AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಪ್ರಯುಕ್ತ ಕರ್ನಾಟಕದ ವಿವಿಧೆಡೆಗೆ ವಿಶೇಷ ರೈಲುಗಳು: ಟ್ರಿಪ್ ವಿವರ, ವೇಳಾಪಟ್ಟಿ ಇಲ್ಲಿದೆ

Dasra Speial Trains: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆ ಹುಬ್ಬಳ್ಳಿ-ಬೆಂಗಳೂರು, ಬೆಂಗಳೂರು-ವಿಜಯಪುರ ಮತ್ತು ಬೆಂಗಳೂರು-ಬೆಳಗಾವಿ ಮಾರ್ಗಗಳಲ್ಲಿ ವಿಶೇಷ ರೈಲುಗಳನ್ನು ಘೋಷಿಸಿದೆ. ಈ ರೈಲುಗಳ ವೇಳಾಪಟ್ಟಿ ಮತ್ತು ನಿಲುಗಡೆಗಳ ಮಾಹಿತಿ ಇಲ್ಲಿದೆ. ಐಆರ್​ಟಿಸಿ ಆ್ಯಪ್ ಅಥವಾ ವೆಬ್​ಸೈಟ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳುವುದು ಉತ್ತಮ ಎಂದು ರೈಲ್ವೆ ತಿಳಿಸಿದೆ.

ದಸರಾ ಪ್ರಯುಕ್ತ ಕರ್ನಾಟಕದ ವಿವಿಧೆಡೆಗೆ ವಿಶೇಷ ರೈಲುಗಳು: ಟ್ರಿಪ್ ವಿವರ, ವೇಳಾಪಟ್ಟಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 09, 2025 | 7:10 AM

Share

ಹುಬ್ಬಳ್ಳಿ, ಸೆಪ್ಟೆಂಬರ್ 9: ದಸರಾ (Dasara) ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸುವುದಕ್ಕಾಗಿ ನೈಋತ್ಯ ರೈಲ್ವೆಯು (South Western Railway) ಕರ್ನಾಟಕದ (Karnataka) ವಿವಿಧ ನಿಲ್ದಾಣಗಳಿಂದ ವಿಶೇಷ ರೈಲುಗಳನ್ನು ಘೋಷಿಸಿದೆ. ಹುಬ್ಬಳ್ಳಿ-ಬೆಂಗಳೂರು, ಬೆಂಗಳೂರು-ವಿಜಯಪುರ, ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ರೈಲುಗಳು ಸಂಚರಿಸಲಿವೆ. ವಿಶೇಷ ರೈಲುಗಳ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರಗಳು ಇಲ್ಲಿವೆ.

ಹುಬ್ಬಳ್ಳಿ – ಯಶವಂತಪುರ ವಿಶೇಷ ರೈಲು

ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30 ರಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.

ಯಶವಂತಪುರ-ವಿಜಯಪುರ ವಿಶೇಷ ರೈಲು

ರೈಲು ಸಂಖ್ಯೆ 06277/06278 ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30 ರಂದು ರಾತ್ರಿ 09:50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 09:30ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06278 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 1 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 06:40ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ಎಸ್​​ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ರೈಲಿನ ವಿವರ

ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್

ರೈಲು ಸಂಖ್ಯೆ 06279/06280 ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 2 ರಂದು ಸಂಜೆ 07:40ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 07:45ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06280 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 3 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 08:10 ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ (ಸಂಖ್ಯೆ 06277/06278 ಮತ್ತು 06279/06280) ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಎಸ್‌ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಇದನ್ನೂ ಓದಿ: ಹುಬ್ಬಳ್ಳಿ ಜೋಧಪುರ್‌ ನಡುವೆ ನೇರ ರೈಲು: ಟಿಕೆಟ್ ಬುಕಿಂಗ್ ಶುರು, ವೇಳಾಪಟ್ಟಿ ಇಲ್ಲಿದೆ

ಎಲ್ಲಾ ರೈಲುಗಳು ಒಂದು ಪ್ರಥಮ ದರ್ಜೆ ಕಮ್ ಸೆಕೆಂಡ್ ಎಸಿ ಕೋಚ್, ಒಂದು ಎಸಿ 3-ಟೈರ್, ಎರಡು ಎಸಿ 2-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎಸ್‌ಎಲ್‌ಆರ್‌ಡಿ ಬೋಗಿಗಳನ್ನು ಒಳಗೊಂಡಂತೆ ಒಟ್ಟು 21 ಬೋಗಿಗಳನ್ನು ಹೊಂದಿರುತ್ತವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ