AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?

ದಸರಾ ಮಹೋತ್ಸವ ಆರಂಭವಾಗಿದ್ದು, ಅಕ್ಟೋಬರ್ 3ರಿಂದ 20 ರ ವರೆಗೆ ಕರ್ನಾಟಕದಾದ್ಯಂತ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಮಧ್ಯೆ, ದಸರಾ ರಜೆ ಸಂಬಂಧ ಖಾಸಗಿ ಶಾಲೆಗಳು ಸರ್ಕಾರದ ಕ್ಯಾಲೆಂಡರ್ ಮತ್ತು ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳಿಗೆ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟನೆ ನೀಡಿದೆ.

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?
ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?
Follow us
Ganapathi Sharma
|

Updated on: Oct 04, 2024 | 10:50 AM

ಬೆಂಗಳೂರು, ಅಕ್ಟೋಬರ್ 4: ರಾಜ್ಯದಾದ್ಯಂತ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆಯ ಸಂಭ್ರಮವಾದರೆ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸಂತಸ ಇಲ್ಲ. ಇದಕ್ಕೆ ಕಾರಣ ಖಾಸಗಿ ಮತ್ತು ಅನುದಾನಿತ ಶಾಲೆಗಳು ರಜೆಯಲ್ಲಿ ಕಡಿತ ಮಾಡುತ್ತಿರುವುದು. ಈ ಕುರಿತು ಕೇಳಿಬಂದಿರುವ ಆರೋಪಗಳಿಗೆ ಇದೀಗ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟೀಕರಣ ನೀಡಿದೆ.

ದಸರಾ ರಜೆಗೆ ಸಂಬಂಧಿಸಿದಂತೆ ಕೆಲವು ಖಾಸಗಿ ಶಾಲೆಗಳು ಸರ್ಕಾರಿ ಶೈಕ್ಷಣಿಕ ಕ್ಯಾಲೆಂಡರ್‌ಗೆ ಬದ್ಧವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್, ರಜೆಯನ್ನು ನಿರ್ಧರಿಸುವ ವಿವೇಚನಾ ಅಧಿಕಾರವನ್ನು ಖಾಸಗಿ ಶಾಲೆಗಳು ಹೊಂದಿವೆ ಎಂದಿದೆ.

ಕ್ರಿಸ್‌ಮಸ್ ನಿಮಿತ್ತ ಡಿಸೆಂಬರ್‌ನಲ್ಲಿ ಮತ್ತೆ ರಜೆ ಘೋಷಿಸಬೇಕಾಗಿರುವುದರಿಂದ ಖಾಸಗಿ ಶಾಲೆಗಳು ದಸರಾ ರಜೆಯನ್ನು ಕಡಿತಗೊಳಿಸಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರಿಸ್‌ಮಸ್ ಸಮಯದಲ್ಲಿ ನಾವು ಖಾಸಗಿ ಶಾಲೆಗಳಿಗೆ ಕನಿಷ್ಠ ಒಂದು ವಾರ ರಜೆ ಘೋಷಿಸಬೇಕು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಕ್ರಿಸ್‌ಮಸ್ ಸಮಯದಲ್ಲಿ ರಜೆ ನೀಡುವುದಿಲ್ಲ. ಈ ಕಾರಣದಿಂದ ನಾವು ದಸರಾ ರಜೆಯಲ್ಲಿ ಕಡಿತ ಮಾಡುತ್ತೇವೆ. ಇದು ನಮ್ಮ ವಿವೇಚನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

ದಸರಾ ರಜೆಯನ್ನು ಮೊಟಕುಗೊಳಿಸಿದ ಖಾಸಗಿ ಶಾಲೆಗಳ ನಿರ್ಧಾರವನ್ನು ಪ್ರಶ್ನಿಸಿ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವುದಾಗಿ ಅಸೋಸಿಯೇಷನ್ ​​ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್