AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ: ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಸಾವು

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ. 

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ: ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಸಾವು
ಹಜರತ್ ಬಿಲಾಲ್ ಮೃತ ಬಾಲಕ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Mar 17, 2024 | 8:42 PM

Share

ದಾವಣಗೆರೆ, ಮಾರ್ಚ್​ 17: ಪಾನಿಪೂರಿ (Panipuri) ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ಮಾರ್ಚ್ 15ರಂದು ಜಿಲ್ಲೆ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ರಂಜಾನ್ ಹಬ್ಬ ಹಿನ್ನೆಲೆ ಮಕ್ಕಳು ಉಪವಾಸ ಇದ್ದರು. ನಂತರ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು.

ವಾಂತಿ, ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

ಕಾರು ಸರ್ವಿಸ್ ಸರಿಯಾಗಿ ಮಾಡಿಲ್ಲ ಎಂದು ಮಾಲೀಕನ ರಂಪಾಟ

ನೆಲಮಂಗಲ: ಕಾರು ಸರ್ವಿಸ್ ಸರಿಯಾಗಿ ಮಾಡಿಲ್ಲ ಎಂದು ತನ್ನ ಕಾರಿನ ಗ್ಲಾಸ್​ ಒಡೆದು ಮಾಲೀಕ ರಂಪಾಟ ಮಾಡಿರುವಂತಹ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ಘಟನೆ ನಡೆದಿದೆ. ಹುಂಡೈ ಕಾರ್​ ಸರ್ವಿಸ್ ಸೆಂಟರ್​ನಲ್ಲಿ ಹೈಡ್ರಾಮಾವೇ ನಡೆದಿದೆ.

ಇದನ್ನೂ ಓದಿ: ಹಣ ಕಳ್ಳತನವಾಗಿದೆ ಎಂದು ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದ ಶಿಕ್ಷಕಿಯರು, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಾರಿನ ಗ್ಲಾಸ್​ ಒಡೆದು ಹಾಕಿ ವೀರೇಶ್ ಹೈಡ್ರಾಮಾ ಮಾಡಿದ್ದಾನೆ. ಸರ್ವಿಸ್ ಸೆಂಟರ್ ಕ್ಲೋಸ್​ ಮಾಡಬೇಕೆಂದು ಪಟ್ಟು ಹಿಡಿದಿದ್ದಾನೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ಕಂಡುಬಂದಿದೆ.

ಬೈಕ್ ಸ್ಕಿಡ್ ಆಗಿ ಬಿದ್ದು ASI ಸಾವು

ಬೆಳಗಾವಿ: ಕರ್ತವ್ಯ ಮುಗಿಸಿ ಮನೆಗೆ ವಾಪಸಾಗ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ASI ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ದೊಡವಾಡ ಪೊಲೀಸ್ ಠಾಣೆ ವಿಜಯಕಾಂತ ಮಿಕಲಿ(51) ಮೃತ ಎಎಸ್​ಐ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

2 ಕೆಎಸ್​ಆರ್​ಟಿಸಿ ಬಸ್​ಗಳು ಡಿಕ್ಕಿ: 15 ಜನರಿಗೆ ಗಾಯ

ತುಮಕೂರು: ಜಿಲ್ಲೆಯ ಕೊರಟಗೆರೆ ಬಸ್​ ನಿಲ್ದಾಣದಲ್ಲಿ 2 ಕೆಎಸ್​ಆರ್​ಟಿಸಿ ಬಸ್​ಗಳು ಡಿಕ್ಕಿಯಾಗಿ 15 ಜನರಿಗೆ ಗಾಯವಾಗಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೌರಿಬಿದನೂರುನಿಂದ ತುಮಕೂರಿಗೆ ಹೋಗುತ್ತಿದ್ದ ಬಸ್​ಗೆ ತುಮಕೂರಿನಿಂದ ಪಾವಗಡಕ್ಕೆ ತೆರಳುತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More