ನೀಡಿದೆ.

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?
ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?
Ganapathi Sharma
|

Updated on: Oct 04, 2024 | 10:50 AM

Share

ಬೆಂಗಳೂರು, ಅಕ್ಟೋಬರ್ 4: ರಾಜ್ಯದಾದ್ಯಂತ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆಯ ಸಂಭ್ರಮವಾದರೆ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸಂತಸ ಇಲ್ಲ. ಇದಕ್ಕೆ ಕಾರಣ ಖಾಸಗಿ ಮತ್ತು ಅನುದಾನಿತ ಶಾಲೆಗಳು ರಜೆಯಲ್ಲಿ ಕಡಿತ ಮಾಡುತ್ತಿರುವುದು. ಈ ಕುರಿತು ಕೇಳಿಬಂದಿರುವ ಆರೋಪಗಳಿಗೆ ಇದೀಗ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟೀಕರಣ ನೀಡಿದೆ.

ದಸರಾ ರಜೆಗೆ ಸಂಬಂಧಿಸಿದಂತೆ ಕೆಲವು ಖಾಸಗಿ ಶಾಲೆಗಳು ಸರ್ಕಾರಿ ಶೈಕ್ಷಣಿಕ ಕ್ಯಾಲೆಂಡರ್‌ಗೆ ಬದ್ಧವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್, ರಜೆಯನ್ನು ನಿರ್ಧರಿಸುವ ವಿವೇಚನಾ ಅಧಿಕಾರವನ್ನು ಖಾಸಗಿ ಶಾಲೆಗಳು ಹೊಂದಿವೆ ಎಂದಿದೆ.

ಕ್ರಿಸ್‌ಮಸ್ ನಿಮಿತ್ತ ಡಿಸೆಂಬರ್‌ನಲ್ಲಿ ಮತ್ತೆ ರಜೆ ಘೋಷಿಸಬೇಕಾಗಿರುವುದರಿಂದ ಖಾಸಗಿ ಶಾಲೆಗಳು ದಸರಾ ರಜೆಯನ್ನು ಕಡಿತಗೊಳಿಸಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರಿಸ್‌ಮಸ್ ಸಮಯದಲ್ಲಿ ನಾವು ಖಾಸಗಿ ಶಾಲೆಗಳಿಗೆ ಕನಿಷ್ಠ ಒಂದು ವಾರ ರಜೆ ಘೋಷಿಸಬೇಕು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಕ್ರಿಸ್‌ಮಸ್ ಸಮಯದಲ್ಲಿ ರಜೆ ನೀಡುವುದಿಲ್ಲ. ಈ ಕಾರಣದಿಂದ ನಾವು ದಸರಾ ರಜೆಯಲ್ಲಿ ಕಡಿತ ಮಾಡುತ್ತೇವೆ. ಇದು ನಮ್ಮ ವಿವೇಚನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

ದಸರಾ ರಜೆಯನ್ನು ಮೊಟಕುಗೊಳಿಸಿದ ಖಾಸಗಿ ಶಾಲೆಗಳ ನಿರ್ಧಾರವನ್ನು ಪ್ರಶ್ನಿಸಿ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವುದಾಗಿ ಅಸೋಸಿಯೇಷನ್ ​​ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!