AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಮೊಬೈಲ್​ಗಾಗಿ ಮಗಳ ಪರದಾಟ ಪ್ರಕರಣ; ಆಸ್ಪತ್ರೆಯಲ್ಲೂ ಸಿಗದ ಮೊಬೈಲ್

ಅಮ್ಮನ ಮೊಬೈಲ್​ಗಾಗಿ ಪರದಾಟ ಪಡುತ್ತಿರುವ ಮಗಳು ಹೃತಿಕ್ಷ ಮೊಬೈಲ್ ಸಿಕ್ಕೆ ಸಿಗುತ್ತೆ ಎನ್ನುವ ಭರವಸೆಯಲ್ಲಿದ್ದಾಳೆ. ಪೊಲೀಸರು, ಜಿಲ್ಲಾಧಿಕಾರಿಗಳು ಮೊಬೈಲ್ ಹುಡುಕಿಕೊಡುತ್ತೇವೆ ಎಂದು ಹೇಳಿದ್ದಾರೆ. ನನ್ನ ತಾಯಿಯ ನೆನಪುಗಳಿವೆ. ಹೀಗಾಗಿ ನನಗೆ ಆ ಮೊಬೈಲ್ ಬೇಕೆ ಬೇಕು ಎಂದು ಟಿವಿ9 ಡಿಜಿಟಲ್​ನೊಂದಿಗೆ ಬೇಸರ ವ್ಯಕ್ತಪಡಿಸಿದ್ದಾಳೆ.

ಅಮ್ಮನ ಮೊಬೈಲ್​ಗಾಗಿ ಮಗಳ ಪರದಾಟ ಪ್ರಕರಣ; ಆಸ್ಪತ್ರೆಯಲ್ಲೂ ಸಿಗದ ಮೊಬೈಲ್
ಮೊಬೈಲ್ ಹುಡುಕಿಕೊಡುವಂತೆ ಪುಟ್ಟ ಕಂದಮ್ಮನ ಮನವಿ
sandhya thejappa
|

Updated on: May 24, 2021 | 2:16 PM

Share

ಕೊಡಗು: ಅಮ್ಮ ಇಲ್ಲದ ಮನೆ ಮನೇನೆ ಅಲ್ಲ ಅಂತಾರೆ. ಆದರೆ ಈ ಮಹಾಮಾರಿ ಕೊರೊನಾ ಅದೆಷ್ಟೋ ಜನರ ತಾಯಿಯನ್ನು ಬಲಿ ಪಡೆದು ಮಕ್ಕಳನ್ನು ಅನಾಥರನ್ನಾಗಿ ಮಾಡಿದೆ. ಹೀಗೆ ಕೊಡಗು ಜಿಲ್ಲೆಯ ಗುಮ್ಮನಕೊಲ್ಲಿ ಗ್ರಾಮದ ಪುಟ್ಟ ಬಾಲಕಿ ಕೊರೊನಾ ಸೋಂಕಿನಿಂದ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದಾಳೆ. ಮೊಬೈಲ್​ನಲ್ಲಿ ನನ್ನ ಅಮ್ಮನ ನೆನಪುಗಳಿವೆ. ದಯವಿಟ್ಟು ಅಮ್ಮನ ಮೊಬೈಲ್​ನ ಹಿಂದಿರುಗಿಸಿ ಎಂದು ತಾಯಿಯನ್ನು ಕಳೆದುಕೊಂಡ ಮಗಳು ಕೊಡಗು ಜಿಲ್ಲಾಧಿಕಾರಿಗೆ, ಕೊವಿಡ್ ಆಸ್ಪತ್ರೆ ಸಿಬ್ಬಂದಿಗೆ, ಶಾಸಕರಿಗೆ ಪತ್ರ ಬರೆದಿದ್ದಳು. ಅಮ್ಮನ ನೆನಪಿರುವ ಆ ಮೊಬೈಲ್​ನ ನನಗೆ ಬೇಕು ಹುಡುಕಿಕೊಡಿ ಎಂದು ಪುಟ್ಟ ಹುಡುಗಿ ಅಂಗಲಾಚಿ ಕೇಳಿದ್ದಳು. ಆದರೆ ಮೊಬೈಲ್ ಇನ್ನು ಸಿಗಲೇ ಇಲ್ಲ.

ಅಮ್ಮನ ಮೊಬೈಲ್​ಗಾಗಿ ಪರದಾಟ ಪಡುತ್ತಿರುವ ಮಗಳು ಹೃತಿಕ್ಷ ಮೊಬೈಲ್ ಸಿಕ್ಕೆ ಸಿಗುತ್ತೆ ಎನ್ನುವ ಭರವಸೆಯಲ್ಲಿದ್ದಾಳೆ. ಪೊಲೀಸರು, ಜಿಲ್ಲಾಧಿಕಾರಿಗಳು ಮೊಬೈಲ್ ಹುಡುಕಿಕೊಡುತ್ತೇವೆ ಎಂದು ಹೇಳಿದ್ದಾರೆ. ನನ್ನ ತಾಯಿಯ ನೆನಪುಗಳಿವೆ. ಹೀಗಾಗಿ ನನಗೆ ಆ ಮೊಬೈಲ್ ಬೇಕೆ ಬೇಕು ಎಂದು ಟಿವಿ9 ಡಿಜಿಟಲ್​ನೊಂದಿಗೆ ಬೇಸರ ವ್ಯಕ್ತಪಡಿಸಿದ್ದಾಳೆ.

ನಿನ್ನೆ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದ 10 ಮೊಬೈಲ್​ಗಳನ್ನು ಪರಿಶೀಲಿಸುವಂತೆ ಆಸ್ಪತ್ರೆ ವೈದ್ಯರು ಹೇಳಿದ್ದರು. ಹೀಗಾಗಿ ಮೃತ ಪ್ರಭಾಳ ಸಹೋದರ ಸಂತೋಷ್ ಆಸ್ಪತ್ರೆಗೆ ತೆರಳಿ ಪರಿಶೀಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿರುವ 10 ಮೊಬೈಲ್​ಗಳಲ್ಲಿ ಮೃತ ಮಹಿಳೆಯ ಮೊಬೈಲ್ ಇಲ್ಲ. ಹೀಗಾಗಿ ತಾಯಿಯ ಮೊಬೈಲ್​ಗಾಗಿ ಮಗಳು ಹೃತಿಕ್ಷಾ ಪರಿತಪಿಸುತ್ತಿದ್ದಾಳೆ.

ಮೊಬೈಲ್ ಬಗ್ಗೆ ದೂರು ದಾಖಲಾಗಿದೆ. ಡಿಎಸ್​ಪಿ ಹುಡುಕಿ ಕೊಡುತ್ತೇವೆ ಅಂತ ಹೇಳಿದ್ದಾರೆ. ಆಸ್ಪತ್ರೆಯಲ್ಲಿದ್ದ 11 ದಿನಗಳಲ್ಲಿ 9 ದಿನ ನನ್ನ ಹೆಂಡತಿ ನನ್ನ ಜೊತೆ ಮೊಬೈಲ್ನಲ್ಲಿ ಮಾತನಾಡಿದ್ದಾರೆ. ಹೀಗಾಗಿ ಮೊಬೈಲ್ ಆಸ್ಪತ್ರೆಯಲ್ಲಿಯೇ ಕಳೆದು ಹೋಗಿದೆ. ಕಳೆದು ಹೋದ ಮೊಬೈಲ್​ಗೆ ಕರೆ ಮಾಡಿದ್ದಾಗ ಮೊದಲು ರಿಂಗ್ ಆಗಿತ್ತು. ಆ ನಂತರ ಸ್ವಿಚ್ಛ್ ಆಫ್ ಆಗಿದೆ. ಪತ್ನಿಯ ಫೋಟೋ ಆ ಮೊಬೈಲ್​ನಲ್ಲಿದೆ. ಹೀಗಾಗಿ ಮಗಳು ಆ ಮೊಬೈಲ್ ಬೇಕೆಂದು ಪಟ್ಟು ಹಿಡಿದ್ದಾಳೆ ಅಂತ ಹೃತಿಕ್ಷಾ ತಂದೆ ಟಿವಿ9 ಡಿಜಿಟಲ್​ಗೆ ತಿಳಿಸಿದರು.

ನಾವು ಕೂಲಿ ಕೆಲಸ ಮಾಡಿ ಬದುಕುತ್ತಿದ್ದೇವೆ. ಲಾಕ್​ಡೌನ್​ನಿಂದ 20 ದಿನಗಳಾಯ್ತು ಯಾವ ಕೆಲಸವೂ ಇಲ್ಲ. ತಿನ್ನುವುದಕ್ಕೂ ಕಷ್ಟವಾಗಿದೆ. ಈ ನಡುವೆ ಏಳೆಂಟು ಸಾವಿರ ರೂಪಾಯಿಯ ಮೊಬೈಲ್ ತೆಗೆದುಕೊಳ್ಳುವ ಸಾಮರ್ಥ್ಯನೂ ನಮಗೆ ಇಲ್ಲ. ಯಾರಾದರೂ ಮೊಬೈಲ್ ತೆಗೆದುಕೊಂಡರೆ ದಯವಿಟ್ಟು ಕೊಡಿ. ಅವರ ವಿರುದ್ಧ ಕೇಸ್​ ಹಾಕಲ್ಲ ಎಂದು ಮೃತ ಮಹಿಳೆಯ ಪತಿ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ

ಕೊರೊನಾಕ್ಕೆ ತಾಯಿ ಕಳೆದುಕೊಂಡ ಹುಡುಗಿಯ ಭಾವುಕ ಪತ್ರ: ಅಮ್ಮನ ಮೊಬೈಲ್ ಸಿಕ್ಕರೆ ಹಿಂದಿರುಗಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಸುಳ್ಳು ಸುದ್ದಿಗಳ ಹಾವಳಿ: ಧಾರವಾಡ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಆತಂಕ

(daughter who was struggle for her mother mobile could not find mobile at kodagu)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?