AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಪಾರಕ್ಕೆಂದು ದೂರದ ಊರಿನಿಂದ ದಾವಣಗೆರೆಗೆ ಬಂದಿದ್ದ ದಂಪತಿಯ ಮಗು ಕಿಡ್ನ್ಯಾಪ್

ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಒಂದು ವರ್ಷದ ಮಗುವಿನ ಅಪಹರಣ ಘಟನೆ ನಡೆದಿದ್ದು, ಒಂದು ತಿಂಗಳಾದರೂ ಪೊಲೀಸರು ಮಗುವನ್ನು ಪತ್ತೆಹಚ್ಚಿಲ್ಲ. ಅಲೆಮಾರಿ ದಂಪತಿಯ ಮಗುವಿನ ಅಪಹರಣದಿಂದಾಗಿ ಪೋಷಕರು ತೀವ್ರ ಆತಂಕಕ್ಕೀಡಾಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮಂಡ್ಯದಲ್ಲಿ ಹೆಜ್ಜೇನು ದಾಳಿಗೆ ರೈತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ವ್ಯಾಪಾರಕ್ಕೆಂದು ದೂರದ ಊರಿನಿಂದ ದಾವಣಗೆರೆಗೆ ಬಂದಿದ್ದ ದಂಪತಿಯ ಮಗು ಕಿಡ್ನ್ಯಾಪ್
ವ್ಯಾಪಾರಕ್ಕೆಂದು ದೂರದ ಊರಿನಿಂದ ದಾವಣಗೆರೆಗೆ ಬಂದಿದ್ದ ದಂಪತಿಯ ಮಗು ಕಿಡ್ನ್ಯಾಪ್
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 16, 2024 | 7:04 PM

ದಾವಣಗೆರೆ, ಡಿಸೆಂಬರ್​ 16: ಅಲೆಮಾರಿ ದಂಪತಿಯ 1 ವರ್ಷ ಗಂಡು ಮಗುವನ್ನು (child) ಕಿರಾತಕರು ಅಪಹರಣ ಮಾಡಿರುವಂತಹ ಘಟನೆ ನ.16ರಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹರಪನಹಳ್ಳಿ ಪೊಲೀಸ್ ಠಾಣೆಗೆ ಮಗವಿನ ತಂದೆ ಯುವರಾಜ್ ದೂರು ನೀಡಿದ್ದರು. ದೂರು ನೀಡಿ 1 ತಿಂಗಳಾದರೂ ಪೊಲೀಸರು ಪತ್ತೆಹಚ್ಚಿಲ್ಲ. ಹೀಗಾಗಿ ಹೆತ್ತವರು ಅಳಲು ತೋಡಿಕೊಂಡಿದ್ದಾರೆ.

ಅಳಲು ತೋಡಿಕೊಂಡ ಹೆತ್ತವರು 

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿಕ್ಕಳ್ಳಿ ಮೂಲದ ಯುವರಾಜ್, ಸಾರಿಕಾ ದಂಪತಿ, ಮಗು ಅಪಹರಣವಾಗಿ 1 ತಿಂಗಳಾದರೂ ಸುಳಿವು ಸಿಕ್ಕಿಲ್ಲವೆಂದು ಅಳಲು ತೋಡಿಕೊಂಡಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಚಿಕ್ಕಳ್ಳಿ ಮೂಲದ ಕುಟುಂಬ ಗಂಧದ ಎಣ್ಣೆ ವ್ಯಾಪಾರಕ್ಕೆಂದು ಹರಪನಹಳ್ಳಿಗೆ ಬಂದಿದ್ದರು.

ಇದನ್ನೂ ಓದಿ: ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು: ಸಾವಿನಲ್ಲೂ ಒಂದಾದ ದಂಪತಿ

ಈ ವೇಳೆ ಹರಪನಹಳ್ಳಿಯ ಯಮಹಾ ಶೋರೂಮ್ ಬಳಿ ಟೆಂಟ್ ಹಾಕಿದ್ದರು. ಪುತ್ರ ಆರ್ಯನ್ ಜತೆ ಟೆಂಟ್​ನಲ್ಲೇ ಯುವರಾಜ್, ಸಾರಿಕಾ ನೆಲೆಸಿದ್ದರು. ನವೆಂಬರ್ 16ರ ರಾತ್ರಿ ಟೆಂಟ್​ನಲ್ಲಿ ಮಲಗಿದ್ದಾಗ ಮಗುವಿನ ಅಪಹರಣ ಮಾಡಲಾಗಿದೆ.

ಹೆಜ್ಜೇನು ದಾಳಿಗೆ ರೈತ ಸಾವು

ಮತ್ತೊಂದು ಪ್ರಕಣದಲ್ಲಿ ಕಂದೇಗಾಲ ಗ್ರಾಮದಲ್ಲಿ ಹೆಜ್ಜೇನು ದಾಳಿಗೆ ರೈತ ಸಾವನ್ನಪ್ಪಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಂದೇಗಾಲದಲ್ಲಿ ನಡೆದಿದೆ. ರೈತ ನಿಂಗೇಗೌಡ (50) ಮೃತ ರೈತ. ರೇಷ್ಮೆ ಸೊಪ್ಪು ಕಟಾವು ವೇಳೆ ನಿಂಗೇಗೌಡರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಈ ವೇಳೆ ಅಸ್ವಸ್ಥರಾಗಿದ್ದ ಅವರನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಹಾಡುಹಗಲೇ ಕುರಿಗಳನ್ನು ಹೊತ್ತೊಯ್ದ ಕಳ್ಳರು 

ಮನೆಯ ಮುಂದೆ ಕಟ್ಟಿದ್ದ ಎರಡು‌ ಕುರಿಗಳನ್ನು ಹಾಡುಹಗಲೇ ಕಳ್ಳರು ಹೊತ್ತೊಯ್ದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಟೋದಲ್ಲಿ ಬಂದು‌ ಜ್ಞಾನೇಶ್ ಎಂಬುವವರಿಗೆ ಸೇರಿದ್ದ ಕುರಿಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳತನದ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?