AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ದರ್ಬಾರ್: ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್​ಗಳು, ಕೆಎಸ್​ಆರ್​ಟಿಸಿ

Bus Ticket Price Hike; ಹಬ್ಬಗಳ ಸೀಸನ್, ಸಾಲು ರಜೆಗಳು ಬಂದಾಗ ಪ್ರತಿ ಬಾರಿಯೂ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವ ಖಾಸಗಿ ಬಸ್ಸುಗಳು ದಸರಾದಲ್ಲಿಯೂ ದರ್ಬಾರ್ ಆರಂಭಿಸಿದೆ. ಇವುಗಳ ಜೊತೆಗೆ ಕೆಎಸ್ಆರ್ಟಿಸಿ ಬಸ್ಸುಗಳು ಕೂಡ ಏಕಾಏಕಿ ಟಿಕೆಟ್ ದರ ಏರಿಕೆ ಮಾಡಿದ್ದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದಸರಾ ದರ್ಬಾರ್: ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್​ಗಳು, ಕೆಎಸ್​ಆರ್​ಟಿಸಿ
ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್​ಗಳು, ಕೆಎಸ್​ಆರ್​ಟಿಸಿ
ಕಿರಣ್​ ಸೂರ್ಯ
| Edited By: |

Updated on: Sep 30, 2025 | 8:13 AM

Share

ಬೆಂಗಳೂರು, ಸೆಪ್ಟೆಂಬರ್ 30: ಬುಧವಾರ ಆಯುಧಪೂಜೆ, ಗುರುವಾರ ವಿಜಯದಶಮಿ (Vijaya Dashami). ಶುಕ್ರವಾರ ಒಂದು ದಿನ ರಜೆ ಹಾಕಿದರೆ ಮತ್ತೆ ವಾರಾಂತ್ಯ. ಸಾಲು ಸಾಲು ರಜೆ ಬಂದಿದ್ದು, ಜನರೆಲ್ಲ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಅದರಲ್ಲೂ, ದಸರಾ ಕಣ್ತುಂಬಿಕೊಳ್ಳಲು ಬೆಂಗಳೂರಿನಿಂದ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಆದರೆ, ಕೆಎಸ್​​ಆರ್​ಟಿಸಿ (KSRTC) ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು-ಮೈಸೂರು ಬಸ್​ ಟಿಕೆಟ್​ ದರ (Bus Ticket Price) ಹೆಚ್ಚಳವಾಗಿದೆ.

ಬೆಂಗಳೂರು ಮೈಸೂರು ಬಸ್ ಟಿಕೆಟ್ ದರ ಹೆಚ್ಚಳ

ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಇದ್ದ ಬಸ್​ ಟಿಕೆಟ್​ ದರದಲ್ಲಿ, 20 ರೂ. ಏರಿಕೆ ಮಾಡಲಾಗಿದೆ. ಕೆಎಸ್ಆರ್​ಟಿಸಿ ತಡೆರಹಿತ ಬಸ್ ಟಿಕೆಟ್​​ ದರ 210 ರೂ. ಇದ್ದದ್ದು ಇದೀಗ 230 ರೂ.ಗೆ ಏರಿಕೆ ಆಗಿದೆ. ಸಾಮಾನ್ಯ ಬಸ್ ಟಿಕೆಟ್ ದರ 161 ರೂ.ಗಳಿಂದ 180 ರೂ.ಗೆ ಏರಿಕೆ ಆಗಿದೆ. ದಸರಾ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ 20 ರೂಪಾಯಿ ದರ ಏರಿಕೆ ಮಾಡಿದೆ.

ಕೆಎಸ್​​​ಆರ್​ಟಿಸಿ ಮಾತ್ರವಲ್ಲ, ಖಾಸಗಿ ಬಸ್​​ಗಳು ಕೂಡ ಹಬ್ಬವನ್ನೇ ನೆಪವಾಗಿ ಇಟ್ಟುಕೊಂಡು ಪ್ರಯಾಣ ದರ ಏರಿಕೆ ಮಾಡಿವೆ.

ಖಾಸಗಿ ಬಸ್​​​ ಬಸ್ ಟಿಕೆಟ್ ದರ ಏರಿಕೆ: ಯಾವ ಊರಿಗೆ ಎಷ್ಟು?

ಬೆಂಗಳೂರಿಂದ ಹುಬ್ಬಳ್ಳಿಗೆ ಸಾಮಾನ್ಯವಾಗಿ ಖಾಸಗಿ ಬಸ್​ ಪ್ರಯಾಣದರ 1000 ರೂಪಾಯಿ ಇರುತ್ತಿತ್ತು. ಆದೀಗ, 2039 ರೂಪಾಯಿ ಆಗಿದೆ. ಇನ್ನು, ದಾವಣಗೆರೆಗೆ ತೆರಳಲು 750 ರೂಪಾಯಿ ಟಿಕೆಟ್ ದರ ಇತ್ತು. ಈಗ 1489 ರೂಪಾಯಿಗೆ ಹೆಚ್ಚಳ ಮಾಡಿದ್ದಾರೆ. ಬೆಂಗಳೂರಿಂದ ಬೆಳಗಾವಿಗೆ 1200 ರೂಪಾಯಿ ಇರುತ್ತಿದ್ದ ಬಸ್​ ಟಿಕೆಟ್ ದರ ಈಗ 2677 ರೂಪಾಯಿ ತನಕ ಏರಿಕೆ ಆಗಿದೆ. ಬೆಂಗಳೂರಿಂದ ಮಂಗಳೂರಿಗೆ ಸಾಮಾನ್ಯ ದಿನಗಳಲ್ಲಿ 1200 ರೂಪಾಯಿ ಇರುತ್ತಿತ್ತು. ಈಗ, 1800 ರೂಪಾಯಿ ಆಗಿದೆ. ಇನ್ನು, ಬೆಂಗಳೂರಿಂದ ಕಲಬುರಗಿಗೆ 1100 ರೂ. ಇದ್ದ ಬಸ್​ ಟಿಕೆಟ್​ ದರ ಈಗ 2299 ರೂಪಾಯಿ ಆಗಿದೆ.

ಇದನ್ನೂ ಓದಿ: ಬರೀ 150 ರೂಪಾಯಿನಲ್ಲಿ ಬಸ್ ಪೂಜೆ ಮಾಡಕ್ಕಾಗುತ್ತಾ? ಆಯುಧ ಪೂಜೆಗೆ ಕೆಎಸ್​​ಆರ್​ ಟಿಸಿ ಕಂಜೂಸ್

ಬಸ್ ಪ್ರಯಾಣ ದರ ಏರಿಕೆಗೆ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ವಿಪಕ್ಷ ನಾಯಕ ಆರ್.ಅಶೋಕ್ ಬಸ್ ಟಿಕೆಟ್ ದರ ಏರಿಕೆಗೆ ಧರ್ಮದ ಬಣ್ಣ ಹಚ್ಚಿದ್ದಾರೆ. ಚಾಮುಂಡಿಬೆಟ್ಟ ಹಿಂದೂಗಳದ್ದು ಅಲ್ಲ ಎಂದಿದ್ದರು. ಬೆಲೆ ಏರಿಕೆ ಮಾಡಿ ಮೈಸೂರಿಗೆ ಯಾರೂ ಹೋಗಬಾರದು ಎಂದು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಒಟ್ಟಿನಲ್ಲಿ, ಹಬ್ಬದ ಖುಷಿಯಲ್ಲಿದ್ದವರಿಗೆ ಪ್ರಯಾಣ ದರ ಏರಿಕೆ ಶಾಕ್‌ ಕೊಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ