AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಪೊಟೆರಿಸಿನ್ ಬಿ ಸಿಗುವಂತೆ ಮಾಡಿ ನನ್ನ ತಾಯಿಯ ಜೀವ ಉಳಿಸಿ.. ಅಮ್ಮನನ್ನು ಕಾಪಾಡಲು ಪುತ್ರಿ ಅಕ್ರಂದನ

ನಮ್ಮ ಅಮ್ಮನ ಪ್ರಾಣ ಉಳಿಸಿ ಕೊಡಿ ಪ್ಲೀಸ್. ನಮ್ಮ ಅಮ್ಮನಿಗೆ ಆಂಪೊಟೆರಿಸಿನ್ ಬಿ ಸಿಗುವಂತೆ ಮಾಡಿ. ನಮ್ಮ ಅಮ್ಮನ ಚಿಕಿತ್ಸೆಗೆ ದಯಬಿಟ್ಟು ಯಾರಾದರೂ ಸಹಾಯ ಮಾಡಿ ಎಂದು ಅಂಗಲಾಚಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಬ್ಲಾಕ್ ಫಂಗಸ್ ಸೋಂಕಿತರು ಪರದಾಡುತ್ತಿದ್ದಾರೆ. ಸುಶ್ಮಿತಾ ಎಂಬುವವರು ತಮ್ಮ ಅಮ್ಮನಿಗೆ ಚಿಕಿತ್ಸೆ ಕೊಡಿಸಲಾಗದೆ ಕಂಗಾಲಾಗಿದ್ದಾರೆ.

ಆಂಪೊಟೆರಿಸಿನ್ ಬಿ ಸಿಗುವಂತೆ ಮಾಡಿ ನನ್ನ ತಾಯಿಯ ಜೀವ ಉಳಿಸಿ.. ಅಮ್ಮನನ್ನು ಕಾಪಾಡಲು ಪುತ್ರಿ ಅಕ್ರಂದನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 13, 2021 | 3:04 PM

Share

ಬೆಂಗಳೂರು: ಕೊರೊನಾ, ಬ್ಲಾಕ್ ಫಂಗಸ್ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಕೊರೊನಾದ ಜೊತೆ ಯುದ್ಧ ಮಾಡಿ ಇನ್ನೇನು ಜೀವನ ಶುರು ಮಾಡುವ ಸಂತೋಷದಲ್ಲಿರಬೇಕಾದ್ರೆ ಬ್ಲಾಕ್ ಫಂಗಸ್ ಮತ್ತೆ ಜೀವನವನ್ನು ನರಕಕ್ಕೆ ತಳುತ್ತಿದೆ. ಸದ್ಯ ಈಗ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೆ ಸೋಂಕಿತರು ಇನ್ನೂ ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಇಲ್ಲೊಬ್ಬ ಪುತ್ರಿ ತನ್ನ ತಾಯಿಯ ಪ್ರಾಣ ಉಳಿಸಲು ಸರ್ಕಾರದ ಬಳಿ ಭಿಕ್ಷೆ ಬೇಡ್ತಿದ್ದಾರೆ.

ನಮ್ಮ ಅಮ್ಮನ ಪ್ರಾಣ ಉಳಿಸಿ ಕೊಡಿ ಪ್ಲೀಸ್. ನಮ್ಮ ಅಮ್ಮನಿಗೆ ಆಂಪೊಟೆರಿಸಿನ್ ಬಿ ಸಿಗುವಂತೆ ಮಾಡಿ. ನಮ್ಮ ಅಮ್ಮನ ಚಿಕಿತ್ಸೆಗೆ ದಯಬಿಟ್ಟು ಯಾರಾದರೂ ಸಹಾಯ ಮಾಡಿ ಎಂದು ಅಂಗಲಾಚಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಬ್ಲಾಕ್ ಫಂಗಸ್ ಸೋಂಕಿತರು ಪರದಾಡುತ್ತಿದ್ದಾರೆ. ಸುಶ್ಮಿತಾ ಎಂಬುವವರು ತಮ್ಮ ಅಮ್ಮನಿಗೆ ಚಿಕಿತ್ಸೆ ಕೊಡಿಸಲಾಗದೆ ಕಂಗಾಲಾಗಿದ್ದಾರೆ. ಒಂದು ತಿಂಗಳಿನಿಂದ ನಮ್ಮ ಅಮ್ಮ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಎಂಟು ಲಕ್ಷ ಖರ್ಚು ಮಾಡಿದ್ದೀವಿ. ಒಂದು ತಿಂಗಳ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕಳೆದ ಶನಿವಾರದಿಂದ ಬ್ಲಾಕ್ ಫಂಗಸ್ ತಗುಲಿರುವುದು ಪತ್ತೆಯಾಗಿದೆ.

ಸರ್ಕಾರ ಹೇಳ್ತಿದೆ, ಎಲ್ಲ ಕಡೆ ಆಂಪೊಟೆರಿಸಿನ್ ಬಿ ಸಿಗ್ತಿದೆ ಅಂತ. ಆದರೆ ಎಲ್ಲೂ ಸರಿಯಾಗಿ ಸಿಗ್ತಿಲ್ಲ. ಹೀಗೆ ಮುಂದುವರಿದ್ರೆ ನಮ್ಮ ತಾಯಿಯ ಪ್ರಾಣಕ್ಕೆ ಕುತ್ತು ಬರುತ್ತದೆ. ದಿನ ದಿನ ಈ ಸಮಸ್ಯೆ ಮುಂದುವರಿದ್ರೆ ಬೇರೆ ಬೇರೆ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತೆ. ಆಂಪೊಟೆರಿಸಿನ್ ಬಿ ಒಂದು ವೈಯಲ್ಗೆ ಏಳು ಸಾವಿರ ಬೇಕು. ನಮ್ಮ ಅಮ್ಮನಿಗೆ ಒಂದು ದಿನಕ್ಕೆ ಆರು ವೈಯಲ್ ಕೊಡಬೇಕು. ಇದರಿಂದ ಒಂದು ದಿನಕ್ಕೆ 42 ಸಾವಿರ ರೂಪಾಯಿ ಬೇಕು. ಸರ್ಕಾರ ನಮಗೆ ಸಹಾಯ ಮಾಡಬೇಕು. ಆಂಪೊಟೆರಿಸಿನ್ ಬಿಯನ್ನು ಉಚಿತವಾಗಿ ನೀಡುವ ವ್ಯವಸ್ಥೆ ಮಾಡಬೇಕು. ನಮ್ಮ ಅಮ್ಮನಿಗೆ ಹದಿನಾಲ್ಕು ದಿನಗಳ ಆಂಪೊಟೆರಿಸಿನ್ ಬಿ ಕೊಡಲು ವೈದ್ಯರು ಹೇಳಿದ್ದಾರೆ. ಎಂದು ಬ್ಲಾಕ್ ಫಂಗಸ್ ಸೋಂಕಿನಿಂದ ಬಳಲುತ್ತಿರುವ ಆಸ್ಟಿನ್ ಟೌನ್ ನಿವಾಸಿ ಶಶಿಕಲಾ ಅವರ ಪುತ್ರಿ ಸುಶ್ಮಿತಾ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ

Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ