AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ಕೊರೊನಾ ಚಿಕಿತ್ಸೆ ಕೊಡಿಸಲು ಮಗಳ ಪರದಾಟ; ಕರೆಯನ್ನು ಸ್ವೀಕರಿಸದ ಅಧಿಕಾರಿಗಳು

ನೋಡಲ್ ಅಧಿಕಾರಿಯಾದ ಡಿಸಿಪಿ ಶರನಪ್ಪ ಹಾಗೂ ಬಿಬಿಎಂಪಿಯ ಪಲ್ಲವಿಗೆ ಕರೆ ಮಾಡಿದ್ದಾರೆ. ಆದರೆ ಅವರು ಕರೆಯನ್ನು ಸ್ವೀಕರಿಸುತಿಲ್ಲ. ತಂದೆಗೆ ವಯಸ್ಸು 74 ಆಗಿರುವುದರಿಂದ ಆಕ್ಸಿಜನ್ ಲೆವೆಲ್​ನಲ್ಲಿ ಏರುಪೇರು ಕಾಣಿಸುತ್ತಿದೆ. ಹೀಗಾಗಿ ಮಗಳು ದಿಕ್ಕುತೋಚದ ಪರಿಸ್ಥಿತಿಯಲ್ಲಿದ್ದಾರೆ.

ತಂದೆಗೆ ಕೊರೊನಾ ಚಿಕಿತ್ಸೆ ಕೊಡಿಸಲು ಮಗಳ ಪರದಾಟ; ಕರೆಯನ್ನು ಸ್ವೀಕರಿಸದ ಅಧಿಕಾರಿಗಳು
ಪ್ರಾತಿನಿಧಿಕ ಚಿತ್ರ
sandhya thejappa
|

Updated on:May 02, 2021 | 11:19 AM

Share

ಬೆಂಗಳೂರು: ಕೊರೊನಾ ಆರ್ಭಟ ಎಲ್ಲಿಯವರೆಗೆ ಬಂದು ತಲುಪುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಈಗಾಗಲೇ ಬಾಳಿ ಬದುಕಬೇಕಾದ ಅದೆಷ್ಟೋ ಜೀವಿಗಳನ್ನು ಕೊರೊನಾ ಬಲಿ ತೆಗೆದುಕೊಂಡಿದೆ. ಕೆಲ ಸೋಂಕಿತರು ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದರೆ, ಇನ್ನು ಕೆಲವರು ಬೆಡ್ಗಳು ಸಿಗದೆ ಹಾಗೂ ಸೂಕ್ತ ವ್ಯವಸ್ಥೆಯಿಲ್ಲದೆ ಮೃತಪಡುತ್ತಿದ್ದಾರೆ. ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಂದೆಯನ್ನು ಕೊರೊನಾ ಚಿಕಿತ್ಸೆಗೆ ಒಳಪಡಿಸಲು ಮಗಳು ಪರದಾಟ ಪಡುತ್ತಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ನಿನ್ನೆ (ಮೇ 1) ಸಂಜೆ 74 ವರ್ಷದ ತಂದೆಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಅಪ್ಪನಿಗೆ ಕೊವಿಡ್ ಪಾಸಿಟಿವ್ ಬಂದ ಕಾರಣ ಮಗಳು ಕ್ವಾರಂಟೈನ್ ಆಗುತ್ತಾರೆ. ಕ್ವಾರಂಟೈನ್ನಲ್ಲಿದ್ದೆ ಮಗಳು ಕೊರೊನ ಸಂಬಂಧಿಸಿದ ಎಲ್ಲಾ ರೀತಿಯ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಆದರೆ ಎಷ್ಟು ಬಾರಿ ಫೋನ್ ಕಾಲ್ ಮಾಡಿದರು ಫೋನ್ ತೆಗೆಯುತ್ತಿಲ್ಲ. ಮತ್ತೆ ವಾಪಸ್ ಕರೆಯನ್ನು ಮಾಡುತ್ತಿಲ್ಲ. ಇದರಿಂದ ಕೊರೊನಾ ಸೋಂಕಿಗೆ ಒಳಪಟ್ಟ ಅಪ್ಪನ ಸ್ಥಿತಿ ಕಂಡು ಮಗಳು ದಿಕ್ಕು ತೋಚದೆ ಒದ್ದಾಡುತ್ತಿದ್ದಾರೆ.

ನೋಡಲ್ ಅಧಿಕಾರಿಯಾದ ಡಿಸಿಪಿ ಶರನಪ್ಪ ಹಾಗೂ ಬಿಬಿಎಂಪಿಯ ಪಲ್ಲವಿಗೆ ಕರೆ ಮಾಡಿದ್ದಾರೆ. ಆದರೆ ಅವರು ಕರೆಯನ್ನು ಸ್ವೀಕರಿಸುತಿಲ್ಲ. ತಂದೆಗೆ ವಯಸ್ಸು 74 ಆಗಿರುವುದರಿಂದ ಆಕ್ಸಿಜನ್ ಲೆವೆಲ್​ನಲ್ಲಿ ಏರುಪೇರು ಕಾಣಿಸುತ್ತಿದೆ. ಹೀಗಾಗಿ ಮಗಳು ದಿಕ್ಕು ತೋಚದ ಪರಿಸ್ಥಿತಿಯಲ್ಲಿದ್ದಾರೆ.

ಇದನ್ನೂ ಓದಿ

ಕೊರೊನಾ ಸಾಂಕ್ರಾಮಿಕ ಕಾಯಿಲೆ ಸಮಯದಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ಇಡ್ಲಿ, ದೋಸೆ

ಸರ್ಕಾರದ ಹೊಸ ಮಾರ್ಗಸೂಚಿಗೆ ತರಕಾರಿ ಮಾರಾಟ ಮಹಿಳೆಯರ ಕಣ್ಣೀರು

(daughter is struggling to Corona Treatment for father in bengaluru)

Published On - 11:12 am, Sun, 2 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!