AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟು 12 ದಿನ ಕಳೆದರೂ ಶವ ನೀಡದೆ ತಕರಾರು.. ಆಸ್ಪತ್ರೆ ವಿರುದ್ಧ ಮಗಳ ಆಕ್ರೋಶ

ಮೇ 14ರಂದೇ ಕೊರೊನಾ ಸೋಂಕಿಗೆ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ ವಿಪರ್ಯಾಸವೆಂದರೆ ಇನ್ನೂ ಕೂಡ ಶವವನ್ನು ಕುಟುಂಬಸ್ಥರಿಗೆ ನೀಡಿಲ್ಲ. ₹1.67 ಲಕ್ಷ ಪಾವತಿಸಿ ಮೃತದೇಹ ಪಡೆಯುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕೊರೊನಾದಿಂದ ಮೃತಪಟ್ಟು 12 ದಿನ ಕಳೆದರೂ ಶವ ನೀಡದೆ ತಕರಾರು.. ಆಸ್ಪತ್ರೆ ವಿರುದ್ಧ ಮಗಳ ಆಕ್ರೋಶ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:May 26, 2021 | 1:10 PM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ ನೀಡಲು ಆಸ್ಪತ್ರೆ ಸಿಬ್ಬಂದಿ ತಕರಾರು ಮಾಡುತ್ತಿರುವ ಅಮಾನವೀಯ  ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಗ್ಯ ಇಲಾಖೆ ಆದೇಶಕ್ಕೆ ಖಾಸಗಿ ಆಸ್ಪತ್ರೆ ಡೋಂಟ್‌ ಕೇರ್ ರೀತಿ ವರ್ತಿಸುತ್ತಿದೆ.

ಮೇ 14ರಂದೇ ಕೊರೊನಾ ಸೋಂಕಿಗೆ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ ವಿಪರ್ಯಾಸವೆಂದರೆ ಇನ್ನೂ ಕೂಡ ಶವವನ್ನು ಕುಟುಂಬಸ್ಥರಿಗೆ ನೀಡಿಲ್ಲ. ₹1.67 ಲಕ್ಷ ಪಾವತಿಸಿ ಮೃತದೇಹ ಪಡೆಯುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಅಪ್ಪ, ಅಮ್ಮ ಇಬ್ಬರನ್ನೂ ಕಳೆದುಕೊಂಡಿರುವ ಮಗಳು ಕಣ್ಣೀರಿಟ್ಟಿದ್ದಾರೆ. ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು ಎಂದು ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ಮೊನ್ನೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಆದೇಶಕ್ಕೂ ಆಸ್ಪತ್ರೆ ತಲೆ ಕೆಡಿಸಿಕೊಂಡಿಲ್ಲ. ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದ್ರೂ ಪ್ರಯೋಜನವಾಗಿಲ್ಲ. ಸರ್ಕಾರದ ಆದೇಶಕ್ಕೆ ಈಸ್ಟ್ ಪಾಯಿಂಟ್ ಆಸ್ಪತ್ರೆ ಕ್ಯಾರೆ ಎನ್ನುತ್ತಿಲ್ಲ. 12 ದಿನಗಳಾದ್ರೂ ತಂದೆ ಮೃತದೇಹ ಸಿಗದೆ ಮಗಳ ಕಣ್ಣೀರಿಟ್ಟಿದ್ದಾರೆ. 12 ದಿನಗಳಿಂದ ಹಣಕ್ಕಾಗಿ ಕಂಗಾಲಾಗಿದ್ದು ಹಣದ ವ್ಯವಸ್ಥೆ ಮಾಡಲಾಗದೆ ತಂದೆಯ ಮೃತದೇಹವನ್ನೂ ಪಡೆಯಲಾಗಿದೆ ಮಗಳು ನೊಂದಿದ್ದಾರೆ.

ಆದಷ್ಟು ಬೇಗ ಈ ಘಟನೆ ಸಂಬಂಧ ಅಧಿಕಾರಿಗಳು ಕ್ರಮಕೈಗೊಂಡು ಮೃತ ತಂದೆಯ ಶವವನ್ನು ಮಗಳಿಗೆ ಹಸ್ತಾಂತರಿಸಿ ಕೊರೊನಾದಿಂದ ಬಲಿಯಾದ ವ್ಯಕ್ತಿಯ ಆತ್ಮಕ್ಕೆ ಶಾಂತಿ ನೀಡುವ ಕಾರ್ಯ ಮಾಡಬೇಕಿದೆ.

ಇದನ್ನೂ ಓದಿ: Health Tips: ಕಲ್ಲು ಸಕ್ಕರೆಯಲ್ಲಿನ ಸಿಹಿಯಿಂದ ದೇಹಕ್ಕೆ ಪ್ರಯೋಜನವೇನು? ವೈದ್ಯರ ಸಲಹೆಗಳೇನು?

Published On - 1:09 pm, Wed, 26 May 21

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ