AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಲ್ಲಿ ದತ್ತಜಯಂತಿ ಸಂಭ್ರಮ, ಕೇಸರಿನಾಡಾಗಿ ಕಂಗೊಳಿಸಿದ ಕಾಫಿನಾಡು !

ಡಿಸೆಂಬರ್ 27 ಅನುಸೂಯ ಜಯಂತಿ, 28 ಸಾಂಕೇತಿಕ ಶೋಭಾಯಾತ್ರೆ ಹಾಗೂ 29 ರಂದು ದತ್ತಪೀಠದಲ್ಲಿ ದತ್ತಜಯಂತಿ ಹಾಗೂ ದತ್ತಪಾದುಕೆ ದರ್ಶನ ನಡೆಯಲಿದೆ. ಹಾಗಾಗಿ, ದತ್ತಾತ್ರೇಯನ ಭಕ್ತರು ಇಡೀ ಚಿಕ್ಕಮಗಳೂರು ನಗರವನ್ನು ಕೇಸರಿಮಯವಾಗಿಸಿ, ನಗರದ ಪ್ರಮುಖ ಬೀದಿಗಳನ್ನು ಸುಂದರವಾಗಿಸಿದ್ದಾರೆ.

ಚಿಕ್ಕಮಗಳೂರಲ್ಲಿ ದತ್ತಜಯಂತಿ ಸಂಭ್ರಮ, ಕೇಸರಿನಾಡಾಗಿ ಕಂಗೊಳಿಸಿದ ಕಾಫಿನಾಡು !
ಕೇಸರಿಮಯವಾದ ಚಿಕ್ಕಮಗಳೂರು
sandhya thejappa
| Updated By: Lakshmi Hegde|

Updated on: Dec 25, 2020 | 11:52 AM

Share

ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆಯಂದೇ ಖ್ಯಾತಿಯಾಗಿರೋ ಜಿಲ್ಲೆಯ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ದತ್ತಜಯಂತಿಯ ಸಂಭ್ರಮ ಮೇಳೈಸಿರುವುದರಿಂದ ಸಂಘ ಪರಿವಾರದ ಕಾರ್ಯಕರ್ತರು ಇಡೀ ನಗರವನ್ನು ಕೇಸರಿಮಯವಾಗಿಸಿದ್ದಾರೆ. ಈಗಾಗಲೇ ದತ್ತ ಜಯಂತಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, ಡಿಸೆಂಬರ್ 19ರಂದೇ ಮಾಲೆ ಧರಿಸಿರೋ ದತ್ತಭಕ್ತರು ವ್ರತದಲ್ಲಿದ್ದಾರೆ.

ಡಿಸೆಂಬರ್ 27 ಅನುಸೂಯ ಜಯಂತಿ, 28 ಸಾಂಕೇತಿಕ ಶೋಭಾಯಾತ್ರೆ ಹಾಗೂ 29 ರಂದು ದತ್ತಪೀಠದಲ್ಲಿ ದತ್ತಜಯಂತಿ ಹಾಗೂ ದತ್ತಪಾದುಕೆ ದರ್ಶನ ನಡೆಯಲಿದೆ. ಹಾಗಾಗಿ, ದತ್ತಾತ್ರೇಯನ ಭಕ್ತರು ಇಡೀ ಚಿಕ್ಕಮಗಳೂರು ನಗರವನ್ನು ಕೇಸರಿಮಯವಾಗಿಸಿ, ನಗರದ ಪ್ರಮುಖ ಬೀದಿಗಳನ್ನು ಸುಂದರವಾಗಿಸಿದ್ದಾರೆ.

ಮಹಿಳಾ ಸೆಲಬ್ರಿಟಿಸ್ ಡಿ.27ರಂದು ಅನುಸೂಯ ಪೂಜೆ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ಮಹಿಳೆಯರಿಂದ ನಗರದ ಬೋಳರಾಮೇಶ್ವರ ದೇವಸ್ಥಾನದಿಂದ ಕಾಮಧೇನು ಗಣಪತಿ ದೇವಸ್ಥಾನದವರೆಗೆ ಸಂಕೀರ್ತನಾ ಯಾತ್ರೆ ನಡೆಯಲಿದೆ. ಈ ಯಾತ್ರೆಯಲ್ಲಿ ಜಿಲ್ಲೆಯ ಪ್ರಸಿದ್ಧ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸೆಲಬ್ರಿಟಿಗಳು ಭಾಗವಹಿಸಲಿದ್ದಾರೆ.

ಡಿ.28ರಂದು ಮಧ್ಯಾಹ್ನ 2 ಘಂಟೆಗೆ ನಗರದ ರತ್ನಗಿರಿ ರಸ್ತೆಯಲ್ಲಿರುವ ಕಾಮಧೇನು ಗಣಪತಿ ದೇವಸ್ಥಾನದಿಂದ ಸಂಕೀರ್ತನಾ ಯಾತ್ರೆ ಆರಂಭಗೊಂಡು ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಆಜಾದ್ಪಾರ್ಕ್ ವೃತ್ತದಲ್ಲಿ ಮಹಾ ಆರತಿಯ ಕಾರ್ಯಕ್ರಮ ಮೂಲಕ ಕೊನೆಗೊಳ್ಳಲಿದೆ.

ಡಿ.29ರಂದು ದತ್ತಭಕ್ತರು ಹಾಗೂ ಮಾಲಾಧಾರಿಗಳು ಹೊನ್ನಮ್ಮನಹಳ್ಳದಲ್ಲಿ ಸ್ನಾನ ಮಾಡಿ ಕಾಲ್ನಡಿಗೆಯಲ್ಲಿ ಭಜನೆಯೊಂದಿಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಬಳಿಕ ದತ್ತಪೀಠದಲ್ಲಿ ಗಣಪತಿ ಹೋಮ, ದತ್ತಹೋಮ, ಧನ್ವಂತರಿ ಹೋಮ ಕಾರ್ಯಕ್ರಮ ನಡೆಯಲಿವೆ.

ದತ್ತ ಜಯಂತಿ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಚಾಲನೆ; ದತ್ತ ಮಾಲೆ ಧಾರಣೆ..

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ