AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ದರ್ಬಾರ್: ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್​ಗಳು, ಕೆಎಸ್​ಆರ್​ಟಿಸಿ

Bus Ticket Price Hike; ಹಬ್ಬಗಳ ಸೀಸನ್, ಸಾಲು ರಜೆಗಳು ಬಂದಾಗ ಪ್ರತಿ ಬಾರಿಯೂ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವ ಖಾಸಗಿ ಬಸ್ಸುಗಳು ದಸರಾದಲ್ಲಿಯೂ ದರ್ಬಾರ್ ಆರಂಭಿಸಿದೆ. ಇವುಗಳ ಜೊತೆಗೆ ಕೆಎಸ್ಆರ್ಟಿಸಿ ಬಸ್ಸುಗಳು ಕೂಡ ಏಕಾಏಕಿ ಟಿಕೆಟ್ ದರ ಏರಿಕೆ ಮಾಡಿದ್ದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದಸರಾ ದರ್ಬಾರ್: ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್​ಗಳು, ಕೆಎಸ್​ಆರ್​ಟಿಸಿ
ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್​ಗಳು, ಕೆಎಸ್​ಆರ್​ಟಿಸಿ
Kiran Surya
| Edited By: |

Updated on: Sep 30, 2025 | 8:13 AM

Share

ಬೆಂಗಳೂರು, ಸೆಪ್ಟೆಂಬರ್ 30: ಬುಧವಾರ ಆಯುಧಪೂಜೆ, ಗುರುವಾರ ವಿಜಯದಶಮಿ (Vijaya Dashami). ಶುಕ್ರವಾರ ಒಂದು ದಿನ ರಜೆ ಹಾಕಿದರೆ ಮತ್ತೆ ವಾರಾಂತ್ಯ. ಸಾಲು ಸಾಲು ರಜೆ ಬಂದಿದ್ದು, ಜನರೆಲ್ಲ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಅದರಲ್ಲೂ, ದಸರಾ ಕಣ್ತುಂಬಿಕೊಳ್ಳಲು ಬೆಂಗಳೂರಿನಿಂದ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಆದರೆ, ಕೆಎಸ್​​ಆರ್​ಟಿಸಿ (KSRTC) ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು-ಮೈಸೂರು ಬಸ್​ ಟಿಕೆಟ್​ ದರ (Bus Ticket Price) ಹೆಚ್ಚಳವಾಗಿದೆ.

ಬೆಂಗಳೂರು ಮೈಸೂರು ಬಸ್ ಟಿಕೆಟ್ ದರ ಹೆಚ್ಚಳ

ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಇದ್ದ ಬಸ್​ ಟಿಕೆಟ್​ ದರದಲ್ಲಿ, 20 ರೂ. ಏರಿಕೆ ಮಾಡಲಾಗಿದೆ. ಕೆಎಸ್ಆರ್​ಟಿಸಿ ತಡೆರಹಿತ ಬಸ್ ಟಿಕೆಟ್​​ ದರ 210 ರೂ. ಇದ್ದದ್ದು ಇದೀಗ 230 ರೂ.ಗೆ ಏರಿಕೆ ಆಗಿದೆ. ಸಾಮಾನ್ಯ ಬಸ್ ಟಿಕೆಟ್ ದರ 161 ರೂ.ಗಳಿಂದ 180 ರೂ.ಗೆ ಏರಿಕೆ ಆಗಿದೆ. ದಸರಾ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ 20 ರೂಪಾಯಿ ದರ ಏರಿಕೆ ಮಾಡಿದೆ.

ಕೆಎಸ್​​​ಆರ್​ಟಿಸಿ ಮಾತ್ರವಲ್ಲ, ಖಾಸಗಿ ಬಸ್​​ಗಳು ಕೂಡ ಹಬ್ಬವನ್ನೇ ನೆಪವಾಗಿ ಇಟ್ಟುಕೊಂಡು ಪ್ರಯಾಣ ದರ ಏರಿಕೆ ಮಾಡಿವೆ.

ಖಾಸಗಿ ಬಸ್​​​ ಬಸ್ ಟಿಕೆಟ್ ದರ ಏರಿಕೆ: ಯಾವ ಊರಿಗೆ ಎಷ್ಟು?

ಬೆಂಗಳೂರಿಂದ ಹುಬ್ಬಳ್ಳಿಗೆ ಸಾಮಾನ್ಯವಾಗಿ ಖಾಸಗಿ ಬಸ್​ ಪ್ರಯಾಣದರ 1000 ರೂಪಾಯಿ ಇರುತ್ತಿತ್ತು. ಆದೀಗ, 2039 ರೂಪಾಯಿ ಆಗಿದೆ. ಇನ್ನು, ದಾವಣಗೆರೆಗೆ ತೆರಳಲು 750 ರೂಪಾಯಿ ಟಿಕೆಟ್ ದರ ಇತ್ತು. ಈಗ 1489 ರೂಪಾಯಿಗೆ ಹೆಚ್ಚಳ ಮಾಡಿದ್ದಾರೆ. ಬೆಂಗಳೂರಿಂದ ಬೆಳಗಾವಿಗೆ 1200 ರೂಪಾಯಿ ಇರುತ್ತಿದ್ದ ಬಸ್​ ಟಿಕೆಟ್ ದರ ಈಗ 2677 ರೂಪಾಯಿ ತನಕ ಏರಿಕೆ ಆಗಿದೆ. ಬೆಂಗಳೂರಿಂದ ಮಂಗಳೂರಿಗೆ ಸಾಮಾನ್ಯ ದಿನಗಳಲ್ಲಿ 1200 ರೂಪಾಯಿ ಇರುತ್ತಿತ್ತು. ಈಗ, 1800 ರೂಪಾಯಿ ಆಗಿದೆ. ಇನ್ನು, ಬೆಂಗಳೂರಿಂದ ಕಲಬುರಗಿಗೆ 1100 ರೂ. ಇದ್ದ ಬಸ್​ ಟಿಕೆಟ್​ ದರ ಈಗ 2299 ರೂಪಾಯಿ ಆಗಿದೆ.

ಇದನ್ನೂ ಓದಿ: ಬರೀ 150 ರೂಪಾಯಿನಲ್ಲಿ ಬಸ್ ಪೂಜೆ ಮಾಡಕ್ಕಾಗುತ್ತಾ? ಆಯುಧ ಪೂಜೆಗೆ ಕೆಎಸ್​​ಆರ್​ ಟಿಸಿ ಕಂಜೂಸ್

ಬಸ್ ಪ್ರಯಾಣ ದರ ಏರಿಕೆಗೆ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ವಿಪಕ್ಷ ನಾಯಕ ಆರ್.ಅಶೋಕ್ ಬಸ್ ಟಿಕೆಟ್ ದರ ಏರಿಕೆಗೆ ಧರ್ಮದ ಬಣ್ಣ ಹಚ್ಚಿದ್ದಾರೆ. ಚಾಮುಂಡಿಬೆಟ್ಟ ಹಿಂದೂಗಳದ್ದು ಅಲ್ಲ ಎಂದಿದ್ದರು. ಬೆಲೆ ಏರಿಕೆ ಮಾಡಿ ಮೈಸೂರಿಗೆ ಯಾರೂ ಹೋಗಬಾರದು ಎಂದು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಒಟ್ಟಿನಲ್ಲಿ, ಹಬ್ಬದ ಖುಷಿಯಲ್ಲಿದ್ದವರಿಗೆ ಪ್ರಯಾಣ ದರ ಏರಿಕೆ ಶಾಕ್‌ ಕೊಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ