AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟು 12 ದಿನ ಕಳೆದರೂ ಶವ ನೀಡದೆ ತಕರಾರು.. ಆಸ್ಪತ್ರೆ ವಿರುದ್ಧ ಮಗಳ ಆಕ್ರೋಶ

ಮೇ 14ರಂದೇ ಕೊರೊನಾ ಸೋಂಕಿಗೆ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ ವಿಪರ್ಯಾಸವೆಂದರೆ ಇನ್ನೂ ಕೂಡ ಶವವನ್ನು ಕುಟುಂಬಸ್ಥರಿಗೆ ನೀಡಿಲ್ಲ. ₹1.67 ಲಕ್ಷ ಪಾವತಿಸಿ ಮೃತದೇಹ ಪಡೆಯುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕೊರೊನಾದಿಂದ ಮೃತಪಟ್ಟು 12 ದಿನ ಕಳೆದರೂ ಶವ ನೀಡದೆ ತಕರಾರು.. ಆಸ್ಪತ್ರೆ ವಿರುದ್ಧ ಮಗಳ ಆಕ್ರೋಶ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:May 26, 2021 | 1:10 PM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ ನೀಡಲು ಆಸ್ಪತ್ರೆ ಸಿಬ್ಬಂದಿ ತಕರಾರು ಮಾಡುತ್ತಿರುವ ಅಮಾನವೀಯ  ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಗ್ಯ ಇಲಾಖೆ ಆದೇಶಕ್ಕೆ ಖಾಸಗಿ ಆಸ್ಪತ್ರೆ ಡೋಂಟ್‌ ಕೇರ್ ರೀತಿ ವರ್ತಿಸುತ್ತಿದೆ.

ಮೇ 14ರಂದೇ ಕೊರೊನಾ ಸೋಂಕಿಗೆ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ ವಿಪರ್ಯಾಸವೆಂದರೆ ಇನ್ನೂ ಕೂಡ ಶವವನ್ನು ಕುಟುಂಬಸ್ಥರಿಗೆ ನೀಡಿಲ್ಲ. ₹1.67 ಲಕ್ಷ ಪಾವತಿಸಿ ಮೃತದೇಹ ಪಡೆಯುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಅಪ್ಪ, ಅಮ್ಮ ಇಬ್ಬರನ್ನೂ ಕಳೆದುಕೊಂಡಿರುವ ಮಗಳು ಕಣ್ಣೀರಿಟ್ಟಿದ್ದಾರೆ. ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು ಎಂದು ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ಮೊನ್ನೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಆದೇಶಕ್ಕೂ ಆಸ್ಪತ್ರೆ ತಲೆ ಕೆಡಿಸಿಕೊಂಡಿಲ್ಲ. ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದ್ರೂ ಪ್ರಯೋಜನವಾಗಿಲ್ಲ. ಸರ್ಕಾರದ ಆದೇಶಕ್ಕೆ ಈಸ್ಟ್ ಪಾಯಿಂಟ್ ಆಸ್ಪತ್ರೆ ಕ್ಯಾರೆ ಎನ್ನುತ್ತಿಲ್ಲ. 12 ದಿನಗಳಾದ್ರೂ ತಂದೆ ಮೃತದೇಹ ಸಿಗದೆ ಮಗಳ ಕಣ್ಣೀರಿಟ್ಟಿದ್ದಾರೆ. 12 ದಿನಗಳಿಂದ ಹಣಕ್ಕಾಗಿ ಕಂಗಾಲಾಗಿದ್ದು ಹಣದ ವ್ಯವಸ್ಥೆ ಮಾಡಲಾಗದೆ ತಂದೆಯ ಮೃತದೇಹವನ್ನೂ ಪಡೆಯಲಾಗಿದೆ ಮಗಳು ನೊಂದಿದ್ದಾರೆ.

ಆದಷ್ಟು ಬೇಗ ಈ ಘಟನೆ ಸಂಬಂಧ ಅಧಿಕಾರಿಗಳು ಕ್ರಮಕೈಗೊಂಡು ಮೃತ ತಂದೆಯ ಶವವನ್ನು ಮಗಳಿಗೆ ಹಸ್ತಾಂತರಿಸಿ ಕೊರೊನಾದಿಂದ ಬಲಿಯಾದ ವ್ಯಕ್ತಿಯ ಆತ್ಮಕ್ಕೆ ಶಾಂತಿ ನೀಡುವ ಕಾರ್ಯ ಮಾಡಬೇಕಿದೆ.

ಇದನ್ನೂ ಓದಿ: Health Tips: ಕಲ್ಲು ಸಕ್ಕರೆಯಲ್ಲಿನ ಸಿಹಿಯಿಂದ ದೇಹಕ್ಕೆ ಪ್ರಯೋಜನವೇನು? ವೈದ್ಯರ ಸಲಹೆಗಳೇನು?

Published On - 1:09 pm, Wed, 26 May 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು